ಕಾಫಿ ಬೆಳೆಗಾರರಿಗೂ 10 ಎಚ್ಪಿ ವರೆಗೆ ವಿದ್ಯುತ್ ಸಬ್ಸಿಡಿ
Team Udayavani, Mar 23, 2022, 7:10 AM IST
ಬೆಂಗಳೂರು: ಕಾಫಿ ಬೆಳೆಗಾರರಿಗೂ 10 ಎಚ್ಪಿಯವರೆಗೆ ವಿದ್ಯುತ್ ಸಬ್ಸಿಡಿ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಶೂನ್ಯ ವೇಳೆಯಲ್ಲಿ ಶಾಸಕರಾದ ಬಿಜೆಪಿಯ ಸಿ.ಟಿ. ರವಿ, ಎಂ.ಪಿ. ಕುಮಾರಸ್ವಾಮಿ, ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಜೆಡಿಎಸ್ನ ಎಚ್.ಕೆ. ಕುಮಾರ ಸ್ವಾಮಿ, ಎ.ಟಿ. ರಾಮಸ್ವಾಮಿ ಸೇರಿ ಪಕ್ಷಾ ತೀತ ವಾಗಿ ಕಾಫಿ ಬೆಳೆಗಾರರಿಗೂ ವಿದ್ಯುತ್ ಸಬ್ಸಿಡಿ ನೀಡಬೇಕು ಎಂದು ಮನವಿ ಮಾಡಿದರು.
ಕಾಫಿ ಬೆಳೆಗಾರರು ಹಿಂದಿನಂತೆ ಸಾಹುಕಾರರಲ್ಲ, ಇಂದು ಸಾಲಗಾರರಾಗಿದ್ದಾರೆ ಎಂದು ರವಿ ಹೇಳಿ ದರು. ನಮಗೆ ನಿರಂತರ ವಾಗಿ ಬೇಕಿಲ್ಲ. ಆದರೆ ಮಳೆಗಾಲ ಅಲ್ಲದ ಸಮಯದಲ್ಲಿ ಸಮಸ್ಯೆಯಾಗುತ್ತಿದೆ ಎಂದು ಬೋಪಯ್ಯ ತಿಳಿಸಿದರು. ನಮ್ಮ ಸಮಸ್ಯೆಗೂ ಸ್ಪಂದಿಸಿ ಎಂದು ಎಂ.ಪಿ. ಕುಮಾರಸ್ವಾಮಿ ಒತ್ತಾಯಿಸಿದರು.
ಇದನ್ನೂ ಓದಿ:ನಾವೂ ಹಿಂದೂಗಳೇ, ಭಗವದ್ಗೀತೆ ಬಗ್ಗೆ ಹೊಟ್ಟೆ ಉರಿ ಇಲ್ಲ: ಡಿಕೆಶಿ
ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಯವರು, ರಾಜ್ಯ ಸರಕಾರದ ಮೇಲೆ ವಿದ್ಯುತ್ ಸಬ್ಸಿಡಿ 14 ಸಾವಿರ ಕೋಟಿ ರೂ. ವರೆಗೆ ವಾರ್ಷಿಕ ಹೊರೆ ಬೀಳುತ್ತಿದೆ. ಆದರೂ ಕಾಫಿ ಬೆಳೆಗಾರರಿಗೂ ವಿದ್ಯುತ್ ಸಬ್ಸಿಡಿ ಕೊಡಲಾಗುವುದು. ಆದರೆ ದುರ್ಬಳಕೆ ತಡೆಗೆ ಕಾನೂನು ರೂಪಿಸಲು ಸಮ್ಮತಿಸಬೇಕು ಎಂದರು.
ಎಲ್ಲ ಶಾಸಕರೂ ಒಪ್ಪಿದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳಿಂದ ಇಂಧನ ಸಚಿವ ವಿ. ಸುನಿಲ್ ಕುಮಾರ್, ಚಿಕ್ಕಮಗಳೂರು, ಕೊಡಗು, ಉಡುಪಿ, ಹಾಸನ ಭಾಗದ ಕಾಫಿ ಬೆಳೆಗಾರರ ಮಾಹಿತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ