ಮೇಯಲ್ಲಿ ಚುನಾವಣೆ ಕಷ್ಟ ?

ಜಿ.ಪಂ. ತಾ.ಪಂ. ಸದಸ್ಯ ಸ್ಥಾನ ನಿಗದಿಪಡಿಸಿ ಚುನಾವಣ ಆಯೋಗ ಅಧಿಸೂಚನೆ, ಮೀಸಲಾತಿ ನಿಯಮಗಳ ಗೊಂದಲ ನಿವಾರಣೆಗೆ ಸ್ಪೀಕರ್‌ ಅಧ್ಯಕ್ಷತೆಯಲ್ಲಿ ಸಭೆ

Team Udayavani, Mar 26, 2021, 6:00 AM IST

ಮೇಯಲ್ಲಿ ಚುನಾವಣೆ ಕಷ್ಟ ?

ಬೆಂಗಳೂರು: ಚುನಾವಣೆಗಳನ್ನು ಮುಂದೂಡುವುದಿಲ್ಲ ಎಂದು ಸರಕಾರ ಹೇಳುತ್ತಿದೆ, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಿಯೇ ಸಿದ್ಧ ಎಂದು ರಾಜ್ಯ ಚುನಾವಣ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಕ್ಷೇತ್ರ ಮರುವಿಂಗಡಣೆ, ಮೀಸಲಾತಿಗೆ ಸಂಬಂಧಿಸಿದ ಸದ್ಯದ ಬೆಳವಣಿಗಳನ್ನು ಗಮನಿಸಿದರೆ ಮೇ ತಿಂಗಳಿನಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆ ನಡೆಯುವುದು ಅನುಮಾನ.

ಜಿ.ಪಂ. ಮತ್ತು ತಾ.ಪಂ.ಗಳಿಗೆ ಸದಸ್ಯ ಸ್ಥಾನಗಳ ಸಂಖ್ಯೆ ನಿಗದಿಪಡಿಸಿ ಚುನಾವಣ ಆಯೋಗ ಮಾ. 24ರ ಬುಧವಾರ ಅಧಿಸೂಚನೆ ಹೊರಡಿಸಿದೆ. ಇದರ ಬಳಿಕ ಸದಸ್ಯ ಸ್ಥಾನಗಳಿಗೆ ಭೌಗೋಳಿಕ ಪ್ರದೇಶ ಗುರುತಿಸಬೇಕು. ಇದಕ್ಕೆ ಕನಿಷ್ಠ ಒಂದು ವಾರ ಬೇಕು. ಬಳಿಕ ಮೀಸಲಾತಿ ಕರಡು ಅಧಿ ಸೂಚನೆ ಹೊರಡಿಸಬೇಕು. ಅದರ ಬಗ್ಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಕನಿಷ್ಠ ಒಂದು ವಾರ ನೀಡಬೇಕು. ಅಂತಿಮ ಮೀಸಲು ಅಧಿಸೂಚನೆ ಹೊರಡಿಸಿದ 45 ದಿನಗಳ ಬಳಿಕ ಚುನಾವಣ ಆಯೋಗ ವೇಳಾಪಟ್ಟಿ ಪ್ರಕಟಿಸಬೇಕು.

ಭೌಗೋಳಿಕ ಪ್ರದೇಶ ಗುರುತಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಎಪ್ರಿಲ್‌ ಮೊದಲ ವಾರ ಆಗುತ್ತದೆ. 2ನೇ ವಾರದಲ್ಲಿ ಮೀಸಲು ಕರಡು ಅಧಿಸೂಚನೆ ಹೊರಡಿಸಬೇಕು. ಆಕ್ಷೇಪಣೆಗಳಿಗೆ ಕಾಲಾವಕಾಶ ಕೊಟ್ಟು ಅಂತಿಮ ಮೀಸಲು ಅಧಿಸೂಚನೆ 3ನೇ ವಾರದಲ್ಲಿ ಹೊರಬೀಳಬಹುದು. ಅದಾದ 45 ದಿನಗಳ ಅನಂತರ ಚುನಾವಣೆ ಅಧಿಸೂಚನೆ ಹೊರಡಿಸಬೇಕು. ಅಂದರೆ ಚುನಾವಣೆ ವೇಳಾಪಟ್ಟಿ ಪ್ರಕಟಿಸುವಾಗಲೇ ಮೇ ಕೊನೆಯಾಗಬಹುದು.

ಈ ಮಧ್ಯೆ ಹೊಸ ಮೀಸಲಾತಿ ನಿಯಮಗಳನ್ನು ಆಯೋಗಕ್ಕೆ ಸಲ್ಲಿಸಲಾಗಿದೆ. ಅವನ್ನು ಅಳವಡಿಸಿ ಮೀಸಲಾತಿ ಪ್ರಕ್ರಿಯೆ ಕೈಗೊಳ್ಳುವ ಅನಿವಾರ್ಯ ಇದೆ. ಮೇ-ಜೂನ್‌ ತಿಂಗಳಲ್ಲಿ ಜಿ.ಪಂ., ತಾ.ಪಂ.ಗಳ ಅವಧಿ ಮುಗಿಯಲಿದೆ. ಸದ್ಯದ ಪರಿಸ್ಥಿತಿ ಗಮನಿಸಿದರೆ ಇದು ಸಾಧ್ಯವೇ ಎಂಬುದು ಪ್ರಶ್ನೆ.

ಜಿ.ಪಂ., ತಾ.ಪಂ. ಕ್ಷೇತ್ರ ನಿಗದಿ : ಚುನಾವಣೆ ನಡೆಯಲಿರುವ ಜಿ.ಪಂ. ಮತ್ತು ತಾ.ಪಂ.ಗಳಿಗೆ ಸದಸ್ಯ ಸ್ಥಾನ (ಕ್ಷೇತ್ರಗಳು)ಗಳನ್ನು ನಿಗದಿಪಡಿಸಿ ರಾಜ್ಯ ಚುನಾವಣ ಆಯೋಗ ಮಾ. 24ರಂದು ಅಧಿಸೂಚನೆ ಹೊರಡಿಸಿದೆ.

ಏಕೆ ಹೆಚ್ಚಳ, ಇಳಿಕೆ? :

ಈ ಹಿಂದೆ ಪ್ರತೀ 40 ಸಾವಿರ ಜನಸಂಖ್ಯೆಗೆ 1 ಜಿ.ಪಂ. ಮತ್ತು ಪ್ರತೀ 10 ಸಾವಿರ ಜನಸಂಖ್ಯೆಗೆ 1 ತಾ.ಪಂ. ಕ್ಷೇತ್ರ ರಚಿಸಲಾಗು ತ್ತಿತ್ತು. ಆದರೆ, ಪಂ. ರಾಜ್‌ ಕಾಯ್ದೆ ತಿದ್ದುಪಡಿ ಯಂತೆ 35 ಸಾವಿರಕ್ಕೆ ಒಂದು ಜಿ.ಪಂ. ಕ್ಷೇತ್ರ ಇರಬೇಕು. ಆದ್ದರಿಂದ ಜಿ.ಪಂ. ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಿದೆ. ಅದೇ ರೀತಿ 12,500 ಜನಸಂಖ್ಯೆಗೆ 1 ತಾ.ಪಂ. ಕ್ಷೇತ್ರ ಇರಬೇಕು. ಹಾಗಾಗಿ ತಾ.ಪಂ. ಕ್ಷೇತ್ರಗಳ ಸಂಖ್ಯೆ ಕಡಿಮೆ ಆಗಿದೆ ಎಂದು ಚುನಾವಣ ಆಯೋಗದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

2016 : 1,083

ಜಿ.ಪಂ. ಕ್ಷೇತ್ರಗಳು

3,903 ತಾ.ಪಂ. ಕ್ಷೇತ್ರಗಳು

 2021 : 1,191

ಜಿ.ಪಂ. ಕ್ಷೇತ್ರಗಳು

3,285

ತಾ.ಪಂ. ಕ್ಷೇತ್ರಗಳು

 108 ಜಿ.ಪಂ. ಕ್ಷೇತ್ರ ಹೆಚ್ಚಳ

618 ತಾ.ಪಂ. ಕ್ಷೇತ್ರಗಳು ಇಳಿಕೆ

ಮೇಯಲ್ಲೇ ಜಿ.ಪಂ., ತಾ.ಪಂ. ಚುನಾವಣೆ ಗಳು ನಡೆಯುತ್ತವೆ. ಮೀಸಲಾತಿ ನಿಯಮಗಳಲ್ಲಿನ ಕೆಲವು ನ್ಯೂನತೆಗಳನ್ನು ಸರಿಪಡಿಸಲು ಸ್ಪೀಕರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಹೊಸ ನಿಯಮ ಅಳವಡಿಸಿ ಕೊಳ್ಳುವಂತೆ ಆಯೋಗಕ್ಕೆ ಸೂಚಿಸಲಾಗಿದೆ.– ಕೆ.ಎಸ್‌. ಈಶ್ವರಪ್ಪ,  ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಸಚಿವ

ಮೇ ತಿಂಗಳಲ್ಲಿ  ಚುನಾವಣೆ ನಡೆಸಲು ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗ ಕ್ಷೇತ್ರ ಮರುವಿಂಗಡಣೆ ಯಷ್ಟೇ ಆಗಿರುವುದರಿಂದ ಹೊಸ ನಿಯಮಗಳನ್ನು ಅಳವಡಿಸಿಕೊಂಡು ಮೀಸಲಾತಿ ನಿಗದಿ ಪಡಿಸಲಾಗುವುದು. – ಡಾ| ಬಿ. ಬಸವರಾಜು, ರಾಜ್ಯ ಚುನಾವಣ ಆಯುಕ್ತ

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.