ಗ್ರಾ.ಪಂ. ಕಣಕ್ಕೆ ವಿದ್ಯಾವಂತರು: ಎಂಜಿನಿಯರ್‌, ಶಿಕ್ಷಕರು, ಉಪನ್ಯಾಸಕರ ಉಮೇದುವಾರಿಕೆ


Team Udayavani, Dec 21, 2020, 6:28 AM IST

ಗ್ರಾ.ಪಂ. ಕಣಕ್ಕೆ ವಿದ್ಯಾವಂತರು: ಎಂಜಿನಿಯರ್‌, ಶಿಕ್ಷಕರು, ಉಪನ್ಯಾಸಕರ ಉಮೇದುವಾರಿಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ನಮ್ಮೂರಿನ ಅಭಿವೃದ್ಧಿಯೇ ನಮ್ಮ ಪರಮ ಧ್ಯೇಯವಾಗಿದೆ… -ಇದು ಈ ಬಾರಿ ಗ್ರಾ.ಪಂ. ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ಅದೆಷ್ಟೋ ವಿದ್ಯಾವಂತರ ಆಶಯ. ಗ್ರಾ.ಪಂ. ಚುನಾವಣೆಯ ದಿನಾಂಕ ನಿಗದಿಯಾಗುತ್ತಿದ್ದಂತೆ, “ಉದಯವಾಣಿ’ ಪತ್ರಿಕೆ “ಹಸನಾಗಲಿ ಹಳ್ಳಿ’ ಎಂಬ ಆಶಯದೊಂದಿಗೆ ಗ್ರಾಮ ಕಟ್ಟುವ ಕೆಲಸದಲ್ಲಿ ವಿದ್ಯಾವಂತರು ಕೈಜೋಡಿಸಲಿ ಎಂಬ ಆಶಯ ವ್ಯಕ್ತಪಡಿಸಿತ್ತು.
ಈಗ ಎರಡೂ ಹಂತಗಳ ಚುನಾವಣೆಗೆ ವೇದಿಕೆ ಸಿದ್ಧವಾಗಿದ್ದು, ಸಾವಿರಾರು ವಿದ್ಯಾವಂತರು ಕಣದಲ್ಲಿದ್ದಾರೆ. ನಮ್ಮಿಂದಲೇ ನಮ್ಮೂರ ಅಭಿವೃದ್ಧಿಯಾಗಲಿ ಎಂದು ಹೇಳಿಕೊಂಡಿದ್ದಾರೆ.

ನಗರದಲ್ಲಿ ಎಂಜಿನಿಯರ್‌ ಆಗಿದ್ದು ಕೆಲಸ ಬಿಟ್ಟು ಹಳ್ಳಿಗೆ ಹೋಗಿ ಕಣಕ್ಕಿಳಿದವರು ಕೆಲವರಾದರೆ, ಹಲವೆಡೆ ಉಪನ್ಯಾಸಕರು ಸ್ಪರ್ಧೆಗಿಳಿದಿದ್ದಾರೆ. ರಾಜಕೀಯ ಹಿನ್ನೆಲೆ ಇಲ್ಲದ ಯುವತಿಯರೂ ಇರುವುದು ವಿಶೇಷ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಯುವಸಮೂಹ ಕಣಕ್ಕಿಳಿದಿದೆ ಎಂಬುದು ಜಿಲ್ಲಾ ಚುನಾವಣಾಧಿಕಾರಿಗಳಿಂದ ಸಂಗ್ರಹಿಸಿದ ಮಾಹಿತಿಯಲ್ಲಿ ಸ್ಪಷ್ಟವಾಗುತ್ತದೆ.

ಕೋವಿಡ್‌-19ರಿಂದಾಗಿ ಅತ್ಯಂತ ಅಸಾಧಾರಣ ಮತ್ತು ಸವಾಲಿನ ಸಂದರ್ಭದಲ್ಲಿ ಈ ಬಾರಿಯ ಚುನಾವಣೆ ನಡೆಯುತ್ತಿದೆ. ಕೊರೊನಾ ಲಕ್ಷಾಂತರ ಮಂದಿಯನ್ನು ಹಳ್ಳಿಗಳತ್ತ ತೆರಳುವಂತೆ ಮಾಡಿದೆ. ಅವರು ಹಳ್ಳಿಯಲ್ಲೇ ಇದ್ದು ಬದುಕಿಗೊಂದು ನೆಲೆ ಕಂಡುಕೊಳ್ಳುವ “ಆವಿಷ್ಕಾರ’ಗಳಲ್ಲಿ ತೊಡಗಿದ್ದಾರೆ. ಅದರಲ್ಲೂ ಸೇವಾ ಮನೋಭಾವ ಹೊಂದಿರುವವರಿಗೆ ಗ್ರಾ.ಪಂ. ಚುನಾವಣೆ ಹೊಸ ಅವಕಾಶವನ್ನು ತೆರೆದಿದೆ. ವಿಶೇಷವಾಗಿ ಉನ್ನತ ಶಿಕ್ಷಣ ಪಡೆದವರು, ಟೆಕ್ಕಿಗಳ ಸಹಿತ ವಿದ್ಯಾವಂತರ ದೊಡ್ಡ ವರ್ಗವೊಂದು ಈ ಬಾರಿಯ ಗ್ರಾ.ಪಂ. ಚುನಾವಣೆಯ ಕಣಕ್ಕಿಳಿದಿದೆ.

ಇಂಥ ವಿದ್ಯಾವಂತರು ಕಣಕ್ಕಿಳಿದರೆ ಗ್ರಾಮಗಳು ಉದ್ಧಾರವಾಗಬಹುದು, ಗ್ರಾ.ಪಂ.ಗಳ ಮೂಲ ಆಶಯ ಈಡೇರಬಹುದು ಎಂಬುದು ರಾಜ್ಯ ಚುನಾವಣಾ ಆಯೋಗದ ಆಶಯವೂ ಆಗಿದೆ. ರಾಜ್ಯದ ಗ್ರಾ. ಪಂ.ಗಳಿಗೆ ಡಿ. 22 ಮತ್ತು ಡಿ. 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ವಿದ್ಯಾವಂತರು, ಅರ್ಹರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು ಎಂಬುದು ಚುನಾವಣ ಅಯೋಗದ ಆಶಯ. ಅದರಂತೆ ಈ ಬಾರಿ ವಿದ್ಯಾವಂತರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಸ್ವಾಗತಾರ್ಹ ಮತ್ತು ಆಶಾದಾಯಕ ಬೆಳವಣಿಗೆ.
– ಡಾ| ಬಿ. ಬಸವರಾಜು, ರಾಜ್ಯ ಚುನಾವಣ ಆಯುಕ್ತ

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.