ಡಾ.ಎಡಪಡಿತ್ತಾಯ ಮಂಗಳೂರು ವಿವಿ ಕುಲಪತಿ
Team Udayavani, Jun 4, 2019, 3:02 AM IST
ಬೆಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರನ್ನು ಆಯ್ಕೆ ಮಾಡಿ ರಾಜ್ಯಪಾಲರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಕುಲಪತಿಯಾಗಿದ್ದ ಪ್ರೊ.ಕೆ.ಬೈರಪ್ಪ ಅವರ ಅವಧಿ ಮುಗಿದ ನಂತರ ಕುಲಪತಿ ಹುದ್ದೆ ಖಾಲಿಯಾಗಿತ್ತು. ಕಾಯಂ ಕುಲಪತಿ ನೇಮಿಸುವ ಸಂಬಂಧ ಸರ್ಕಾರ ಶೋಧನಾ ಸಮಿತಿ ರಚನೆ ಮಾಡಿತ್ತು. ಶೋಧನಾ ಸಮಿತಿಯ ಶಿಫಾರಸಿನಂತೆ ಸರ್ಕಾರ ಎರಡು ಹೆಸರನ್ನು ರಾಜ್ಯಪಾಲರಿಗೆ ಸಲ್ಲಿಸಿತ್ತು. ರಾಜ್ಯಪಾಲರು ಸೋಮವಾರ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಹೆಸರನ್ನು ಅಂತಿಮ ಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮುಂದಿನ ನಾಲ್ಕು ವರ್ಷ ಇವರ ಅಧಿಕಾರಾವಧಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಆಯ್ಕೆ ಪ್ರಕ್ರಿಯೆ ಕೂಡ ಪೂರ್ಣಗೊಂಡಿತ್ತು. ಆದರೆ, ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸದೇ ಇರುವುದರಿಂದ ಅಧಿಕಾರ ಹಸ್ತಾಂತರ ಆಗಿರಲಿಲ್ಲ. ಸೋಮವಾರ ರಾಜ್ಯಪಾಲರು ಅಧಿಕೃತ ಆದೇಶ ಹೊರಡಿಸಿದ್ದರಿಂದ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಮಂಗಳೂರು ವಿವಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡರು.
2018ರ ಜೂನ್ 4ರಂದು ಪ್ರೊ.ಕೆ.ಬೈರಪ್ಪ ಅವರ ಕುಲಪತಿ ಅವಧಿ ಪೂರ್ಣಗೊಂಡಿತ್ತು. ನಂತರ ವಿವಿಯ ದೈಹಿಕ ಶಿಕ್ಷಣ ವಿಭಾಗದ ಡಾ.ಸಿ.ಕೆ.ಕಿಶೋರ್ ಕುಮಾರ್, ನಂತರ ವಾಣಿಜ್ಯ ವಿಭಾಗದ ಪ್ರೊ.ಪಿ.ಐಶ್ವರ ಹಾಗೂ ಪ್ರೊ.ಕೆ.ಕಿಶೋರಿ ನಾಯಕ್ ಹಂಗಾಮಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್