ವಿಷ ಕುಡಿದು ನಾಟಕವಾಡಿ ಪ್ರಿಯಕರನೊಂದಿಗೆ ಪರಾರಿ
Team Udayavani, Jun 10, 2019, 3:00 AM IST
ಶಿರಾ: ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೆಳೆಕೋಟೆಯಲ್ಲಿ ಹಸೆಮಣೆ ಏರಬೇಕಿದ್ದ ವಧು, ವಿಷ ಕುಡಿದಂತೆ ನಾಟಕವಾಡಿ, ಆಸ್ಪತ್ರೆಯಿಂದ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ.
ಮೆಳೆಕೋಟೆಯ ನಯನಾಳನ್ನು ಶಿರಾ ತಾಲೂಕು ದೊಡ್ಡಗುಳ ಗ್ರಾಮದ ಬಿಎಂಟಿಸಿ ನೌಕರ ಮಂಜುನಾಥ್ ಎಂಬುವರ ಜೊತೆ ಭಾನುವಾರದಂದು ವಿವಾಹ ಮಾಡುವುದೆಂದು ನಿಶ್ಚಯಿಸಲಾಗಿತ್ತು. ವಧುವಿನ ಮನೆಯಲ್ಲಿ ಪ್ರಥಮ ಶಾಸ್ತ್ರದ ಕಾರ್ಯಕ್ರಮಗಳು ಆರಂಭಗೊಂಡಿದ್ದವು.
ಹಸಿರು ಚಪ್ಪರ, ವಿವಾಹದ ಸ್ವಾಗತ ಕಮಾನು ಎಲ್ಲವೂ ಸಿದ್ಧಗೊಂಡು, ನೆಂಟರು, ಹಿತೈಷಿಗಳು ಮದುವೆಗೆಂದು ಆಗಮಿಸಿದ್ದರು. ಈ ಮಧ್ಯೆ, ಶನಿವಾರ ರಾತ್ರಿ ವಧು, ತನ್ನ ಮೈಮೇಲೆ ವಿಷಯುಕ್ತ ದ್ರಾವಣ ಸಿಂಪಡಿಸಿಕೊಂಡು, ವಿಷ ಸೇವಿಸಿರುವ ನಾಟಕವಾಡಿದಳು.
ಗಾಬರಿಗೊಂಡ ಮನೆಯವರು ತಕ್ಷಣವೇ ವಧುವನ್ನು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಂದ ಆಕೆ ಅತ್ತೆಯ ಮಗ, ಆನೆಸಿದ್ರಿಯ ಚೇತನ್ ಕುಮಾರ್ ಎಂಬಾತನ ಜೊತೆ ಪರಾರಿಯಾಗಿದ್ದಾಳೆ. ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ