ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಿರಾಸೆ
ಬಜೆಟ್ ವಿಶ್ಲೇಷಣೆ
Team Udayavani, Mar 6, 2020, 3:04 AM IST
ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಜನರ ಬೇಡಿಕೆಯಿದ್ದದ್ದು ಎಲ್ಲ ಮಕ್ಕಳಿಗೆ ಸಮಾನ ಅವಕಾಶದ ಮೂಲಕ ಸಮಾನ ಗುಣಮಟ್ಟದ ಶಿಕ್ಷಣ ಒದಗಿಸ ಬಹು ದಾದ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಿಕೊಡ ಬೇಕೇಂಬುದು. ಆದರೆ, ಮುಖ್ಯಮಂತ್ರಿಯವರು ಮಂಡಿಸಿದ ಆಯವ್ಯಯ ನಿರಾಶ ದಾಯಕ ಮಾತ್ರವಲ್ಲದೆ, ಜನರನ್ನು ದಾರಿತಪ್ಪಿಸುವ ಮತ್ತು ಹಿಡಿಯಾಗಿ ನೋಡಬೇಕಿದ್ದ ಶಿಕ್ಷಣ ವ್ಯವಸ್ಥೆಯನ್ನು ಬಿಡಿಬಿಡಿಯಾಗಿ ವಿಂಗಡಿಸಿ ಶಿಕ್ಷಣ ವ್ಯವವ್ಯಸ್ಥೆಯಲ್ಲಿ ಮತ್ತಷ್ಟು ಅರಾಜಕತೆ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ.
276 ಕರ್ನಾಟಕ ಪಬ್ಲಿಕ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಿ ಉಳಿದ ಸುಮಾರು 43,000 ಸಾವಿರ ಪ್ರಾಥಮಿಕ ಶಾಲೆ ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳನ್ನು ನಿರ್ಲಕ್ಷಿಸಲಾಗಿದೆ. ಶಿಕ್ಷಣಕ್ಕೆ 29,768 ಕೋಟಿ ಮೀಸಲಿಡುವ ಮೂಲಕ ಕಳೆದ ಬಾರಿಗಿಂತ 1617 ಕೋಟಿ ಅನುದಾನ ಹೆಚ್ಚಿಸಲಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅತ್ಯಂತ ವೈಜ್ಞಾನಿಕ ಮತ್ತು ಸಮಗ್ರ ವರದಿ ಸಲ್ಲಿಸಿ 3 ವರ್ಷ ಕಳೆದರೂ ಅನುಷ್ಠಾನದ ಮಾತಾಡಿಲ್ಲ.
ಕನ್ನಡ ಶಾಲೆಗಳನ್ನು ಆಂಗ್ಲಮಾಧ್ಯಮ ಶಾಲೆಗಳನ್ನಾಗಿ ಮಾಡಿದ್ದನ್ನು ವಿಸ್ತರಿಸಿ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಸರ್ಕಾರ ಮುಂ ದಾಗಿರುವುದು ದೇಶೀ ಸಂಸ್ಕೃತಿಯ ಮಾತೃ ಭಾಷೆಯಲ್ಲಿ ಶಿಕ್ಷಣವನ್ನು ಒದಗಿ ಸಲು ನಾವು ಸಿದ್ಧರಿಲ್ಲ ಎಂಬುದನ್ನು ಸರ್ಕಾರ ಅಧಿಕೃತವಾಗಿ ಸ್ಪಷ್ಟಿಸಿದಂತಿದೆ.
ಮಕ್ಕಳ ಆಯವ್ಯಯ ಮಂಡಿಸುವ ಕ್ರಮ ಶ್ಲಾಘನೀಯ ಎನಿಸಿದರೂ , ಮಕ್ಕಳಿಗೆ ಹೆಚ್ಚಿನ ಅನುದಾನ ಕೊಡುವ ಬದಲು ವಿವಿಧ ಇಲಾಖೆಗಳು ಮಕ್ಕಳಿಗೆ ಖರ್ಚು ಮಾಡುತ್ತಿದ ಹಣವನ್ನು ಒಟ್ಟಿಗೆ ಕೂಡಿಸಿ ಅದನ್ನು ಮಕ್ಕಳ ಆಯವ್ಯಯ ಎಂದು ಕರೆಯುವುದರಲ್ಲಿ ಯಾವ ಸಾರ್ಥಕತೆಯಿಲ್ಲ. ಬದಲಿಗೆ ರಾಜ್ಯದ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಆಯ ವ್ಯಯದಲ್ಲಿ ಕನಿಷ್ಠ ಶೇಕಡ 30ರಷ್ಟನ್ನಾದರು ಅನುದಾನ ಒದಗಿಸುವ ಪ್ರಯತ್ನ ವಾಗಿದ್ದರೆ ಅದು ನಿಜಕ್ಕೂ ಮಕ್ಕಳ ಆಯ ವ್ಯಯ ಕಲ್ಪನೆಗೆ ಹೊಸ ಅರ್ಥ ತರುತಿತ್ತು.
* ಡಾ.ವಿ.ಪಿ.ನಿರಂಜನಾರಾಧ್ಯ, ಶಿಕ್ಷಣ ತಜ್ಞ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ