ಬರ ಕಾಮಗಾರಿ: ಕೆಟಿಟಿಪಿ ಕಾಯ್ದೆಯಿಂದ ವಿನಾಯಿತಿ
Team Udayavani, Aug 3, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರು ಪೂರೈಕೆ ಸೇರಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವ ಸಂಬಂಧ ಟೆಂಡರ್ ಪ್ರಕ್ರಿಯೆಗೆ ಕೆಟಿಟಿಪಿ ಕಾಯ್ದೆಯಿಂದ ನೀಡಲಾಗಿದ್ದ ವಿನಾಯಿತಿ ಅವಧಿ ಸೆಪ್ಟೆಂಬರ್ 30ರವರೆಗೂ ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 31ರವರೆಗೆ ಘೋಷಿಸಿದ್ದ ತುರ್ತು ಪರಿಸ್ಥಿತಿ ಅವಧಿ ಇದೀಗ ಎರಡು ತಿಂಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಕುಡಿಯುವ ನೀರು ಸರಬರಾಜು ಹಾಗೂ ಬರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲು ಕೆಟಿಟಿಪಿ ಕಾಯ್ದೆ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ನಗರ ಸ್ಥಳೀಯ ಸಂಸ್ಥೆಗಳು ಬರ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನಗಳಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು