ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ : ಡಾ.ಕೆ.ಸುಧಾಕರ್
ದೇಶದಲ್ಲೇ ಮೊಟ್ಟಮೊದಲ ವೈದ್ಯರ ಸ್ಮಾರಕ
Team Udayavani, Jul 1, 2021, 6:19 PM IST
ಬೆಂಗಳೂರು : ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿ ವರ್ಷ ಸ್ಮರಿಸಲು ಆರೋಗ್ಯ ಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700 ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು ಕರೆಯಲಾಗಿದೆ. ಹಾಗೆಯೇ ಈ ಕಾರ್ಯದಲ್ಲಿ ಮೃತರಾದವರನ್ನು ಹುತಾತ್ಮರು ಎಂದು ಕರೆಯಲಾಗಿದೆ. ಈ ಹುತಾತ್ಮ ವೈದ್ಯರ ಸ್ಮರಣಾರ್ಥ ಆರೋಗ್ಯ ಸೌಧದ ಆವರಣದಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಉತ್ತಮ ವಿನ್ಯಾಸ ಮಾಡಿಸಿ ಸ್ಮಾರಕ ನಿರ್ಮಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು. ವೈದ್ಯರ ಕುಟುಂಬದವರು ಪ್ರತಿ ವರ್ಷದ ನಿಗದಿತ ದಿನ ಬಂದು ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : ಸೆಪ್ಟೆಂಬರ್ ವರೆಗೂ ಅವಧಿ ಮೀರಿದ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬಳಸಬಹುದು!
ದೆಹಲಿಯಲ್ಲಿ ಸೈನಿಕ ಸ್ಮಾರಕವಿದ್ದು, ಅಲ್ಲಿ ಯೋಧರಿಗೆ ಎಲ್ಲರೂ ಗೌರವ ಸಲ್ಲಿಸುತ್ತಾರೆ. ಅದೇ ರೀತಿ ಇಲ್ಲಿ ಸ್ಮಾರಕ ನಿರ್ಮಿಸಿ ಯಾವಾಗಲೂ ಅವರನ್ನು ಸ್ಮರಿಸಬೇಕು. ಈ ಕಷ್ಟಕಾಲದಲ್ಲಿ ಶ್ರಮಿಸುತ್ತಿರುವ ಎಲ್ಲ ವೈದ್ಯರಿಗೆ ಸರ್ಕಾರದ ಪರವಾಗಿ ಧನ್ಯವಾದ ಎಂದರು.
ಅನೇಕ ವರ್ಷಗಳಿಂದ ಭತ್ಯೆಗೆ ಹೋರಾಟ ನಡೆದಿತ್ತು. ನಮ್ಮ ಸರ್ಕಾರ ಶೇ.30, 40 ರವರೆಗೂ ಭತ್ಯೆ ಹೆಚ್ಚಳ ಮಾಡಿದೆ. ಐತಿಹಾಸಿಕವಾಗಿ 1,763 ವೈದ್ಯರನ್ನು ನೇರ ನೇಮಕ ಮಾಡಲಾಗಿದೆ. ಜೊತೆಗೆ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರನ್ನು ನೇಮಿಸಲಾಗಿದೆ. 1 ಸಾವಿರಕ್ಕೂ ಅಧಿಕ ವೈದ್ಯರು ಮೆಡಿಕಲ್ ಕಾಲೇಜುಗಳಿಗೆ ನೇಮಕವಾಗಿದ್ದಾರೆ. ಎಲ್ಲ ಸೇರಿ 4 ಸಾವಿರ ವೈದ್ಯರ ನೇಮಕ ನಡೆದಿದೆ ಎಂದರು.
ವೈದ್ಯರ ಮೇಲೆ ಹಲ್ಲೆ : ಎಚ್ಚರಿಕೆ
ರೋಗಿಗಳ ಕಡೆಯವರು ವೈದ್ಯರು, ಆರೋಬ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ಸರ್ಕಾರ ಉಗ್ರವಾಗಿ ಖಂಡಿಸುತ್ತದೆ. ಯಾವುದೇ ವೈದ್ಯ ಕೊನೆ ಗಳಿಗೆವರೆಗೆ ಜೀವ ಉಳಿಸಲು ಕೆಲಸ ಮಾಡುತ್ತಾರೆ. ರೋಗಿ ಸಾಯಲಿ ಎಂದು ಯಾರೂ ಬಯಸುವುದಿಲ್ಲ. ದುಃಖಕ್ಕೊಳಗಾದ ವೇಳೆ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಹಾಗೇನಾದರೂ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ವೈದ್ಯರ ಮೇಲೆ ಹಲ್ಲೆ ನಡೆಸಿದರೆ 5-7 ವರ್ಷ ಜೈಲುವಾಸದ ಶಿಕ್ಷೆ ಇದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಇನ್ನು, ಐಎಂಎನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಎಲ್ಲ ವೈದ್ಯರು ಐಎಂಎನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಭತ್ಯೆ, ಬಡ್ತಿ ನೀಡುವ ಚಿಂತನೆ ಇದೆ ಎಂದರು.
ಇದನ್ನೂ ಓದಿ : ಬಲು ಅಪರೂಪದ ಕೊಂಡದಕುಳಿ ಭಾಗವತಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ