“ಮುಂದಿನ ಮುಖ್ಯಮಂತ್ರಿ” ಹೇಳಿಕೆ ಕೊಡಬೇಡಿ: ಶಾಸಕರಲ್ಲಿ ಸಿದ್ದರಾಮಯ್ಯ ಮನವಿ
Team Udayavani, Jun 24, 2021, 3:15 PM IST
ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರಲ್ಲಿ ಮನವಿ ಮಾಡಿದ್ದಾರೆ.
“ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಡೆಲ್ಟಾ ಪ್ಲಸ್ ಹರಡದಂತೆ ಕೂಡಲೇ ಕ್ರಮ ವಹಿಸಿ: ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಖಾನ್, ರಾಘವೇಂದ್ರ ಹಿಟ್ನಾಳ್ ಸೇರದಂತೆ ಕೆಲ ಶಾಸಕರು ಸಿದ್ದರಾಮಯ್ಯನವರೇ ನಮ್ಮ ಮುಂದಿನ ಸಿಎಂ ಎಂದು ಹೇಳಿಕೆ ನೀಡಿದ್ದರು. ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಕೆಲ ದಿನಗಳ ಹಿಂದೆ ಸೂಚಿಸಿದ್ದರು.
ಇದನ್ನೂ ಓದಿ:ಸುತ್ತೂರು ಮಠಕ್ಕೆ ಪರಮೇಶ್ವರ್ ಭೇಟಿ : ಮುಂದಿನ ಸಿಎಂ ಎಂದು ಕೂಗಿದ ಅಭಿಮಾನಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ