Lok Sabha Polls 2024: ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್
ವಿಧಾನಸಭೆ ತಂತ್ರ ಲೋಕಸಭಾ ಚುನಾವಣೆಯಲ್ಲೂ ಮುಂದುವರಿಕೆ; ವಿತರಣೆಗೆ ಕಾರ್ಯಕರ್ತರ ತಂಡ ರಚನೆ
Team Udayavani, Apr 13, 2024, 12:53 AM IST
ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಜನರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಈಗ ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಮತ್ತೆ ಅದೇ ತಂತ್ರವನ್ನು ಅನುಸರಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಈಗಾಗಲೇ ಪಕ್ಷದ ಹೈಕಮಾಂಡ್ ವಿದ್ಯಾರ್ಥಿಗಳ ಸಾಲಮನ್ನಾ, ಪ್ರತಿ ಬಡ ಕುಟುಂಬದ ಓರ್ವ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ನೀಡುವ “ಮಹಾಲಕ್ಷ್ಮೀ’ ಯೋಜನೆ ಸಹಿತ ಹಲವು ಗ್ಯಾರಂಟಿಗಳನ್ನು ಘೋಷಿಸಿದ್ದು, ಈ ಗ್ಯಾರಂಟಿ ಕಾರ್ಡ್ಗಳನ್ನು ಮನೆಮನೆಗೆ ತಲುಪಿಸಲಾಗುವುದು. ಇದಕ್ಕಾಗಿ ಕಾರ್ಯಕರ್ತರ ತಂಡಗಳನ್ನು ರಚಿಸಿ, ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿಗೆ ಸೊರಕೆ ಸವಾಲು
ರಾಜ್ಯ ಸರಕಾರದ ಗ್ಯಾರಂಟಿಗಳು ಜನರಿಗೆ ತಲುಪಿಯೇ ಇಲ್ಲ ಎಂದು ಆರೋಪಿಸುವ ಬಿಜೆಪಿ ಸ್ವತಃ ಆಯೋಜಿಸುವ ಮಹಿಳಾ ಸಮಾವೇಶದಲ್ಲೇ ಗ್ಯಾರಂಟಿ ಯೋಜನೆಗಳು ಯಾರಿಗೆ ತಲುಪಿಲ್ಲ ಎಂಬುದನ್ನು ಲೆಕ್ಕಹಾಕಲಿ ಎಂದು ಸೊರಕೆ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಸರಕಾರ ನುಡಿದಂತೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಆದರೂ ಬಿಜೆಪಿಯು ಈ ಗ್ಯಾರಂಟಿಗಳು ಜನರಿಗೆ ಸರಿಯಾಗಿ ತಲುಪಿಯೇ ಇಲ್ಲ ಎಂದು ಆರೋಪಿಸುತ್ತಿದೆ. ಈಗ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಯೋಜಿಸುವ ಮಹಿಳಾ ಸಮಾವೇಶಗಳಲ್ಲೇ ಇದರ ಪರೀಕ್ಷೆ ನಡೆಯಲಿ. ಎಷ್ಟು ಜನರಿಗೆ ಗ್ಯಾರಂಟಿ ಯೋಜನೆಗಳು ಬಂದಿಲ್ಲ ಎಂಬುದರ ಬಗ್ಗೆ ಲೆಕ್ಕಹಾಕಲಿ ಎಂದು ಕಾಂಗ್ರೆಸ್ ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು. ರಾಜ್ಯಸಭೆ ಮಾಜಿ ಸದಸ್ಯ ಎಲ್. ಹನುಮಂತಯ್ಯ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.