ಮೌಲ್ಯಾಧಾರಿತ, ಡಿಜಿಟಲ್ ಕಲಿಕೆಗೆ ಒತ್ತು: ಬಿಎಸ್ವೈ
Team Udayavani, Jan 13, 2021, 3:40 AM IST
ಬೆಂಗಳೂರು: ಉತ್ತಮ ಗುಣಮಟ್ಟ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಜತೆಗೆ ಕಲಿಕೆಯಲ್ಲಿ ಡಿಜಿಟಲ್ ತಂತ್ರಜ್ಞಾನಕ್ಕೂ ಉತ್ತೇಜನ ನೀಡುವುದಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದರು.
ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಗಳನ್ನು ವಿತರಿಸಲು ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದ ಕಾಲೇಜುಗಳ ಅಭಿವೃದ್ಧಿಗೆ 430 ಕೋಟಿ ರೂ. ನೀಡಲಾಗಿದೆ. ವಿದ್ಯಾರ್ಥಿನಿಯರ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಯಲ್ಲಿದೆ. ಡಿಜಿಟಲ್ ಕಲಿಕಾ ಯೋಜನೆಯನ್ನು 35 ಕೋಟಿ ರೂ. ವೆಚ್ಚದಲ್ಲಿ 437 ಸರಕಾರಿ ಪದವಿ ಕಾಲೇàಜುಗಳು, 87 ಸರಕಾರಿ ಪಾಲಿಟೆಕ್ನಿಕ್, 14 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅನುಷ್ಠಾನ ಮಾಡಲಾಗುತ್ತಿದೆ ಎಂದರು.
ಶಿಕ್ಷಣ ವ್ಯವಸ್ಥೆಗೆ ಹೊಸ ದಿಕ್ಕು ನೀಡಲಿರುವ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಮಾಡಲಾಗುತ್ತಿದೆ. ಆಲೋಚನಾ ಶಕ್ತಿ, ಜ್ಞಾನ, ಕೌಶಲಾಭಿವೃದ್ಧಿ ಬಗ್ಗೆ ಯುವಕರಲ್ಲಿ ಅರಿವು
ಮೂಡಿಸಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ಉದ್ದೇಶವನ್ನು ರಾಜ್ಯ ಶಿಕ್ಷಣ ನೀತಿ ಹೊಂದಿದ್ದು, ಈ ನೀತಿ ಜಾರಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸುಧಾರಣೆ ಆಗಲಿದೆ ಎಂದರು.
10 ದಶಲಕ್ಷ ಉದ್ಯೋಗ ಸೃಷ್ಟಿಗೆ ಪಣ :
ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಸ್ವಾಮಿ ವಿವೇಕಾನಂದರ ಪ್ರೇರಣೆಯೊಂದಿಗೆ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದರ ಜತೆಗೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10 ದಶ ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ