ಮನ್ಸೂರ್ ಯಾರು ಎಂಬುದೇ ಗೊತ್ತಿಲ್ಲ: ರೆಹಮಾನ್ ಖಾನ್
Team Udayavani, Jun 24, 2019, 3:06 AM IST
ಬೆಂಗಳೂರು: “ನನಗೂ ಐಎಂಎ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ. ಮನ್ಸೂರ್ ಖಾನ್ ಯಾರು ಎನ್ನುವುದೇ ನನಗೆ ಗೊತ್ತಿಲ್ಲ’ ಎಂದು ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಐಎಂಎ ಪ್ರಕರಣದಲ್ಲಿ ನೀವು ಬಚಾವಾದಿರಿ ಎಂದು ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ವೀಡಿಯೋದಲ್ಲಿ ತಮ್ಮ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, “ಮನ್ಸೂರ್ ಖಾನ್ ನನ್ನ ಮೇಲೆ ಆರೋಪ ಮಾಡಿಲ್ಲ. ನೀವು ತಪ್ಪಿಸಿಕೊಂಡಿದ್ದೀರಿ ಎಂದು ಹೇಳಿದ್ದಾರಷ್ಟೇ.
ನಾನು ಹಣ ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿಲ್ಲ. ಯಾರು, ಯಾರ ಮೇಲಾದರೂ ಆರೋಪ ಮಾಡಬಹುದು. ಆರೋಪ ಮಾಡುವುದಕ್ಕೆ ಬೆಲೆ ಇದೆಯೇ?’ ಎಂದು ರೆಹಮಾನ್ ಖಾನ್ ಪ್ರಶ್ನಿಸಿದ್ದಾರೆ. “ಐಎಂಎ ಪ್ರಕರಣದಲ್ಲಿ ನೂರಾರು ಜನರಿಗೆ ಅನ್ಯಾಯವಾಗಿದೆ.
ಈ ಪ್ರಕರಣದಲ್ಲಿ ಸತ್ಯಾ ಸತ್ಯತೆ ಹೊರ ಬರಬೇಕು. ನನ್ನ ಮೇಲೆ ಯಾವ ತನಿಖೆ ಬೇಕಾದರೂ ಮಾಡಲಿ, ಎಸ್ಐಟಿ ತನಿಖೆಗೂ ನಾನು ಸಹಕರಿಸುತ್ತೇನೆ. ಅದು ವಂಚನೆಯ ಕಂಪನಿ ಎನ್ನುವುದು ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್ಗೂ ಗೊತ್ತಿದೆ. ಆದರೂ, ಯಾರೂ ತಡೆಯುವ ಪ್ರಯತ್ನ ಮಾಡಲಿಲ್ಲ.
ನನಗೂ, ಆ ಸಂಸ್ಥೆಗೂ ಸಂಬಂಧವೇ ಇಲ್ಲ. ನಾನು ಸಮುದಾಯದ ನಾಯಕ ಆದ ಮಾತ್ರಕ್ಕೆ ನನ್ನನ್ನು ಪ್ರಕರಣದಲ್ಲಿ ಎಳೆದು ತರುವುದು ಎಷ್ಟು ಸರಿ?. ನನಗೆ ಯಾವುದೇ ಭಯವಿಲ್ಲ. ಜನರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಹಾಗೂ ಸರ್ಕಾರ ಮಾಡಬೇಕು’ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್