ಅಹಂಕಾರಿ ಸಿಎಂ, ಸರ್ಕಾರ


Team Udayavani, May 9, 2018, 6:00 AM IST

31.jpg

ಕೊಪ್ಪಳ/ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಮೂರು ದಿನ ಬಾಕಿ ಉಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾತಿನ ವೈಖರಿ ಚುರುಕುಗೊಳಿಸಿದ್ದು, ಕರ್ನಾಟಕದಲ್ಲಿ ಅಹಂಕಾರದ ಸರ್ಕಾರ ಮತ್ತು ಅಹಂಕಾರಿ ಮುಖ್ಯಮಂತ್ರಿ ಇದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಕೊಪ್ಪಳದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾವು ಕಾಮ್‌ಧಾರಿಗಳಾಗಿದ್ದರೆ, ಅವರು ನಾಮ್‌
ಧಾರಿಗಳಾಗಿದ್ದಾರೆ ಎಂದು ಮತ್ತೂಮ್ಮೆ ಟೀಕಿಸಿದರು. ನಾವು ಸಬ್‌ಕಾ ಸಾಥ್‌ ಸಬ್‌ಕಾ ವಿಕಾಸ್‌ನಂತೆ ನಡೆದರೆ, ಕಾಂಗ್ರೆಸ್‌ ನವರು ತಮ್ಮ ಕಾರ್ಯ ಸಾಧನೆಗಾಗಿ ದೇಶ, ರಾಜ್ಯ, ಜಾತಿ, ಪಂಥವನ್ನು ಒಡೆಯುತ್ತಾರೆ. ಮನೆತನಗಳನ್ನು ಒಡೆದಿದ್ದಾರೆ. ಅಂತಹ ಕುತಂತ್ರ, ವಿಚಿತ್ರ ಮನಸ್ಸಿನ ಕಾಂಗ್ರೆಸ್‌ ತೊಲಗಬೇಕಿದೆ ಎಂದರು.

ಸೋಲಿಗೆ ಕಾರಣ ಹುಡುಕುತ್ತಿದೆ: ಅತ್ತ ವಿಜಯಪುರದಲ್ಲಿ ಮಾತನಾಡಿದ ಅವರು, ಕರ್ನಾಟಕದಿಂದ ಕಾಂಗ್ರೆಸ್‌ ಅನ್ನು 
ಕಿತ್ತೂಗೆಯಬೇಕಿದೆ ಎಂದರು. ಅಲ್ಲದೆ ಈಗಾಗಲೇ ಸೋಲಿನ ಅರಿವಾಗಿದ್ದು ಕಾರಣಗಳನ್ನು ಹುಡುಕುತ್ತಿದೆ. ಇದಕ್ಕಾಗಿಯೇ ಇವಿಎಂಗಳ ಮೇಲೆ ಮತ್ತೆ ಆರೋಪ  ಮಾಡಲಾಗುತ್ತಿದೆ ಎಂದು ಛೇಡಿಸಿದರು. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರದ ಆರೋಪ ಇಲ್ಲದ ಒಬ್ಬ
ಸಚಿವರ ಹೆಸರು ಹೇಳಿ ಎಂದು ಸಾರ್ವಜನಿಕರನ್ನು ಕೇಳಿದ ಮೋದಿ ಅವರು, ನಿಮ್ಮ ಜಿಲ್ಲೆಯ ನೀರಾವರಿ ಸಚಿವರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅವರು ಯಾರ್ಯಾರಿಗೆ ಗುತ್ತಿಗೆ ನೀಡಿದ್ದಾರೆ, ಯಾರ್ಯಾರ ತಿಜೋರಿಯಲ್ಲಿ ಎಷ್ಟೆಷ್ಟು ಹಣ ಇಟ್ಟಿದ್ದಾರೆ ಎಂದೆಲ್ಲ ನಮಗೆ ಗೊತ್ತು. ಇವರು ಗುತ್ತಿಗೆ ಪಡೆದ ಗುತ್ತಿಗೆದಾರರೆಲ್ಲ ಹೆಲಿಕಾಪ್ಟರ್‌ನಲ್ಲಿ ಸುತ್ತಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಸಿದ್ದುರನ್ನು ಮನೆಗೆ ಕಳುಹಿಸಿ
ಈ ಮಧ್ಯೆ ಮಂಗಳೂರಿನಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್‌ ಶಾ ಅವರು, ಮೇ 15 ರಂದು ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಮನೆಗೆ ಕಳುಹಿಸಿ ಎಂದು ಆಗ್ರಹಿಸಿದರು. ಈ ಮೂಲಕ ಪ್ರಧಾನಿ ಮೋದಿ ಅವರ ಕೈಯನ್ನು ಭದ್ರಗೊಳಿಸಿ ಎಂದರು. ಈ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಹತ್ಯೆಯಾಗುತ್ತಿದ್ದು ಇದುವರೆಗೂ ಯಾರೊಬ್ಬರದ್ದೂ ಬಂಧನವಾ ಗಿಲ್ಲ. ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಕ್ಕೇರುತ್ತಿ ದ್ದಂತೆ, ತಪ್ಪಿತಸ್ಥ ರನ್ನು ಪತ್ತೆಹಚ್ಚಲಾಗುವುದು ಎಂದು ಭರವಸೆ ನೀಡಿದರು.

24ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿ ದ್ದರೂ ಜಿಹಾದಿ ಶಕ್ತಿಗಳನ್ನು ಮಟ್ಟ ಹಾಕಲು ಸರ್ಕಾರ ಕ್ರಮ ಕೈಗೊಂಡಿಲ್ಲ. ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜಿಹಾದಿ, ಮಾμಯಾ, ಗೂಂಡಾ ಗಿರಿಗಳ ಹುಟ್ಟಡಗಿಸಲಾಗಿದೆ.
● ಯೋಗಿ ಆದಿತ್ಯನಾಥ್‌, ಉತ್ತರ ಪ್ರದೇಶ ಸಿಎಂ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.