ಸುಶಿಕ್ಷಿತರಲ್ಲಿಯೇ ಹೆಚ್ಚುತ್ತಿದೆ ವರದಕ್ಷಿಣೆ ಪಿಡುಗು


Team Udayavani, Aug 8, 2022, 5:05 PM IST

16

ಬೆಂಗಳೂರು: ರಾಜ್ಯದಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಳವಾದರೂ ಸಮಾಜದಲ್ಲಿ ಆಳವಾಗಿ ಬೇರೂರಿರುವ ವರದಕ್ಷಿಣೆ ಪಿಡುಗಿಗೆ ಕಡಿವಾಣ ಬಿದ್ದಿಲ್ಲ. ಈ ಪಿಡುಗಿಗೆ ಕಳೆದ 11 ವರ್ಷಗಳಲ್ಲಿ ಬರೋಬ್ಬರಿ 2,821 ಮಹಿಳೆಯರು ಬಲಿಯಾಗಿದ್ದಾರೆಂಬ ಸಂಗತಿ ಬಹಿರಂಗಗೊಂಡಿದೆ.

ಪತಿ ಮಹಾಶಯರು ತವರಿನಿಂದ ವರದಕ್ಷಿಣೆ ತರುವಂತೆ ಪತ್ನಿಯರಿಗೆ ಚಿತ್ರ ವಿಚಿತ್ರ ಕಿರುಕುಳ ನೀಡುವ ಪ್ರವೃತ್ತಿ ಮುಂದುವರಿ ದಿದೆ. ಪತಿಯ ಕುಟುಂಬಸ್ಥರ ಹಣದ ವ್ಯಾಮೋಹಕ್ಕೆ ಮಹಿಳೆಯ ಬಾಳು ನರಕದ ಕೂಪವಾಗುತ್ತಿದೆ. ವರದಕ್ಷಿಣೆ ಕಿರುಕುಳಕ್ಕೆ ಪ್ರತಿ ವರ್ಷ ಲಕ್ಷಾಂತರ ಮಹಿಳೆಯರು ಶೋಷಣೆಗೊಳಗಾಗುತ್ತಿದ್ದು, ಕಳೆದ 11 ವರ್ಷಗಳಲ್ಲಿ 19,479 ಕೇಸ್‌ಗಳು ಪೊಲೀಸ್‌ ಠಾಣೆ ಮೆಟ್ಟಿಲೇರಿರುವುದು ಈ ಅಂಶಗಳಿಗೆ ಪುಷ್ಠಿ ನೀಡುತ್ತದೆ. ಇನ್ನು ಶೇ.85 ಕೇಸ್‌ಗಳು ಬೆಳಕಿಗೆ ಬರುತ್ತಿಲ್ಲ. ಉಳಿದಂತೆ ಶೇ.5 ನೈಜ ಕೇಸ್‌ಗಳಲ್ಲಿ ಸಂತ್ರಸ್ತೆಯರು ತಮಗಾದ ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದು, ಈ ಪೈಕಿ ಉನ್ನತ ಹುದ್ದೆಯಲ್ಲಿರುವ ವಿದ್ಯಾವಂತರ ಪಾಲೇ ಅಧಿಕವಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಮನಃಶಾಸ್ತ್ರಜ್ಞರ ಮೊರೆ: ವರದಕ್ಷಿಣೆ ಪಿಡುಗಿಗೆ ಒಳಗಾದ ಶೇ.20 ಮಹಿಳೆಯರು ಖನ್ನತೆಗೆ ಒಳಗಾಗಿದ್ದು, ಸದ್ಯ ಮನಃಶಾಸ್ತ್ರಜ್ಞರ ಮೊರೆ ಹೋಗುತ್ತಿದ್ದಾರೆ. ವರದಕ್ಷಿಣೆ ಬಗ್ಗೆ ಪ್ರಶ್ನಿಸಿದರೆ ವಿಚ್ಛೇದನ ಕೊಡುವುದಾಗಿ ಪತಿ ಬೆದರಿಕೆ ಹಾಕುತ್ತಾರೆ ಎಂಬುದು ಠಾಣೆ ಮೆಟ್ಟಿಲೇರಿದ ಬಹುತೇಕ ಮಹಿಳೆಯರ ಅಳಲು. ವರದಕ್ಷಿಣೆ ಸಲುವಾಗಿ ಕೌಟುಂಬಿಕ ಕಲಹ ಪ್ರಕರಣ ದುಪ್ಪಟ್ಟಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ನಿಯಂತ್ರಣಕ್ಕೆ ಬಂದಿಲ್ಲ: 2010 ರಿಂದ 2022 ಜುಲೈವರೆಗೆ ರಾಜ್ಯಾದ್ಯಂತ 19,479 ವರದಕ್ಷಿಣೆ ಪ್ರಕರಣ ದಾಖಲಾಗಿದ್ದು, ಈ ಪೈಕಿ ಆತ್ಮಹತ್ಯೆ, ಬೆಂಕಿ ಗಾಹುತಿ, ಹಲ್ಲೆ ಸೇರಿ ಇನ್ನಿತರ ದೌರ್ಜನ್ಯಕ್ಕೊಳಗಾಗಿ 2,821 ಮಹಿಳೆಯರು ಮೃತಪಟ್ಟಿದ್ದಾರೆ. 2010-11ರಲ್ಲಿ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 2,287 ವರ ದಕ್ಷಿಣೆ ಕೇಸ್‌ ದಾಖಲಾಗಿದ್ದು, ಈ ಪೈಕಿ 515 ಮಹಿಳೆಯರು ಸಾವನ್ನಪ್ಪಿದ್ದಾರೆ. 2020-21ರಲ್ಲಿ ಇದರ ಪ್ರಮಾಣ 3,233ಕ್ಕೆ ಏರಿಕೆಯಾಗಿದ್ದು, 332 ಮಹಿಳೆಯರು ಬಲಿಯಾಗಿದ್ದಾರೆ. ಇನ್ನು ಕಳೆದ 6 ತಿಂಗಳಲ್ಲಿ 1,089 ದೂರುಗಳು ಬಂದಿದ್ದು, 76 ವಿವಾಹಿತೆಯರು ದೌರ್ಜನ್ಯಕ್ಕೊಳ ಗಾಗಿ ಪ್ರಾಣ ಬಿಟ್ಟಿದ್ದಾರೆ. ಕಳೆದ 10 ವರ್ಷಗಳ ಹಿಂದೆ ನಡೆಯುತ್ತಿದ್ದ ವರದಕ್ಷಿಣೆ ಪಿಡುಗು ಇನ್ನೂ ಅಷ್ಟೇ ಪ್ರಮಾಣದಲ್ಲಿ ಜೀವಂತವಾಗಿದೆ ಎಂಬುದಕ್ಕೆ ಈ ಅಂಕಿ ಅಂಶಗಳು ಪುಷ್ಟಿ ನೀಡುತ್ತವೆ.

ಜಾಮೀನು ರಹಿತ ಶಿಕ್ಷೆ: ವರದಕ್ಷಿಣೆ ಪಿಡುಗಿನ ನಿಯಂತ್ರಣಕ್ಕಾಗಿ 1961ರÇÉೇ ವರದಕ್ಷಿಣೆ ನಿಷೇಧ ಅಧಿನಿಯಮ ಜಾರಿಗೆ ತರಲಾಗಿದೆ. 1984ರಲ್ಲಿ ಈ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ. ವರದಕ್ಷಿಣೆ ಪ್ರಕರಣ ಸಾಬೀತಾದರೆ ಜಾಮೀನು ರಹಿತ ಶಿಕ್ಷೆ ನೀಡಲಾಗುತ್ತದೆ. ವರದಕ್ಷಿಣೆ ತೆಗೆದುಕೊಳ್ಳುವ ಹಾಗೂ ನೀಡುವ ಅಪರಾಧಕ್ಕೆ ಕನಿಷ್ಠ 5 ವರ್ಷ ಜೈಲು ಶಿಕ್ಷೆ, ಡೌರಿ ಕೇಳಿದರೆ ಕನಿಷ್ಠ 2 ವರ್ಷ ಸೆರೆಮನೆ ವಾಸ ಶಿಕ್ಷೆ ವಿಧಿಸಲು ಅವಕಾಶವಿದೆ. ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು, ಅವರ ಪಾಲಕರು, ಸಂಬಂಧಿ, ಮಾನ್ಯತೆ ಪಡೆದಿರುವ ಸ್ವಯಂ ಸೇವಾ ಸಂಘ, ಸಂಸ್ಥೆಗಳು ಈ ಬಗ್ಗೆ ಪೊಲೀಸರಿಗೆ ಲಿಖೀತ ದೂರು ಸಲ್ಲಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಇಷ್ಟೆಲ್ಲ ಕಠಿಣ ಕಾನೂನುಗಳಿದ್ದರೂ ಈ ಪಿಡುಗನ್ನು ನಿವಾರಿಸುವು ದಿರಲಿ, ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ.

ವರದಕ್ಷಿಣೆ ಕಿರುಕುಳಕ್ಕೊಳಗಾದ ಮಹಿಳೆಯರು ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಬಹುದು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ●ಪಾಟೀಲ್‌ ವಿನಾಯಕ ವಸಂತರಾವ್‌, ಡಿಸಿಪಿ

●ಅವಿನಾಶ್‌ ಮೂಡಂಬಿಕಾನ

 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.