ಡಿವೈಎಸ್ಪಿ ಗಣಪತಿ ಪ್ರಕರಣ: ವಿಚಾರಣೆ ಆಯೋಗದಿಂದ ಮಾಹಿತಿ ಪಡೆದ ಸಿಬಿಐ
Team Udayavani, Nov 25, 2017, 7:27 AM IST
ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಚೆನ್ನೈನ ವಿಶೇಷ ಅಪರಾಧ ತನಿಖಾ ದಳದ ಸಿಬಿಐ ಅಧಿಕಾರಿಗಳು ಶುಕ್ರವಾರ ನಿವೃತ್ತ ನ್ಯಾ.ಕೆ.ಎನ್.ಕೇಶವನಾರಾಯಣ ಆಯೋಗಕ್ಕೆ ಭೇಟಿ ನೀಡಿ ಪ್ರಕರಣ ಕುರಿತು ಮಾಹಿತಿ ಸಂಗ್ರಹಿಸಿದರು.
ಬೆಳಗ್ಗೆ 11.30ರ ಸುಮಾರಿಗೆ ಮೈಸೂರು ವೃತ್ತದ ಬಳಿ ಇರುವ ಕಾವೇರಿ ಭವನದಲ್ಲಿರುವ ನ್ಯಾ. ಕೇಶವನಾರಾಯಣ ಆಯೋಗಕ್ಕೆ ಆಗಮಿಸಿದ ಸಿಬಿಐ ಹೆಚ್ಚುವರಿ ವರಿಷ್ಠಾಧಿಕಾರಿ (ಎಎಸ್ಪಿ) ಕಲೈಮಣಿ ನೇತೃತ್ವದ ಮೂವರ ತಂಡ, ಸಂಜೆ 5 ಗಂಟೆವರೆಗೆ ಪ್ರಕರಣ ಕುರಿತು ಮಾಹಿತಿ ಸಂಗ್ರಹಿಸಿದರು. ಆಯೋಗ ರಚನೆಯಾದ ಬಳಿಕ ಇದುವರೆಗೂ ಪ್ರಕರಣ ಕುರಿತು ಯಾವ ಆಯಾಮದಲ್ಲಿ ತನಿಖೆ ನಡೆಸಿದೆ, ಎಷ್ಟು ಮಂದಿಯನ್ನು ಸಾಕ್ಷ ಗಳನ್ನಾಗಿ ಮಾಡಿದ್ದಾರೆ, ಗಣಪತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ಯಾರೊಟ್ಟಿಗೆ ಮಾತನಾಡಿದ್ದರು ಎಂಬೆಲ್ಲ ಮಾಹಿತಿಯನ್ನು ಸಿಬಿಐ ಅಧಿಕಾರಿಗಳು ಆಯೋಗದ ಅಧಿಕಾರಿಗಳಿಂದ ಪಡೆದುಕೊಂಡಿ ದ್ದಾರೆ ಎಂದು ತಿಳಿದು ಬಂದಿದೆ.
ಆಯೋಗ ಇದುವರೆಗೂ ಇಬ್ಬರು ಪೊಲೀಸರು ಸೇರಿ 49 ಮಂದಿಯ ವಿಚಾರಣೆ ನಡೆಸಿದ್ದು, ಸಾಕ್ಷ್ಯಗಳ ಜತೆಗೆ ತಾವು ಪತ್ತೆ ಹಚ್ಚಿರುವ ಮಾಹಿತಿಯನ್ನು ಸಿಬಿಐ ಅಧಿಕಾರಿಗಳಿಗೆ ಮೌಖೀಕವಾಗಿ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಸಾಕ್ಷ ಗಳು ಮತ್ತು ದಾಖಲೆಗಳ ಪಟ್ಟಿ ಸಿದ್ಧಪಡಿಸಿಲ್ಲ. ಹೀಗಾಗಿ ಅಧಿಕಾರಿಗಳಿಗೆ ಹಸ್ತಾಂತರಿಸಿಲ್ಲ. ಮುಂದಿನ ವಾರ ಮತ್ತೆ ಅಧಿಕಾರಿಗಳು ಬರುವುದಾಗಿ ತಿಳಿಸಿದ್ದಾರೆಂದು
ಆಯೋಗದ ಮೂಲಗಳು ತಿಳಿಸಿವೆ.
ಸಿಬಿಐ ಅಧಿಕಾರಿಗಳು ಕೆಲವೊಂದು ದಾಖಲೆಗಳನ್ನು ಕೇಳಿದ್ದಾರೆ. ಯಾವ ದಾಖಲೆಗಳನ್ನು ಕೊಡಬೇಕು, ಕೊಡಬಾರದೆಂಬ ಕುರಿತು ಪಟ್ಟಿ ಮಾಡಬೇಕಿದೆ. ಜತೆಗೆ ಪ್ರಕರಣ ಅಂತಿಮ ವರದಿಯನ್ನು ಸಿದ್ಧಪಡಿಸಬೇಕಿದೆ. ನಂತರ ಕಾನೂನು ಪ್ರಕ್ರಿಯೆಗಳ ಮೂಲಕ ದಾಖಲೆಗಳನ್ನು ಹಸ್ತಾಂತರಿಸಲಾಗುವುದು. ಸದ್ಯಕ್ಕೆ ಮೌಖೀಕವಾಗಿ ಎಲ್ಲವನ್ನೂ ತಿಳಿಸಿದ್ದೇವೆ. ಆಯೋಗ ತನಿಖಾ ಹಾದಿಯನ್ನು ಕೇಳಿ ಅಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆಂದು ಆಯೋಗದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ