ಪಕ್ಷಕ್ಕೆ ಶ್ರಮಿಸಿದವರಿಗೆ ಒತ್ತು; ಸದ್ಯವೇ ಬಾಕಿ ನಿಗಮ, ಮಂಡಳಿಗೆ ನೇಮಕ
ಕುತೂಹಲ ಮೂಡಿಸಿದ್ದ ಸಂತೋಷ್ ಸರಣಿ ಸಭೆ
Team Udayavani, Aug 25, 2020, 6:25 AM IST
ಬೆಂಗಳೂರು: ಬಾಕಿ ಇರುವ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಸದ್ಯವೇ ನಡೆಯಲಿದ್ದು, ಪಕ್ಷ ಮತ್ತು ಸಂಘಟನೆಗೆ ದುಡಿದವರಿಗೆ ಹೆಚ್ಚಿನ ಒತ್ತು ಸಿಗುವ ಸಾಧ್ಯತೆ ಇದೆ. ಸಿಎಂ ಬಿಎಸ್ವೈ ಈಗಾಗಲೇ 20 ನಿಗಮ, ಮಂಡಳಿಗಳಿಗೆ ಮಾಜಿ ಸಚಿವರು, ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆಕಾಂಕ್ಷಿಗಳನ್ನು ಸಮಾಧಾನ ಪಡಿಸುವ ಪ್ರಯತ್ನದಲ್ಲಿ ಬಹುತೇಕ ಯಶಸ್ಸು ಕಂಡಿದ್ದಾರೆ. ಉಳಿದ ನಿಗಮ, ಮಂಡಳಿಗಳಿಗೆ ನೇಮಕ ವೇಳೆ ಸಂಘಟನೆಗಾಗಿ ದುಡಿದವರಿಗೆ ಆದ್ಯತೆ ನೀಡುವ ಬಗ್ಗೆ ಚರ್ಚೆಯಾಗಿದೆ ಎಂದು ಮೂಲಗಳು ಹೇಳಿವೆ.
ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸರಣಿ ಸಭೆಗಳನ್ನು ನಡೆಸಿದ್ದು ತೀವ್ರ ಕುತೂಹಲ ಮೂಡಿಸಿತ್ತು. ಅವರು ಗೃಹ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರ ಬಳಿಕ ಸಿಎಂ ಯಡಿಯೂರಪ್ಪ ಅವರ ಜತೆಗೂ ಸಮಾಲೋಚನೆ ನಡೆಸಿದ್ದರು. ಅನಂತರ ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳೊಂದಿಗೂ ಸಭೆ ನಡೆಸಿ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಸಲಹೆ, ಸೂಚನೆ ನೀಡಿದ್ದಾರೆ.
ಸದ್ಯವೇ ಸುಮಾರು 20 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ನಡೆಯಲಿದ್ದು, ಈ ಸಂದರ್ಭದಲ್ಲೂ ಪಕ್ಷ ಸಂಘಟನೆಗಾಗಿ ಶ್ರಮಿಸಿದವರನ್ನು ಗುರುತಿಸುವ ಬಗ್ಗೆ ಚರ್ಚೆಯಾಗಿದೆ. ಮೂಲ ಬಿಜೆಪಿಗರು- ವಲಸಿಗರು ಎಂಬ ವ್ಯತ್ಯಾಸ ಮೂಡದಂತೆ ಮುಂದುವರಿಯಬೇಕಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ