
ಮೊಟ್ಟೆ ಎಸೆದಿರುವುದನ್ನು ಒಪ್ಪಲಾಗದು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಸಾರ್ವಕರ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯೂ ಸರಿಯಲ್ಲ
Team Udayavani, Aug 19, 2022, 5:06 PM IST

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಾಹನ ಮೇಲೆ ಮೊಟ್ಟೆ ಎಸೆದಿರುವುದನ್ನು ಒಪ್ಪಲಾಗದು.ಅದೇ ರೀತಿ ಸಿದ್ದರಾಮಯ್ಯ ಅವರು ಸಾರ್ವಕರ್ ಅವರ ಬಗ್ಗೆ ನೀಡಿದ ಹೇಳಿಕೆಯೂ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವಾಹನ ಮೇಲೆ ಮೊಟ್ಟೆ ಎಸೆದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಖಂಡಿಸಿದ್ದಾರೆ. ನಾನು ಕೂಡ ತೀವ್ರವಾಗಿ ಖಂಡಿಸುತ್ತೇನೆ. ವೈಚಾರಿಕ ಭಿನ್ನಾಭಿಪ್ರಾಯ ಏನೇ ಇರಲಿ ಯಾರು ಲಕ್ಷ್ಮಣ ರೇಖೆ ದಾಟಬಾರದು, ಹಿಂಸಾಮಾರ್ಗ ಹಿಡಿಯಬಾರದು.ಇಂತಹ ಸಂಸ್ಕೃತಿ ಸಹಿಸಲಾಗದು. ಬಿಜೆಪಿ ಒಪ್ಪುವುದಿಲ್ಲ ಎಂದರು.
ಸಾರ್ವಕರ್ ಬಗ್ಗೆ ಹಗುರವಾಗಿ ಮಾತನಾಡುವ ಬದಲು ಸಿದ್ದರಾಮಯ್ಯ ಅವರು ಅವರದ್ದೇ ಪಕ್ಷದ ನಾಯಕಿ ಇಂದಿರಾಗಾಂಧಿ ಅವರು ಬರೆದ ಪತ್ರವಾದರು ಓದಲಿ, ಅವರ ದೇಶಭಕ್ತಿ ಬಗ್ಗೆ ತಿಳಿದುಕೊಳ್ಳಲಿ.ಮತ ತುಷ್ಠೀಕರಣಕ್ಕಾಗಿ ಸಿದ್ದರಾಮಯ್ಯ ಸಂಘ, ಸಂಘನಾಯಕರ ಬಗ್ಗೆ ಹಗುರವಾಗಿ ಹೇಳಿಕೆ ನೀಡುತ್ತಿದ್ದಾರೆ . ದೇಶದ ಎಲ್ಲ ಕಡೆ ಕಾಂಗ್ರೆಸ್ ಜನರಿಂದ ತಿರಸ್ಕರಿಸಲ್ಪಟ್ಟಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಹಗಲುಗನಸು ಕಾಂಗ್ರೆಸ್ಸಿಗರದಾಗಿದೆ. ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದರು.
ಬೇಜವಾಬ್ದಾರಿ ಹೇಳಿಕೆಬೇಡ
ರಾಯಚೂರು ಜಿಲ್ಲೆ ತೆಲಂಗಾಣ ಸೇರಲು ಸಜ್ಜಾಗಿದೆ ಎಂಬ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಅವರ ಹೇಳಿಕೆ ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.ಜವಾಬ್ದಾರಿ ಸ್ಥಾನದಲ್ಲಿರುವ ಕೆಸಿಆರ್, ಒಕ್ಕೂಟ ವ್ಯವಸ್ಥೆ , ಭಾಷಾ ಬಾಂಧವ್ಯ ಕ್ಕೆ ಧಕ್ಕೆ ತರುವ ಯತ್ನ ಸಿಎಂ ಸ್ಥಾನದಲ್ಲಿದ್ದವರು ಮಾಡುವುದು ಸರಿಯಲ್ಲ.ನಮ್ಮದೇ ಪಕ್ಷ ರಾಯಚೂರು ಶಾಸಕರು ವರ್ಷದ ಹಿಂದೆ ಲಘು ದಾಟಿಯಲ್ಲಿ ಹೇಳಿದ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಸಿಎಂ ಸ್ಥಾನದಲ್ಲಿದ್ದವರು ಗಂಭೀರ ರೀತಿಯ ಹೇಳಿಕೆ ಸರಿಯಲ್ಲ.
ರಾಯಚೂರು ಶಾಸಕ ಡಾ.ಶಿವರಾಜ ಪಾಟೀಲ ಅವರ ಹೇಳಿಕೆಯನ್ನು ಆಗಲೇ ಖಂಡಿಸಿದ್ದೆ. ಈಗಲೂ ಹೇಳುವೆ ಸೂಕ್ಷ್ಮ ವಾದ ವಿಚಾರದಲ್ಲಿ ಲಘುವಾದ ಹೇಳಿಕೆ ಬೇಡ ಎಂಬುದು ನನ್ನ ಸಲಹೆಯಾಗಿದೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ
MUST WATCH
ಹೊಸ ಸೇರ್ಪಡೆ

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿ

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ