ಹಿಂದಿನ ವಿಪ್‌ ಉಲ್ಲಂಘನೆಗಳೇ ಅತೃಪ್ತರಿಗೆ ಅಸ್ತ್ರ!


Team Udayavani, Feb 8, 2019, 1:26 AM IST

10.jpg

ಬಳ್ಳಾರಿ: ವಿಪ್‌ ಜಾರಿಯಾದರೂ ಬಜೆಟ್ ಅಧಿವೇಶನಕ್ಕೆ ಹಾಜರಾಗದ ಅತೃಪ್ತ ಶಾಸಕರಿಗೆ ಈ ಹಿಂದೆ ವಿಪ್‌ ಉಲ್ಲಂಘಿಸಿದ ಶಾಸಕರ ವಿರುದ್ಧ ಮೈತ್ರಿ ಪಕ್ಷಗಳು ಯಾವುದೇ ಕ್ರಮ ಕೈಗೊಳ್ಳದಿರುವುದೇ ಬಹು ದೊಡ್ಡ ಅಸ್ತ್ರವಾಗಿ ಪರಿಣಮಿಸಿದೆ.

ಅಧಿವೇಶನಕ್ಕೆ ಗೈರಾಗುವ ಜತೆಗೆ ಕಾನೂನು ತಜ್ಞರೊಂದಿಗೂ ಚರ್ಚಿಸಿ ಮುಂದೆ ಎದುರಾಗುವ ಸಮಸ್ಯೆಗಳನ್ನು ಎದುರಿಸಲು ಅತೃಪ್ತರು ಸಿದ್ಧತೆಯಲ್ಲಿ ತೊಡಗಿದ್ದಾರೆ. ವಿಧಾನ ಪರಿಷತ್‌, ರಾಜ್ಯಸಭೆ, ಸ್ಪೀಕರ್‌ ಆಯ್ಕೆಗೆ ನಡೆಯುವ ಚುನಾವಣೆ ಸೇರಿ ಪಕ್ಷದ ಶಾಸಕರು ಕೈಮೀರುತ್ತಿರುವ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ವಿಪ್‌ ಜಾರಿಗೊಳಿಸುವುದು ಸಾಮಾನ್ಯ. ಅದರಂತೆ ಮೈತ್ರಿ ಸರ್ಕಾರ ಮಂಡಿಸುತ್ತಿರುವ ಎರಡನೇ ಬಜೆಟ್ ಅಧಿವೇಶನಕ್ಕೆ ಎಲ್ಲ ಶಾಸಕರು ತಪ್ಪದೇ ಹಾಜರಾಗಬೇಕೆಂದು ಕಾಂಗ್ರೆಸ್‌-ಜೆಡಿಎಸ್‌ ವಿಪ್‌ ಜಾರಿಗೊಳಿಸಿವೆ. ಆದರೆ, ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ 10 ಶಾಸಕರು ಬಜೆಟ್ ಅಧಿವೇಶನಕ್ಕೆ ಹಾಜರಾಗದೆ ಪಕ್ಷ ಜಾರಿಗೊಳಿಸಿರುವ ವಿಪ್‌ ಉಲ್ಲಂಘಿಸಿದ್ದಾರೆ.

ಶಾಸಕರಿಂದ ವಿಪ್‌ ಉಲ್ಲಂಘನೆ ಹೊಸದೇನಲ್ಲ. ಈ ಹಿಂದೆ ವಿಪ್‌ ಉಲ್ಲಂಘಿಸಿರುವ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ಅತೃಪ್ತ ಶಾಸಕರು ಚರ್ಚಿಸುತ್ತಿದ್ದಾರೆ. ವಿಪ್‌ ಉಲ್ಲಂಘನೆ ಯಿಂದ ಮುಂದೆ ಎದುರಾಗುವ ಕಾನೂನು ಹೋರಾಟ ಎದುರಿಸಲು ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಅಂದು ಸಿದ್ದು ಬೆಂಬಲಿಸಿದ್ದರು: ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ರಾಜ್ಯಸಭೆಗೆ ಚುನಾವಣೆ ನಡೆಯಿತು. ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷಗಳು ತಮ್ಮ ಶಾಸಕರಿಗೆ ವಿಪ್‌ ಜಾರಿಗೊಳಿಸಿತ್ತು. ಆದರೆ, ಅಂದು ಜೆಡಿಎಸ್‌ ಶಾಸಕರಾಗಿದ್ದ ಭೀಮಾನಾಯ್ಕ, ಜಮೀರ್‌ ಅಹ್ಮದ್‌, ಶ್ರೀನಿವಾಸ ಮೂರ್ತಿ ಸೇರಿ ಒಟ್ಟು 7 ಜನ ಶಾಸಕರು ಅಡ್ಡ ಮತದಾನ ಮಾಡುವ ಮೂಲಕ ವಿಪ್‌ ಉಲ್ಲಂಘಿಸಿದ್ದರು. ಆಗ ಮಾಜಿ ಸಿಎಂ ಸಿದ್ದರಾಮಯ್ಯನವರೇ ಬೆಂಬಲ ನೀಡಿದ್ದರು. ಜತೆಗೆ 2018ರ ವಿಧಾನಸಭೆ ಚುನಾವಣೆಯಲ್ಲಿ ಆ ಎಲ್ಲ 7 ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡು ಪಕ್ಷದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದರು. ಈ ಪೈಕಿ ಮೂವರು ಶಾಸಕರಾಗಿ ಆಯ್ಕೆಯಾಗಿ, ನಾಲ್ವರು ಪರಾಭವ ಗೊಂಡಿದ್ದಾರೆ. ಅವರಿಗಿಲ್ಲದ ವಿಪ್‌ ಉಲ್ಲಂಘನೆಯ ನಿಯಮ, ನಮಗೆ ಹೇಗೆ ಅನ್ವಯಿಸುತ್ತದೆ ಎಂಬುದು ಅಧಿವೇಶನಕ್ಕೆ ಗೈರಾಗಿರುವ ಅತೃಪ್ತ ಶಾಸಕರ ವಾದ ಎನ್ನಲಾಗುತ್ತಿದೆ.

ಅಧಿವೇಶನಕ್ಕೆ ಹಾಜರಾಗದ ಶಾಸಕರನ್ನು ಬೆದರಿಸಲು ಪಕ್ಷಾಂತರ ನಿಷೇಧ ಕಾಯ್ದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಅವರು ಹೇಳಿದಂತೆ ಕೇಳಲು, ಪಕ್ಷದಿಂದ ಉಚ್ಚಾಟನೆ ಮಾಡಲು ನಾವು ಗ್ರಾಪಂ ಸದಸ್ಯರಲ್ಲ. ಅತೃಪ್ತರಾದರೂ ಅಧಿವೇಶನಕ್ಕೆ ಯಾವುದೇ ಕಾರಣಕ್ಕೂ ಬರಲ್ಲ. ಒಂದು ವೇಳೆ ಪಕ್ಷಾಂತರ ನಿಷೇಧ ಕಾಯ್ದೆ ಅಡ್ಡಿಯಾದರೆ, ಮುಂದಿನ ದಿನಗಳಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಎದುರಿಸಲು ಕಾನೂನು ತಜ್ಞರನ್ನು ಸಂಪರ್ಕಿಸಿ ಹಲವು ಸಲಹೆ ಸೂಚನೆ ಪಡೆಯುತ್ತೇವೆ ಎನ್ನುತ್ತಾರೆ ಅತೃಪ್ತರು.

ವಿಪ್‌ ಉಲ್ಲಂಘಿಸಿ ಕಾನೂನು ಹೋರಾಟದಲ್ಲಿ ಗೆದ್ದಿದ್ದರು!

ಬಿಜೆಪಿ ಆಡಳಿತಾವಧಿಯಲ್ಲೂ ಗೂಳಿಹಟ್ಟಿ ಶೇಖರ್‌, ಬಾಲಚಂದ್ರ ಜಾರಕಿಹೊಳಿ ಸೇರಿ ಒಟ್ಟು 6 ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಆದರೆ, ಆಗ ಇವರೆಲ್ಲರೂ ಸುಪ್ರೀಂಕೋರ್ಟ್‌ನಲ್ಲಿ ಪಕ್ಷ ಕೈಗೊಂಡಿರುವ ನಿಯಮದ ವಿರುದ್ಧ ಹೋರಾಡಿ ಜಯ ಗಳಿಸಿದ್ದರು. ಹಿಂದೆ ನಡೆದಿದ್ದ ಈ ಎಲ್ಲ ವಿಪ್‌ ಉಲ್ಲಂಘನೆ, ಉಚ್ಚಾಟನೆಗಳು ಅತೃಪ್ತ ಶಾಸಕರನ್ನು ಸದ್ಯ ಅಧಿವೇಶನಕ್ಕೆ ಹೋಗದಂಡೆ ತಡೆಯುತ್ತಿದ್ದು, ಈ ಎಲ್ಲ ಅಸ್ತ್ರಗಳನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಪಕ್ಷದಿಂದ ಎದುರಾಗುವ ಕಾನೂನು ತೊಡಕುಗಳನ್ನು ಸಮರ್ಥವಾಗಿ ಎದುರಿಸಲಿದ್ದಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.