ವರ್ಗಾವಣೆ ನಿಯಮ ಸಡಿಲಿಕೆಗೆ ಕರಡು ಸಿದ್ಧ


Team Udayavani, Jan 30, 2020, 3:00 AM IST

Udayavani Kannada Newspaper

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಿಯಮ ಸಡಿಲಿಸುವ ಸಂಬಂಧ ಸರ್ಕಾರ ಕರಡು ನಿಯಮ ಸಿದ್ಧಪಡಿಸಿದ್ದು, ವರ್ಗಾವಣೆಯಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿರುವ ವಿಶೇಷ ವಿನಾಯ್ತಿ ಹಿಂಪಡೆಯುವುದು, ಕಡ್ಡಾಯ ಬದಲಿಗೆ ವಲಯ ವರ್ಗಾವಣೆ, ಸಿ ವಲಯದಲ್ಲಿ 10 ವರ್ಷಕ್ಕೂ ಅಧಿಕ ಸೇವೆ ಸಲ್ಲಿಸಿದವರಿಗೆ ವಲಯ ವರ್ಗಾವಣೆಯಲ್ಲಿ ವಿನಾಯ್ತಿ ಸೇರಿದಂತೆ ಹಲವು ಅಂಶಗಳನ್ನು ಪ್ರಸ್ತಾಪಿಸಲಾಗಿದೆ.

ಕರಡು ನಿಯಮಕ್ಕೆ ಸಂಬಂಧಿಸಿದಂತೆ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘಗಳ ಪದಾಧಿಕಾರಿಗಳು ವಲಯ ವರ್ಗಾವಣೆಯಿಂದ ವಿನಾಯ್ತಿ ಪಡೆಯುತ್ತಿದ್ದುದ್ದನ್ನು ಕರಡು ನಿಯಮದಲ್ಲಿ ಹಿಂದಕ್ಕೆ ಪಡೆಯಲಾಗಿದೆ. ದಂಪತಿ ವರ್ಗಾವಣೆ ಪ್ರಕರಣದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವವರಿಗೆ ಮಾತ್ರ ಅವಕಾಶ ಕಲ್ಪಿಸಲು ಉಲ್ಲೇಖೀಸಲಾಗಿದೆ.

ವಲಯ ವರ್ಗಾವಣೆ: ಕಡ್ಡಾಯ ವರ್ಗಾವಣೆ ಎಂಬ ಶೀರ್ಷಿಕೆಯನ್ನು ಬದಲಿಸಿ, ವಲಯ ವರ್ಗಾವಣೆ ಎಂದು ಮಾಡಲಾಗಿದೆ. ವಲಯ ವರ್ಗಾವಣೆಯಲ್ಲಿ ಯಾವುದೇ ಶಿಕ್ಷಕರು 10 ವರ್ಷಗಳಕಾಲ ಸಿ(ಗ್ರಾಮೀಣ ಪ್ರದೇಶ) ವಲಯದಲ್ಲಿ ಕಾರ್ಯನಿರ್ವಹಿಸಿದ್ದರೆ ಅವರಿಗೆ ವಲಯ ವರ್ಗಾವಣೆಯಿಂದ ವಿನಾಯ್ತಿ ನೀಡಲು ಪ್ರಸ್ತಾಪಿಸಲಾಗಿದೆ. ವಲಯ ವರ್ಗಾವಣೆಯಲ್ಲಿ 50 ವರ್ಷ ಮೀರಿದ ಶಿಕ್ಷಕಿಯರಿಗೆ ಹಾಗೂ 55 ವರ್ಷ ಮೀರಿದ ಶಿಕ್ಷಕರಿಗೆ ವಿನಾಯ್ತಿ ನೀಡಲಾಗುತ್ತದೆ.

ವಲಯವಾರು ವರ್ಗಾವಣೆಗಳಲ್ಲಿ ಮೊದಲು ತಾಲೂಕು, ನಂತರ ಜಿಲ್ಲಾ ಹಂತದಲ್ಲಿ ವರ್ಗಾವಣೆ ನಡೆಯಲಿದೆ. ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ (ಸಿಆರ್‌ಪಿ), ಬ್ಲಾಕ್‌ ಸಂಪನ್ಮೂಲ ವ್ಯಕ್ತಿಗಳು (ಬಿಆರ್‌ಪಿ) ಕನಿಷ್ಠ ಅಥವಾ ಗರಿಷ್ಠ ಅವಧಿ ಪೂರ್ಣಗೊಳಿಸಿದ ನಂತರ ಶಾಲೆಗಳಿಗೆ ಮರು ಸ್ಥಳ ನಿಯುಕ್ತಿಗೊಳಿಸುವಾಗ ಶೇ.20ಕ್ಕಿಂತ ಹೆಚ್ಚು ಖಾಲಿ ಇರುವ ತಾಲೂಕುಗಳಿಗೆ ಆದ್ಯತೆಯ ಮೇರೆಗೆ ವರ್ಗಾಯಿಸಬೇಕೆಂಬ ನಿಯಮ ಸಡಿಲಿಸಿ, ತಾಲೂಕು ಅಥವಾ ಜಿಲ್ಲೆಯ ಯಾವುದೇ ಹು¨ªೆಗೆ ಕೌನ್ಸೆಲಿಂಗ್‌ ಮೂಲಕ ವರ್ಗಾಯಿಸಲಾಗುತ್ತದೆ ಎಂದು ಕರಡು ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ.

ಹೆಚ್ಚುವರಿ ಶಿಕ್ಷಕರನ್ನು ಅಗತ್ಯವಿರುವ ಶಾಲೆಗಳಿಗೆ ಮರುನಿಯುಕ್ತಿಗೊಳಿಸುವಾಗ ಮೊದಲು ತಾಲೂಕು ಹಾಗೂ ಬಳಿಕ ಜಿಲ್ಲಾ ಹಂತಕ್ಕೆ ಸೀಮಿತಗೊಳಿಸುವುದು. ವಿನಾಯಿತಿ, ಆದ್ಯತೆ ಪ್ರಕರಣಗಳಲ್ಲಿ ಏಕ ನೀತಿಯನ್ನು ತರಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.