“ಮಾತೃಪೂರ್ಣ’ ಪರಿಣಾಮಕಾರಿ ಜಾರಿಗೆ ಬೇಕು 15 ದಿನ


Team Udayavani, Oct 6, 2017, 10:31 AM IST

06-6.jpg

ಬೆಂಗಳೂರು: ರಾಜ್ಯದ ಗರ್ಭಿಣಿ, ಬಾಣಂತಿಯರಿಗೆ ಮಧ್ಯಾಹ್ನ ಪೌಷ್ಟಿಕ ಬಿಸಿಯೂಟ ವಿತರಿಸುವ “ಮಾತೃ ಪೂರ್ಣ’ ಯೋಜನೆಗೆ ಸರ್ಕಾರ ಗಾಂಧಿ ಜಯಂತಿಯಂದು ಚಾಲನೆ ನೀಡಿದೆ. ಆದರೂ ರಾಜ್ಯದೆಲ್ಲೆಡೆ ಈ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಇನ್ನೂ 15 ದಿನ ಬೇಕಾಗಬಹುದು!

ಪೌಷ್ಟಿಕ ಬಿಸಿಯೂಟ ತಯಾರಿ, ವಿತರಣೆಗೆ ಪಾತ್ರೆ, ತಟ್ಟೆ, ಲೋಟ, ಅಡುಗೆ ಅನಿಲ ಸಿಲಿಂಡರ್‌, ಕುಕ್ಕರ್‌ ಇತರೆ
ಪರಿಕರಗಳು ಅಗತ್ಯ. ಇವುಗಳ ಪೂರೈಕೆಗೆ ಹಲವೆಡೆ ಟೆಂಡರ್‌ ಪ್ರಕ್ರಿಯೆ ನಡೆದಿದೆ. 15 ದಿನಗಳಲ್ಲಿ ಎಲ್ಲ ಅಂಗನ
ವಾಡಿಗಳಿಗೂ ಅಗತ್ಯ ಪರಿಕರಗಳು ಪೂರೈಕೆಯಾದರೆ ಪರಿಣಾಮಕಾರಿ ಯಾಗಿ ಜಾರಿಯಾಗುವ ಸಾಧ್ಯತೆಯಿದೆ.
ಮುಖ್ಯಮಂತ್ರಿಗಳು 2017-18ನೇ ಸಾಲಿನ ಬಜೆಟ್‌ ನಲ್ಲೇ ಮಾತೃಪೂರ್ಣ ಯೋಜನೆ ಘೋಷಿಸಿದ್ದರೂ ಅದಕ್ಕೆ
ಪೂರಕ ಸಿದ್ಧತೆ ಸಕಾಲದಲ್ಲಿ ಕೈಗೊಂಡಂತಿಲ್ಲ. ಏಕೆಂದರೆ ಯೋಜನೆಯ ಪರಿಣಾಮಕಾರಿ ಜಾರಿಗೆ ಅಗತ್ಯ ಪರಿಕರ
ಗಳನ್ನು ಪೂರೈಸುವ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ ಜಾರಿ ನಿಧಾನವಾಗಿದೆ. ಕೆಲವು ಪ್ರದೇಶಗಳಲ್ಲಿ
ಸಂಘ-ಸಂಸ್ಥೆಗಳು ಪರಿಕರಗಳನ್ನು ದೇಣಿಗೆ ನೀಡುತ್ತಿವೆ. 

ಇನ್ನೂ ಟೆಂಡರ್‌ ಪ್ರಕ್ರಿಯೆ: ಕುಕ್ಕರ್‌, ಅಡುಗೆ ಅನಿಲ ಸಿಲಿಂಡರ್‌, ಬರ್ನಲ್‌, ತಟ್ಟೆ, ಲೋಟಗಳ ಪೂರೈಕೆಗೆ ಬಹಳಷ್ಟು ಕಡೆ ಇನ್ನೂ ಟೆಂಡರ್‌ ಪ್ರಕ್ರಿಯೆ ನಡೆದಿದೆ. ಜಿಲ್ಲಾಧಿಕಾರಿ ನೇತೃತ್ವದ ಸಮಿತಿ, ತಾಪಂ ಸಿಇಒಗಳ ಸಹಯೋಗದಲ್ಲಿ ಟೆಂಡರ್‌ ಪ್ರಕ್ರಿಯೆ ನಡೆಸಿ ಪೂರೈಕೆಗೆ ಕ್ರಮ ವಹಿಸುತ್ತಿದೆ. ಬಹಳಷ್ಟು ಕಡೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿ ಯರು ಲಭ್ಯವಿರುವ ಪಾತ್ರೆ, ಪರಿಕರಗಳನ್ನೇ ಬಳಸಿ ವಿತರಿಸುತ್ತಿದ್ದಾರೆ. ಕೆಲವೆಡೆ ಊಟ ವಿತರಣೆ ಸಮಯದಲ್ಲೂ ವ್ಯತ್ಯಯವಾಗಿದೆ. ಪ್ರತಿ ಅಂಗನವಾಡಿಯಲ್ಲಿ ಸರಾಸರಿ 10 ಗರ್ಭಿಣಿ ಯರು, ಬಾಣಂತಿಯರಿದ್ದಾರೆ. ಆದರೆ ನಗರ, ಪಟ್ಟಣ ಪ್ರದೇಶದ ಕೆಲ ಅಂಗನವಾಡಿ ಯಲ್ಲಿ 30- 40 ಗರ್ಭಿಣಿ, ಬಾಣಂತಿಯರು ನೋಂದಣಿಯಾಗಿದ್ದಾರೆ. ಅವರಿಗೆಲ್ಲ ತಟ್ಟೆ, ಲೋಟ ಹೊಂದಿಸುವುದು ಸವಾಲೆನಿಸಿದೆ. ಮಕ್ಕಳು ಬಳಸಿದ ತಟ್ಟೆ, ಲೋಟಗಳನ್ನು ಸ್ವತ್ಛಗೊಳಿಸಿ ನೀಡುವ ಹೊತ್ತಿಗೆ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ. ಮೊಟ್ಟೆ, ತರಕಾರಿ ಇತರೆ ಪದಾರ್ಥಗಳ ಖರೀ ದಿಗೆ ಬಾಲವಿಕಾಸ ಸಮಿತಿಯೊಂದಿಗೆ ಜಂಟಿ ಬ್ಯಾಂಕ್‌ ಖಾತೆ ತೆರೆಯಬೇಕೆಂಬ ನಿಯಮ ಸರಿ ಯಲ್ಲ. ಬದಲಿಗೆ ಸಂಬಂಧಪಟ್ಟ ಅಧಿಕಾರಿಗ ಳೊಂದಿಗೆ ಜಂಟಿ ಖಾತೆ ತೆರೆಯುವುದು ಸೂಕ್ತ ಎಂಬುದನ್ನು ಹಿರಿಯ ಅಧಿಕಾರಿ ಗಳ ಗಮನಕ್ಕೆ ತರಲಾಗಿದೆ ಎಂದು ಅಂಗನವಾಡಿ ಕಾರ್ಯ ಕರ್ತೆ ಎಸ್‌.ನಾಗರತ್ನಾ ಹೇಳುತ್ತಾರೆ.

15 ದಿನಗಳಲ್ಲಿ ಪೂರೈಕೆ: ಇನ್ನೂ 15 ದಿನದೊಳಗೆ ಎಲ್ಲೆಡೆ ಪರಿಕರಗಳು ಪೂರೈಕೆಯಾಗುವ ವಿಶ್ವಾಸ ವಿದೆ. ಸದ್ಯಕ್ಕೆ
ಅಂಗನವಾಡಿಯಲ್ಲಿ ಲಭ್ಯವಿರುವ ಪರಿಕರಗಳನ್ನೇ ಬಳಸಿ ಕೊಂಡು ಊಟ ವಿತರಿಸು ವಂತೆ ಸೂಚಿಸಲಾಗಿದೆ ಎಂದು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿ ಯೊಬ್ಬರು ತಿಳಿಸುತ್ತಾರೆ.

ಊಟದಲ್ಲಿರುವ ಪೌಷ್ಟಿಕ ಆಹಾರಗಳು…: ಮಧ್ಯಾಹ್ನದ  ಪೌಷ್ಟಿಕ ಬಿಸಿಯೂಟದಲ್ಲಿ ಅನ್ನ, ತರಕಾರಿ ಸಾಂಬಾರ್‌,
ಪಲ್ಯದ ಜತೆಗೆ ಬೇಯಿಸಿದ ಮೊಟ್ಟೆ, 200 ಮಿ.ಲೀ. ಹಾಲು ಹಾಗೂ ಕಡಲೆ ಮಿಠಾಯಿ ನೀಡಲಾಗುತ್ತದೆ. ಮೊಟ್ಟೆ ಸೇವಿ
ಸದವರಿಗೆ ಮೊಳಕೆ ಕಾಳು ವಿತರಿಸಲಾಗುತ್ತದೆ. ಗರ್ಭಿಣಿ, ಬಾಣಂತಿಯರಿಗೆ ಒಂದು ದಿನಕ್ಕೆ ಬೇಕಾಗುವ ಪ್ರೊಟೀನ್‌,
ಕ್ಯಾಲಿÏಯಂ ಕ್ಯಾಲೋರಿಯ ಅಂಶಗಳಲ್ಲಿ ಶೇ.40ರಿಂದ ಶೇ.45ರಷ್ಟು ಅಂಶ ಒಂದು ಊಟ ಒದಗಿಸಲಿದೆ. ತಿಂಗಳಲ್ಲಿ 25 ದಿನ ಊಟ ವಿತರಿಸಲಾಗುತ್ತದೆ. 8 ತಿಂಗಳು ತುಂಬಿದ ಗರ್ಭಿಣಿಯರು ಹೆರಿಗೆಯಾಗಿ 45 ದಿನದವರೆಗೆ ಮನೆಗೆ ಊಟ ನೀಡಲಾಗುತ್ತದೆ. ಈ ಯೋಜನೆಗೆ ಬಿಪಿಎಲ್‌, ಎಪಿಎಲ್‌ ಎಂಬ ಮಾನದಂಡವಿಲ್ಲ. ಯಾರು ಬೇಕಾದರೂ ನೋಂದಣಿ ಮಾಡಿಸಿ ಪಡೆಯಬಹುದು. ಯೋಜನೆಯಡಿ ಗರ್ಭ ಧರಿಸಿದಾಗಿನಿಂದ ಆರು ತಿಂಗಳ ಬಾಣಂತಿವರೆಗೆ ಊಟ ವಿತರಿಸಲಾಗುವುದು. 

ಮನೆಗೆ ಪೂರೈಕೆ ಸ್ಥಗಿತ
ಈ ಹಿಂದೆ ಬಿಪಿಎಲ್‌ ಕುಟುಂಬದ ನೋಂದಾಯಿತ ಗರ್ಭಿಣಿ, ಬಾಣಂತಿಯರಿಗೆ ತಿಂಗಳಿಗೆ 2.50 ಕೆ.ಜಿ. ಅಕ್ಕಿ, 3 ಕೆ.ಜಿ. ಗೋಧಿ, 500 ಗ್ರಾಂ. ಹೆಸರುಕಾಳು, 750 ಗ್ರಾಂ. ಬೆಲ್ಲ, 500 ಗ್ರಾಂ. ಕಡಲೆ ಬೀಜವನ್ನು ದಿನಕ್ಕೆ ಏಳು ರೂ. ವೆಚ್ಚದಂತೆ ಮನೆಗಳಿಗೆ ಪೂರೈಸಲಾಗುತ್ತಿತ್ತು. ಮಾತೃಪೂರ್ಣ ಯೋಜನೆ ಜಾರಿಯಿಂದಾಗಿ ಅಕ್ಟೋಬರ್‌ನಿಂದ ಪೂರೈಕೆ ಸ್ಥಗಿತಗೊಳಿಸಲಾಗಿದೆ. 

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.