ಆರ್ಥಿಕ ಸ್ಥಿತಿ ಸುಸ್ಥಿರ: ಸಮೀಕ್ಷೆ
Team Udayavani, Feb 17, 2018, 8:15 AM IST
ರಾಜ್ಯ ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಕೇಂದ್ರ ಸರ್ಕಾರದ ತಲಾ ಆದಾಯಕ್ಕಿಂತಲೂ ರಾಜ್ಯ ಸರ್ಕಾರದ ತಲಾ ಆದಾಯ
ಹೆಚ್ಚಳವಾಗಿದೆ ಎಂದು 2017-18ನೇ ಸಾಲಿನ ಆರ್ಥಿಕ ಸಮೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. 2017-18 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಆಂತರಿಕ ಉತ್ಪನ್ನ ದರ 8.5 ರಷ್ಟು ನಿರೀಕ್ಷೆ ಮಾಡಲಾಗಿದೆ. ಕೃಷಿ ವಲಯದ ಬೆಳವಣಿಗೆ ಶೇಕಡಾ 4.9 ರಷ್ಟು ಗುರಿ ಹೊಂದಲಾಗಿದ್ದು, ಕೈಗಾರಿಕಾ ವಲಯದಲ್ಲಿಯೂ ಏರಿಕೆ ಕಾಣುವ ನಿರೀಕ್ಷೆ ಹೊಂದಲಾಗಿದೆ. ಸೇವಾ ವಲಯದ ಬೆಳವಣಿಗೆ ಶೇಕಡಾ 10.4 ರಷ್ಟು ಏರಿಕೆ ಅಂದಾಜಿಸಲಾಗಿದ್ದು, ಸಾರ್ವಜನಿಕ ಆಡಳಿತ ಶೇಕಡಾ 16.5 ರಷ್ಟು ಏರಿಕೆಯಾಗುವ ನಿರೀಕ್ಷೆ ಹೊಂದಲಾಗಿದೆ. ಇತರ ಸೇವೆಗಳ ಬೆಳವಣಿಗೆ ದರ ಶೇಕಡಾ 10.5 ರಷ್ಟು ಏರಿಕೆಯ ನಿರೀಕ್ಷೆ ಇದ್ದು, ರಾಜ್ಯದ ತಲಾ ಆದಾಯ ಶೇಕಡಾ 10.9 ರಷ್ಟು
ಹೆಚ್ಚಳವಾಗುವುದೆಂದು ಅಂದಾಜಿಸಲಾಗಿದ್ದು, ತಲಾ ಆದಾಯ 1.58 ಲಕ್ಷದಿಂದ 1.74 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ಸಮೀಕ್ಷಾ ವರದಿಯಲ್ಲಿ ಉಲ್ಲೇಖೀಸಲಾಗಿದೆ. ರಾಜ್ಯದಲ್ಲಿನ ಆದಾಯ ಕೊರತೆಯಲ್ಲಿನ ಬಿಗಿ ಹಿಡಿತ ಆರ್ಥಿಕ ಸಾಮರ್ಥ್ಯವನ್ನು ಬಲಿಷ್ಠಗೊಳಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಹೆಚ್ಚುವರಿ ನಿರೀಕ್ಷೆ
ಜಿಎಸ್ಟಿ ಜಾರಿ ಹೊರತಾಗಿಯೂ ಪ್ರಸಕ್ತ ವರ್ಷ ವಾಣಿಜ್ಯ ತೆರಿಗೆ ಗುರಿಯ 55 ಸಾವಿರ ಕೋಟಿ ರೂ. ಗಿಂತಲೂ 2,200 ಕೋಟಿ ರೂ.
ಹೆಚ್ಚು ಆದಾಯ ಸಂಗ್ರಹಿಸುವ ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಆರ್ಥಿಕ ವರ್ಷದಲ್ಲೂ ಬರೋಬ್ಬರಿ 10,800 ಕೋಟಿ ರೂ. ಗಿಂತ ಹೆಚ್ಚು ಅಂದರೆ 65,800 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ