ಡಿಕೆಶಿ ವಿರುದ್ಧದ ಇಸಿಐಆರ್ ಕೋರ್ಟ್ಗೆ ಸಲ್ಲಿಸಿದ ಇಡಿ
Team Udayavani, Mar 15, 2019, 2:28 AM IST
ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ ಆಪ್ತ ಸಚಿನ್ ನಾರಾಯಣ್ ಮತ್ತಿತರರ ವಿರುದ್ಧ ದಾಖಲಿಸಿಕೊಂಡಿರುವ “ಜಾರಿ ಪ್ರಕರಣ ಮಾಹಿತಿ ವರದಿ’ಯ (ಇಸಿಐಆರ್) ದಾಖಲೆಗಳನ್ನು ಜಾರಿ ನಿರ್ದೇಶನಾಲಯ ಗುರುವಾರ ಹೈಕೋರ್ಟ್ಗೆ ಸಲ್ಲಿಸಿದೆ.
ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾ| ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಜಾರಿ ನಿರ್ದೇಶನಾಲಯದ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಮುಚ್ಚಿದ ಲಕೋಟೆಯಲ್ಲಿ ಇಸಿಐಆರ್ ಸಲ್ಲಿಸಿದರು. ಆಗ ಲಕೋಟೆ ತೆರದು ಇಸಿಐಆರ್ ವರದಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳು, ಬಳಿಕ ಅದನ್ನು ವಾಪಸ್ ನೀಡಿದರು. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಆ ವರದಿಯನ್ನು ಕೇಳುತ್ತೇನೆ ಎಂದು ಹೇಳಿದರು. ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ ವಿಚಾರಣೆಯನ್ನು ಮಾ. 18ಕ್ಕೆ ಮುಂದೂಡಿತು.
ಇದೇ ವೇಳೆ ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ಇನ್ನೂ ತನಿಖೆ ಬಾಕಿ ಇದೆ. ಈಗ ಆರೋಪಿಗಳಿಂದ ಯಾವುದೇ ದಾಖಲೆಗಳನ್ನು ಕೇಳಿಲ್ಲ. ಕೇವಲ ಅವರಿಗೆ ಹಾಜರಾಗಲು ಸೂಚಿಸಲಾಗಿದೆ. ಮೇಲ್ನೋಟಕ್ಕೆ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ. ತನಿಖೆ ನಡೆದರೆ ಬೇರೆ ಅಂಶಗಳು ಲಭ್ಯವಾಗಬಹುದು. ಮೇಲಾಗಿ ಅರ್ಜಿದಾರರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೂ ಅವರು ಸಮನ್ಸ್ ರದ್ದು ಕೋರಿರುವುದು ನ್ಯಾಯಸಮ್ಮತವಲ್ಲ ಮತ್ತು ಈ ಹಂತದಲ್ಲಿ ಇದೊಂದು ಅಪಕ್ವ ವಾದವಾಗಿದೆ. ಆದ್ದರಿಂದ ಅರ್ಜಿದಾರರ ಮನವಿಯನ್ನು ಪುರಸ್ಕರಿಸಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ