Election ಬಳಿಕ ಎಸ್ಟಿಎಸ್ ವಿರುದ್ಧ ಕ್ರಮ: ಅಶೋಕ್
Team Udayavani, Apr 6, 2024, 11:09 PM IST
ಬೆಂಗಳೂರು: ಬಿಜೆಪಿ ಯಲ್ಲಿದ್ದುಕೊಂಡು ಕಾಂಗ್ರೆಸ್ ಪರ ಕೆಲಸ ಮಾಡುತ್ತಿರುವ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಲೋಕಸಭೆ ಚುನಾವಣೆ ಬಳಿಕ ಕ್ರಮ ಆಗಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಶನಿವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸೋಮಶೇಖರ್ ನಾಲ್ಕು ತಿಂಗಳ ಹಿಂದೆಯೇ ಬಿಜೆಪಿಯಿಂದ ಕಾಲು ಆಚೆಗಿಟ್ಟಿದ್ದಾರೆ. ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ವಿಪ್ ಉಲ್ಲ ಸಿ ಪಕ್ಷದ ವಿರುದ್ಧ ಮತ ಚಲಾವಣೆ ಮಾಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಶಾಸಕರಾಗಿ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಂಡಿ ರುವುದೂ ಅಲ್ಲದೆ, ನಮ್ಮ ಪಕ್ಷದ ಅಭ್ಯರ್ಥಿ ವಿರುದ್ಧವೇ ಮಾತನಾಡಿ ತಪ್ಪು ಮಾಡಿದ್ದಾರೆ ಎಂದರು.