ಅಕ್ರಮ ಹಣ ವರ್ಗಾವಣೆ: 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ
Team Udayavani, Mar 20, 2023, 5:00 AM IST
ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಎಸ್.ಬಿ.ಮಿನರಲ್ಸ್ ಒಡೆತನದ ಎರಡು ಗಣಿ ಕಂಪನಿಗೆ ಸೇರಿದ 5.21 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದುಕೊಂಡಿದೆ.
ಬಿ.ಪಿ.ಆನಂದ್ ಕುಮಾರ್, ಪಾಂಡುರಂಗ ಸಿಂಗ್, ಗೋಪಾಲ್ ಸಿಂಗ್ ಪಾಲುದಾರಿಕೆಯ ಎಸ್ಬಿ ಮಿನರಲ್ಸ್, ದಿನೇಶ್ ಕುಮಾರ್ ಸಿಂ ಪಾಲುದಾರಿಕೆಯ ಭಾರತ್ ಮಿನರಲ್ಸ್ ಮೈನ್ಸ್ ಹಾಗೂ ಶಾಂತಲಕ್ಷಿ ಮತ್ತು ಜೆ.ಮಿಥಿಲೇಶ್ವರ್ ಗಣಿ ಸಂಸ್ಥೆಗಳಿಗೆ ಸೇರಿದ 5.21 ಕೋಟಿ ರೂ. ಮೌಲ್ಯದ 6 ಸ್ಥಿರ ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ.
ಈ ಎರಡು ಕಂಪನಿಗಳು ಕಬ್ಬಿಣದ ಅದಿರನ್ನು ಪರವಾನಗಿ ಇಲ್ಲದೆ ಅಕ್ರಮವಾಗಿ ಬೇರೆಡೆ ಸಾಗಾಟ ನಡೆಸಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಿದ್ದವು. ಲೋಕಾಯುಕ್ತದ ವಿಶೇಷ ತನಿಖಾ ತಂಡ (ಎಸ್ಐಟಿ) ಎಸ್ಬಿ ಮಿನರಲ್ ಎಂಟರ್ಪ್ರೈಸಸ್ ಲಿಮಿಟೆಡ್, ಅಕ್ರಮದಲ್ಲಿ ಶಾಮೀಲಾದ ಸರ್ಕಾರಿ ನೌಕರರು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ತನಿಖೆ ವೇಳೆ ಭಾರಿ ಮೊತ್ತದ ಅಕ್ರಮ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಈ ಸಂಗತಿ ಇಡಿ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಲೋಕಾಯುಕ್ತ ದಾಖಲಿಸಿಕೊಂಡ ಎಫ್ಐಆರ್ ಆಧರಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಈ ನಡುವೆ ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಕೇಂದ್ರ ಸಶಕ್ತ ಸಮಿತಿ ರಚಿಸಿತ್ತು. ಅದರಂತೆ ನಡೆದ ತನಿಖೆ ವೇಳೆ 4 ಮೈನಿಂಗ್ ಸಂಸ್ಥೆಗಳು ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿದೆ. ಇಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಇನ್ನಷ್ಟು ಅಕ್ರಮದ ಜಾಡು ಹಿಡಿಯಲು ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ