ಖಾತೆಗಾಗಿ ಹಠ ಮಾಡಲ್ಲ: ರಮೇಶ ಜಾರಕಿಹೊಳಿ


Team Udayavani, Feb 10, 2020, 11:59 AM IST

STATE-TDY-4

ಗೋಕಾಕ: ನಾನು ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕ ಅಮಿತ್‌ ಶಾ ಅವರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ. ಮುಂದೆಯೂ ಅವರನ್ನು ನಂಬುತ್ತೇನೆ. ಹೀಗಾಗಿ ನನಗೆ ಇಂಥದ್ದೇ ಖಾತೆ ಬೇಕು ಎಂಬ ಬೇಡಿಕೆ ಇಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ನೂತನ ಸಚಿವರಾದ ನಂತರ ಮೊದಲ ಬಾರಿಗೆ ಹೆಲಿಕಾಪ್ಟರ್‌ನಲ್ಲಿ ಭಾನುವಾರ ನಗರಕ್ಕೆ ಆಗಮಿಸಿದ ಅವರು, ಬೆಂಬಲಿಗರು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಸ್ವೀಕರಿಸಿ ನಂತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ನನಗೆ ಬಂದ ಸಂಕಷ್ಟ ಯಾವ ವೈರಿಗೂ ಬರಬಾರದು. ರಾಜಕೀಯದಲ್ಲಿ ನಾವು ನಡೆದಿದ್ದೇ ದಾರಿ ಅಂದುಕೊಂಡರೆ ತಪ್ಪು ಎಂದರು.

ನಾನೊಬ್ಬ ಪರಿಪೂರ್ಣ ನಾಯಕನಾಗಲು ಡಿ.ಕೆ.ಶಿವಕುಮಾರ್‌ ಕಾರಣ. ಅವರು ಬೆಳಗಾವಿ ಜಿಲ್ಲೆಯಲ್ಲಿ ಮೂಗು ತೂರಿಸುವುದನ್ನು ಬಿಟ್ಟಿದ್ದರೆ ನಾನು ರಾಜ್ಯಮಟ್ಟದ ನಾಯಕನಾಗಲು ಸಾಧ್ಯವಾಗುತ್ತಿರಲಿಲ್ಲ, ಅವರ ವಿರೋಧದಿಂದಲೇ ನಾನು ನಾಯಕನಾಗಿ ಬೆಳೆದೆ. ಇದಕ್ಕಾಗಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎನ್ನುವ ಮೂಲಕ ಡಿಕೆಶಿಗೆ ಟಾಂಗ್‌ ನೀಡಿದರು.

ಸಮ್ಮಿಶ್ರ ಸರ್ಕಾರದಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ನಾವು ಪಕ್ಷ ಬಿಡ ಬೇಕಾಯಿತು. ನಮ್ಮೊಂದಿಗೆ ಆಗ 36 ಶಾಸಕರು ಇದ್ದರು. ಕೊನೆಗೆ ಉಳಿದಿದ್ದು 17 ಜನ ಮಾತ್ರ. ಬಹುತೇಕ ಎಲ್ಲರೂ ಹಿಂದುಳಿದ ವರ್ಗದ ಶಾಸಕರೇ ಇದ್ದೆವು. ಆದರೆ ಆಗ ಶಾಸಕರ ಸಂಖ್ಯೆ ಕಡಿಮೆಯಾದರೂ ನಾವು ಹಿಂದೆ ಸರಿಯಲಿಲ್ಲ. ಇದರಿಂದ ಯಶಸ್ಸು ಸಿಕ್ಕಿದೆ ಎಂದು ಬೀಗಿದರೆ ನಾವು ಮೂರ್ಖ ರು. ಈಗ ನಾವು ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಬೇಕಿದೆ ಎಂದರು.

ಕಾಂಗ್ರೆಸ್‌ ನಾಯಕರು ನನ್ನನ್ನು ನಿರ್ಲಕ್ಷಿಸಿದ್ದು ಒಳ್ಳೆಯದೇ ಆಗಿದೆ. ನನ್ನ ಕನಸಿನಲ್ಲೂ ಬಿಜೆಪಿಯಲ್ಲಿ ಸಚಿವನಾಗುತ್ತೇನೆಂದು ಉಹಿಸಿರಲಿಲ್ಲ. ಮಹೇಶ ಕುಮಟಳ್ಳಿ ಅಂತಹ ಒಂದಿಬ್ಬರು ವಿಶ್ವಾಸಿಕ ಜನರು ಜೊತೆಗಿದ್ದರೆ ಜಗತ್ತು ಗೆಲ್ಲಬಹುದು. ಚುನಾವಣೆಯಲ್ಲಿ ನನ್ನ ವಿರುದ್ಧ ಅನೇಕ ಷಡ್ಯಂತ್ರ ಮಾಡಿದರೂ ದೇವರು ಹಾಗೂ ಕ್ಷೇತ್ರದ ಜನತೆಯ ಆಶೀರ್ವಾದ ನನ್ನನ್ನು ಕೈ ಬಿಡಲಿಲ್ಲ, ಗೋಕಾಕ್‌ನಲ್ಲಿ ನಾನೇನಾದರೂ ಸೋತರೆ ಸೊಕ್ಕಿನಿಂದ ಮಾತ್ರ ಸೋಲಬೇಕು. ಮುಂದೆ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದರೆ ಸೋಲು ಬರಲು ಸಾಧ್ಯವೇ ಇಲ್ಲ ಎಂದರು.

ಖಾತೆ ಬಗ್ಗೆ ಚಿಂತೆ ಇಲ್ಲ: ನನಗೆ ನೀರಾವರಿ ಖಾತೆ ಕೊಡ್ತಾರೋ, ಗ್ರಂಥಾಲಯ ಖಾತೆ ಕೊಡುತ್ತಾರೋ ಗೊತ್ತಿಲ್ಲ. ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಮ್ಮ ವಿಶ್ವಾಸಕ್ಕೆ ಧಕ್ಕೆ ತರಲಾರರು ಎಂಬ ವಿಶ್ವಾಸ ನಮ್ಮಲ್ಲಿದೆ ಎಂದು ರಮೇಶ ಜಾರಕಿಹೊಳಿ ತಮಗೆ ಮಹತ್ವದ ಖಾತೆ ನೀರಾವರಿಯ ಬಗ್ಗೆ ಆಸೆ ಇದೆ ಎಂದು ಸೂಕ್ಷ್ಮವಾಗಿ ಹೇಳಿದರು.

ಆರ್‌ಎಸ್‌ಎಸ್‌ ಮುಖಂಡರ ಸಲಹೆಯಂತೆ 2 ತಿಂಗಳಿಂದ ನಾನು ಮಾಧ್ಯಮ ಗಳಿಗೆ ಹೇಳಿಕೆ ನೀಡಿಲ್ಲ, ನಾನೀಗ ಬದಲಾವಣೆಯಾಗಿದ್ದೇನೆ. ರಾಜಕೀಯವಾಗಿ ಬಹಳಷ್ಟು ಪಳಗಿದ್ದೇವೆ. ಈಗ ಒಳ್ಳೆಯ ಪಕ್ಷ ಸೇರಿದ್ದೇವೆ. ಈ ಪಕ್ಷದ ಶಿಸ್ತು ಕಲಿತು ಸಂಯಮದಿಂದ ನಡೆಯುತ್ತೇನೆ ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.