ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿ ಮೃತಪಟ್ಟರೆ ಅದು ಅಪಘಾತವೆಂದೇ ಪರಿಗಣನೆ: ಹೈಕೋರ್ಟ್
Team Udayavani, Dec 30, 2020, 12:12 AM IST
ಬೆಂಗಳೂರು: ಕರ್ತವ್ಯದಲ್ಲಿದ್ದ ಸಂದರ್ಭ ನೌಕರನಿಗೆ ಹೃದಯಾಘಾತ ಸಂಭವಿಸಿದ್ದನ್ನು “ಅಪಘಾತ’ ಎಂದು ಪರಿಗಣಿಸಲಾಗದು ಎಂಬ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್ಇಕೆಆರ್ಟಿಸಿ) ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್, ಕರ್ತವ್ಯ ನಿರ್ವಹಣೆ ವೇಳೆ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದರೆ, ಅದನ್ನು ಅಪಘಾತವೆಂದೇ ಪರಿಗಣಿಸಬೇಕು ಎಂದು ಮಹತ್ವದ ಆದೇಶ ನೀಡಿದೆ.
ಅಪಘಾತ ಎಂದರೆ ಊಹಿಸಲಾಗದ ಹಾಗೂ ಅನಿರೀಕ್ಷಿತ ಘಟನೆಯಾಗಿರುತ್ತದೆ. ಅಂತಹ ಸಂದರ್ಭ ಕರ್ತವ್ಯ ಮೇಲಿದ್ದಾಗ ನೌಕರನಿಗೆ ಹೃದಯಾಘಾತ ಉಂಟಾದರೆ, ಅದು ಆತನ ಹೃದಯಕ್ಕೆ ಉಂಟಾದ ಗಾಯವಾಗಿರುತ್ತದೆ. ಹೀಗಾಗಿ, ಹೃದಯಾಘಾತವನ್ನು ಅಪಘಾತವೆಂದೇ ಪರಿಗಣಿಸಬೇಕಾಗುತ್ತದೆ ಎಂದು ನ್ಯಾ| ಸುನೀಲ್ ದತ್ ಯಾದವ್ ಮತ್ತು ನ್ಯಾ| ಪಿ.ಎನ್. ದೇಸಾಯಿ ಅವರಿದ್ದ ಹೈಕೋರ್ಟ್ ಕಲಬುರಗಿ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ