ಸಂತಸದಲ್ಲಿದ್ದ ಕಾರ್ಮಿಕರಿಗೆ ಶಾಕ್ ನೀಡಿದ ಟಿಕೆಟ್ ದರ: ಕೊನೆಗೂ ಸಮಸ್ಯೆ ಬಗೆಹರಿಸಿದ ಸರಕಾರ
Team Udayavani, May 2, 2020, 12:57 PM IST
ಬೆಂಗಳೂರು: ಕೋವಿಡ್19 ಲಾಕ್ ಡೌನ್ ಕಾರಣದಿಂದ ಬೇರೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಿಲುಕಿರುವ ಜನರನ್ನು ಅವರ ಊರಿಗೆ ಕಳುಹಿಸಲು ಸರಕಾರ ತಯಾರಿ ನಡೆಸಿದೆ. ಆದರೆ ಒಂದು ತಿಂಗಳಿನಿಂದ ಕಷ್ಟ ಪಡುತ್ತಿರುವ ಜನರಿಗೆ ಟಿಕೆಟ್ ದರ ದುಪ್ಪಟ್ಟು ಮಾಡಿ ಶಾಕ್ ನೀಡಿದೆ.
ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಇಂದು ಬೆಳಿಗ್ಗಿನಿಂದಲೇ ಸಾವಿರಾರು ಕಾರ್ಮಿಕರು ಸೇರಿದ್ದು, ಊರಿಗೆ ತೆರಳಲು ಸಜ್ಜಾಗಿದ್ದಾರೆ. ಒಂದು ತಿಂಗಳಿಂದ ಕೆಲಸವಿಲ್ಲದೇ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಸ್ವಂತ ಖರ್ಚಿನಲ್ಲಿ ತೆರಳಬೇಕು ಎಂದು ಸರ್ಕಾರ ಹೇಳಿದ್ದು ಆಘಾತ ತಂದಿತ್ತು. ಅದರೊಂದಿಗೆ ಬಸ್ ದರವನ್ನು ದುಪ್ಪಟ್ಟು ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿತ್ತು.
ಸದ್ಯ ಪರಿಸ್ಥಿತಿ ಅರ್ಥ ಮಾಡಿಕೊಂಡಿರುವ ಸರಕಾರ ಕಾರ್ಮಿಕರಿಗೆ ಏಕ ಶುಲ್ಕ ದರದಲ್ಲಿ ಊರಿಗೆ ತೆರಳಲು ಅವಕಾಶ ನೀಡಿದೆ. ಅಂದರೆ ಮಾಮೂಲಿ ದರದಲ್ಲೇ ಕಾರ್ಮಿಕರು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಮನೆಗೆ ತೆರಳಬಹುದು.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುರೇಶ್ ಕುಮಾರ್, “ಕೆಎಸ್ಆರ್ ಟಿ ಸಿ ಬಸ್ ಗಳ ಮೂಲಕ ತಮ್ಮ-ತಮ್ಮ ಸ್ಥಳಗಳಿಗೆ ಹೋಗಲು ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾದಿರುವ “ಕಾರ್ಮಿಕ” ರಿಗೆ Single Fare ದರದಲ್ಲಿ ಹೋಗಲು ಅನುವು ಮಾಡಿಕೊಡಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿದ್ದಾರೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು