ಮನೆ ಸಿಕ್ಕ ಬಡವರು ಮನೆ ಮಾರಿ ಬೀದಿಗೆ ಬಂದು ನಿಲ್ಲಬೇಡಿ : ಸಚಿವ ಸೋಮಣ್ಣ
Team Udayavani, Dec 25, 2021, 8:30 PM IST
ವಿಜಯಪುರ : ರಾಜ್ಯದಲ್ಲಿ ರಾಜೀವ ಗಾಂಧಿ ವಸತಿ ಯೋಜನೆಯಲ್ಲಿ ಸೂರಿಲ್ಲದ ಅರ್ಹ ಕಡು ಬಡವರಿಗೆ ಜ.25 ರೊಳಗೆ ಮನೆ ಹಂಚಿಕೆ ಮಾಡುವ ಗುರಿ ಇರಿಸಿದ್ಧೇವೆ. ಮನೆ ಸಿಕ್ಕವರು ಅವುಗಳನ್ನು ಮಾರಿಕೊಂಡು ಮತ್ತೆ ಬೀದಿಯಲ್ಲಿ ನಿರಾಶ್ರಿತರಾಗಿ ನಿಲ್ಲಬೇಡಿ ಎಂದು ವಸತಿ ಸಚಿವ ವಿ.ಸೋಮಣ್ಣ ಕಿವಿ ಮಾತು ಹೇಳಿದರು.
ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವಿಜಯಪುರ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ತಮ್ಮ ಇಲಾಖೆಯಿಂಧ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಿ, ಸೂರಿಲ್ಲದವರಿಗೆ ಹಂಚುವ ಗುರಿ ಇದೆ. ಇದರಲ್ಲಿ ರಾಜೀವಗಾಂಧಿ ವಸತಿ ಯೋಜನೆಯಲ್ಲಿ 6632 ಕೋಟಿ ರೂ. ವೆಚ್ಚದಲ್ಲಿ ಮನೆಗಳ ನಿರ್ಮಾಣ ನಡೆದಿದೆ ಎಂದರು.
ಬಡವರ ಪರ ಕಾಳಜಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಳಗೇರಿಗಳ ಅಭಿವೃದ್ಧಿ ಮಾಡಲು ನನಗೆ ಸೂಚಿಸಿದ್ದಾರೆ. ಅವರ ಆಶಯದಂತೆ ನಾನು ವಿಜಯಪುರ ಜಿಲ್ಲೆಯಿಂದಲೇ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ ಎಂದರು.
ವಿವಿಧ ವಸತಿ ಯೋಜನೆಗಳಲ್ಲಿ ವಿಜಯಪುರ ಜಿಲ್ಲೆಗೆ 1285 ಮನೆಗಳನ್ನು ನೀಡಿದ್ದು, ರಾಜ್ಯದ ನಗರ ಪ್ರದೇಶದಲ್ಲಿ 3.40 ಲಕ್ಷ ಮನೆಗಳನ್ನು ನಿರ್ಮಿಸಲಾಗುತ್ತಿದೆ. ವಿಜಯಪುರ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಎಸ್ಪಿ ಅವರು ಅರ್ಹ ಫಲಾನುಭವಿಗಳಿಗೆ ಮನೆಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು