ಪಕ್ಷ ಸಂಘಟನೆಗೆ ಒತ್ತು
Team Udayavani, Aug 25, 2019, 3:03 AM IST
ಹೊಳೆನರಸೀಪುರ: “ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ನಾನು ಮಾನಸಿಕವಾಗಿ ಕುಗ್ಗಿಲ್ಲ. ಬದಲಾಗಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುತ್ತಿ ದ್ದೇನೆ’ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ. ಶ್ರಾವಣ ಮಾಸದ ಕೊನೆಯ ಶನಿವಾರ ನಿಮಿತ್ತ ಹೊಳೆನರಸೀ ಪುರದ ಹಳೇಕೋಟೆ ಬೆಟ್ಟದ ರಂಗನಾಥನ ದರ್ಶನ ಪಡೆದ ಬಳಿಕ, ಎಚ್.ಡಿ.ರೇವಣ್ಣ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
“ನಾನು ಕಳೆದ ಮೂರು ವರ್ಷಗಳ ಹಿಂದೆಯೇ ಲೋಕಸಭೆಗೆ ಸ್ಪರ್ಧಿಸುವು ದಿಲ್ಲ ಎಂದು ಹೇಳಿದ್ದೆ. ಆದರೆ, 2019ರ ಲೋಕಸಭಾ ಚುನಾ ವಣೆಯಲ್ಲಿ ಪರಿಸ್ಥಿತಿಯ ಒತ್ತಡದಿಂದಾಗಿ ತುಮಕೂರು ಕ್ಷೇತ್ರ ದಲ್ಲಿ ಸ್ಪರ್ಧಿಸಬೇಕಾಗಿ ಬಂತು. ಚುನಾವಣೆ ನನಗೆ ಅಪಾರ ಅನುಭವ ತಂದುಕೊಟ್ಟಿತು’ ಎಂದರು.
“ನನ್ನನ್ನು, ನನ್ನ ಕುಟುಂ ಬವನ್ನು ರಾಜಕೀಯವಾಗಿ ಮುಗಿಸುವುದಾಗಿ ಹೇಳಿದ ಬಹ ಳಷ್ಟು ಮಂದಿ ಬಂದು ಹೋಗಿದ್ದಾರೆ. ಅದಕ್ಕೆ ಹೆದರಲ್ಲ. ಕಳೆದ 15 ದಿನಗಳಿಂದ ನಾನು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡುತ್ತಿದ್ದು, ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸ ಆರಂಭಿಸಿದ್ದೇನೆ. ಪಕ್ಷವನ್ನು ಸದೃಢವಾಗಿ ಕಟ್ಟುವುದು ನನ್ನ ಉದ್ದೇಶ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ