“ಲೋಕ ಸಮರ’ ಆಯೋಗಕ್ಕೆ ಬೇಕು 500 ಕೋ.ರೂ.

ಚುನಾವಣ ಆಯೋಗದಿಂದ ಒಂದು ಲೋಕಸಭಾ ಕ್ಷೇತ್ರಕ್ಕೆ ಸರಾಸರಿ 17ರಿಂದ 18 ಕೋಟಿ ರೂ. ವೆಚ್ಚ

Team Udayavani, Mar 27, 2024, 7:30 AM IST

“ಲೋಕ ಸಮರ’ ಆಯೋಗಕ್ಕೆ ಬೇಕು 500 ಕೋ.ರೂ.

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣ ವೆಚ್ಚ 500 ಕೋಟಿ ರೂ. ಗಡಿ ದಾಟಲಿದೆ. ರಾಜ್ಯದಿಂದ 28 ಸಂಸದರನ್ನು ಲೋಕಸಭೆಗೆ ಕಳಿಸಬೇಕಾದರೆ ಚುನಾವಣ ಆಯೋಗ ಇಷ್ಟೊಂದು ಭಾರಿ ಮೊತ್ತ ಖರ್ಚು ಮಾಡಬೇಕಾಗುತ್ತದೆ. ಅದರಂತೆ ನಮ್ಮ ಒಬ್ಬ ಸಂಸದ ಲೋಕಸಭೆ ಮೆಟ್ಟಿಲೇರಬೇಕಾದರೆ ಚುನಾವಣ ಆಯೋಗ ಒಂದು ಕ್ಷೇತ್ರಕ್ಕೆ ಸರಾಸರಿ 17ರಿಂದ 18 ಕೋಟಿ ರೂ. ವೆಚ್ಚ ಮಾಡಬೇಕಾಗುತ್ತದೆ. ಗಮನದಲ್ಲಿರಲಿ ಇದೆಲ್ಲವೂ ನಮ್ಮ ತೆರಿಗೆ ಹಣ.

ರಾಜ್ಯದಲ್ಲಿ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ 511 ಕೋಟಿ ರೂ. ವೆಚ್ಚವಾಗಿತ್ತು. ಒಂದು ವರ್ಷದೊಳಗೆ ಲೋಕಸಭೆ ಚುನಾವಣೆ ಬಂದಿರುವುದರಿಂದ ಚುನಾವಣ ವೆಚ್ಚದಲ್ಲಿ ಅಷ್ಟೊಂದು ವ್ಯತ್ಯಾಸವಾಗಲಿಕ್ಕಿಲ್ಲ. ಅಷ್ಟೇ ಹಣ ಲೋಕಸಭೆ ಚುನಾವಣೆಗೆ ಬೇಕಾಗಬಹುದು. ಅದರಂತೆ 2024ರ ಲೋಕಸಭೆ ಚುನಾವಣೆಯ ವೆಚ್ಚ 500 ಕೋಟಿ ದಾಟಬಹುದು ಎಂದು ಚುನಾವಣ ಆಯೋಗ ಅಂದಾಜಿಸಿದೆ.

ವಿಧಾನಸಭೆ, ಲೋಕಸಭೆಗೆ ಈಗಿನ ದಿನಗಳಲ್ಲಿ ಬಹುತೇಕ ಕೋಟ್ಯಾಧೀಶರೆ ಪ್ರವೇಶಿಸುತ್ತಿರುವುದು ವಾಸ್ತವ. ಆದರೆ, ಈ ಕೋಟ್ಯಾಧೀಶರರನ್ನು ಜನರ ಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿ ಕಳಿಸಲು ಚುನಾವಣ ಆಯೋಗವೂ ಕೋಟಿ ಕೋಟಿ ಖರ್ಚು ಮಾಡಬೇಕಾಗುತ್ತದೆ.

ಚುನಾವಣೆಯ ಹಿಂದಿನ ಒಂದು ವರ್ಷದಿಂದ ಆಯೋಗ ಸಿದ್ದತೆಗಳನ್ನು ಆರಂಭಿಸಿರುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆಯಿಂದ ಚುನಾವಣೆ ಘೋಷಣೆಯಾಗಿ ಮತದಾನದ ದಿನದವರೆಗೆ ಹಲವು ಹಂತಗಳಲ್ಲಿ ಆಯೋಗ ಚುನಾವಣ ವೆಚ್ಚ ಮಾಡಬೇಕಾಗುತ್ತದೆ.

ವೆಚ್ಚ ಹೆಚ್ಚಿಸಿದ ಇವಿಎಂ
ಚುನಾವಣ ವೆಚ್ಚ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲು ಇವಿಎಂ ಬಳಕೆಯೂ ಒಂದು ಕಾರಣ. ಸಾರ್ವತ್ರಿಕ ಚುನಾವಣೆಗಳಲ್ಲಿ ಇವಿಎಂ ಬಳಕೆ ಜಾರಿಗೆ ಬಂದ ಮೇಲೆ ವೆಚ್ಚವೂ ದುಬಾರಿ ಆಯಿತು. ಏಕೆಂದರೆ, ಬಹುಪಾಲು ಹಣ ಇವಿಎಂಗಳ ಖರೀದಿಗೆ ತಗಲುತ್ತದೆ. ಉಳಿದಂತೆ ಆಯಾ ಸಂದರ್ಭದ ಬೆಲೆ ಏರಿಕೆ ಸೂಚ್ಯಂಕವೂ ಚುನಾವಣ ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ. ಅದರಂತೆ 2014ರ ಲೋಕಸಭಾ ಚುನಾವಣೆ ವೇಳೆ 320 ಕೊಟಿ ರೂ. ವೆಚ್ಚವಾಗಿತ್ತು. ಆಗ ಒಂದು ಕ್ಷೇತ್ರಕ್ಕೆ ಸರಾಸರಿ 11 ಕೋಟಿ ರೂ. ವೆಚ್ಚವಾಗಿತ್ತು. 2019ರಲ್ಲಿ ಒಟ್ಟು ವೆಚ್ಚ 400 ಕೋಟಿ ರೂ. ಆಗಿತ್ತು. ಅದರಲ್ಲಿ ಒಂದು ಕ್ಷೇತ್ರಕ್ಕೆ ಸರಾಸರಿ 17 ಕೋಟಿ ರೂ. ವೆಚ್ಚ ತಗುಲಿತ್ತು. 2024ರಲ್ಲಿ ವೆಚ್ಚದ ಮಿತಿ 500 ಕೋಟಿ ರೂ.ಗಳ ಗಡಿ ದಾಟಲಿದ್ದು, ಒಂದು ಕ್ಷೇತ್ರಕ್ಕೆ 17ರಿಂದ 18 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

ದೇಶಕ್ಕೆ ಬೇಕು 4ರಿಂದ 5 ಸಾವಿರ ಕೋಟಿ?
ಪ್ರಪಂಚದ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳ ಪೈಕಿ ಅಗ್ರಗಣ್ಯ ಸ್ಥಾನದಲ್ಲಿರುವ ಭಾರತದ ಲೋಕಸಭೆಗೆ ಚುನಾಯಿತ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ನಡೆಸಲಾಗುವ ಸಾರ್ವತ್ರಿಕ ಚುನಾವಣೆಗೆ ಸರಕಾರದ ಖಜಾನೆಯಿಂದ ಕೋಟಿಗಟ್ಟಲೆ ಹಣ ವೆಚ್ಚ ಮಾಡಲಾಗುತ್ತದೆ. 2024ರ ಲೋಕಸಭೆ ಚುನಾವಣೆಗೆ ಇಡೀ ದೇಶದಲ್ಲಿ ವೆಚ್ಚ ಮಾಡಲು ಚುನಾವಣ ಆಯೋಗಕ್ಕೆ 4ರಿಂದ 5 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. 1952ರಲ್ಲಿ ನಡೆದ ದೇಶದ ಮೊದಲ ಲೋಕಸಭೆ ಚುನಾವಣೆಗೆ 10.45 ಕೋಟಿ ರೂ. ವೆಚ್ಚವಾಗಿತ್ತು. 2004ರಲ್ಲಿ ವೆಚ್ಚದ ಪ್ರಮಾಣ ಸಾವಿರ ಕೋಟಿ ಗಡಿ ದಾಟಿತು. 2004ರಲ್ಲಿ 1,113 ಕೋಟಿ ರೂ., 2009ರಲ್ಲಿ 1,483 ಕೋಟಿ ರೂ., 2014ರಲ್ಲಿ 3,870 ಕೋಟಿ ರೂ., 2019ರಲ್ಲಿ 4 ಸಾವಿರ ಕೋಟಿಗೂ ಅಧಿಕ ವೆಚ್ಚವಾಗಿತ್ತು. ಈ ಬಾರಿ 5 ಸಾವಿರ ಕೋಟಿ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಚುನಾವಣ ವೆಚ್ಚ ಏನೆಲ್ಲ ಒಳಗೊಂಡಿರುತ್ತದೆ?
ಕೇಂದ್ರ ಚುನಾವಣ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿ ಪರಿಷ್ಕರಣೆ, ಮತಗಟ್ಟೆಗಳ ಸ್ಥಾಪನೆ, ಮತಗಟ್ಟೆಗಳಿಗೆ ಬೇಕಾಗುವ ವ್ಯವಸ್ಥೆಗಳ ಪೂರೈಕೆ, ಮತ ಎಣಿಕೆ ಕೇಂದ್ರಗಳ ಸ್ಥಾಪನೆ, ಚುನಾವಣ ಸಿಬಂದಿಗೆ ವೇತನ-ಭತ್ತೆ, ಚುನಾವಣ ಸಿಬಂದಿಗೆ ಸಾರಿಗೆ ವ್ಯವಸ್ಥೆ, ಚುನಾವಣ ಸಾಮಗ್ರಿ ಸಾಗಾಣಿಕೆ, ಚುನಾವಣ ಸಿಬಂದಿಗೆ ತರಬೇತಿ, ಮತದಾನದ ದಿನದ ಖರ್ಚು ಇನ್ನಿತರ ಖರ್ಚುಗಳು ಒಟ್ಟಾರೆ ಚುನಾವಣ ವೆಚ್ಚದಲ್ಲಿ ಸೇರುತ್ತವೆ. ಲೋಕಸಭಾ ಚುನಾವಣೆಗೆ ಕಾನೂನು-ಸುವ್ಯವಸ್ಥೆಯ ವೆಚ್ಚ ಹೊರತುಪಡಿಸಿ ಉಳಿದಲ್ಲ ವೆಚ್ಚವನ್ನೂ ಕೇಂದ್ರ ಸರಕಾರ ಭರಿಸುತ್ತದೆ. ಕಾನೂನು-ಸುವ್ಯವಸ್ಥೆಗೆ ಬೇಕಾಗುವ ವೆಚ್ಚವನ್ನು ಆಯಾ ರಾಜ್ಯ ಸರಕಾರಗಳು ಭರಿಸುತ್ತವೆ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.