ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ
Team Udayavani, Apr 28, 2019, 3:00 AM IST
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2019-24ನೇ ಸಾಲಿನ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 27ರಿಂದ ಆಗಸ್ಟ್ 7ರವರೆಗೆ 5 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಈ ಸಂಬಂಧ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ಸಹಕಾರ ಸಂಘಗಳ ಉಪ ನಿಬಂಧಕ ಅಶ್ವತ್ಥ ನಾರಾಯಣ ಅವರು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.
ಅದರಂತೆ ಜಿಲ್ಲೆ, ತಾಲೂಕು ಹಾಗೂ ಯೋಜನಾ ಘಟಕಗಳ ಕಾರ್ಯಕಾರಿ ಸಮಿತಿಗಳಿಗೆ ಮೇ 27ರಿಂದ ಜೂನ್ 13ರವರೆಗೆ, ತಾಲೂಕು ಶಾಖೆ, ಯೋಜನಾ ಘಟಕಗಳ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಚುನಾವಣೆಗಳು ಜೂ.17ರಿಂದ 27ರವರೆಗೆ ನಡೆಯಲಿವೆ.
ಜಿಲ್ಲಾ ಶಾಖೆ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಚುನಾವಣೆಗಳು ಜುಲೈ 1ರಿಂದ 11ರವರೆಗೆ ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಇಲಾಖಾವಾರು ಚುನಾವಣೆ ಮೇ 27ರಿಂದ ಜೂ.26ರವರೆಗೆ ನಡೆಯಲಿದೆ. ಅಂತಿಮವಾಗಿ ಕೇಂದ್ರ ಸಂಘದ ಅಧ್ಯಕ್ಷರು, ಖಜಾಂಚಿ ಸ್ಥಾನದ ಚುನಾವಣೆಗಳು ಜು.17ರಿಂದ ಆಗಸ್ಟ್ 7ರವರೆಗೆ ನಡೆಯಲಿದೆ.
ಕೇಂದ್ರ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ಫೆ.28ರವರೆಗೆ ಸದಸ್ಯತ್ವ ನೋಂದಾಯಿಸಿರುವ ಎಲ್ಲ ಸರ್ಕಾರಿ ನೌಕರರು ಈ ಚುನಾವಣೆಗಳಲ್ಲಿ ಸ್ಪರ್ಧಿಸಲು ಹಾಗೂ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಶಾಖಾ ಸಂಘಗಳ ಚುನಾವಣಾ ವೇಳಾಪಟ್ಟಿಯನ್ನು ಆಯಾ ಶಾಖೆಗಳ ಚುನಾವಣಾಧಿಕಾರಿಗಳೇ ಪ್ರಕಟಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ