ಕಾಲೇಜಿನಲ್ಲೇ ಸಿಗಲಿದೆ ಉದ್ಯೋಗ ಮಾಹಿತಿ

ವಿದ್ಯಾರ್ಥಿ ಗೈಡ್‌

Team Udayavani, May 15, 2019, 3:02 AM IST

vidyarthi-guide

ಖಾಸಗಿ ಹಾಗೂ ಅನುದಾನಿತ ಕಾಲೇಜುಗಳ ಮಾದರಿಯಲ್ಲೇ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪದವೀಧರರಾದ ನಂತರ ವಿಶ್ವದಾದ್ಯಂತ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಹಕಾರಿಯಾಗುವಂತೆ ಎಲ್ಲ ಸರ್ಕಾರಿ ಪದವಿ ಕಾಲೇಜಿನಲ್ಲೂ ಇದೀಗ ಉದ್ಯೋಗ ಕೋಶ (ಪ್ಲೇಸ್‌ಮೆಂಟ್‌ ಸೆಲ್‌) ಕಾರ್ಯ ನಿರ್ವಹಿಸುತ್ತಿದೆ.

ಬಹುತೇಕ ವಿದ್ಯಾರ್ಥಿಗಳಿಗೆ ತಮ್ಮ ಕಾಲೇಜಿನಲ್ಲಿ “ಉದ್ಯೋಗ ಕೋಶ’ ಇರುವ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಆದರೆ, ಪ್ರತಿ ಕಾಲೇಜಿನಲ್ಲೂ ಉದ್ಯೋಗ ಕೋಶ ತೆರೆಯಲಾಗಿದೆ. ಜತೆಗೆ, ಅದಕ್ಕೆ ಸಂಯೋಜಕರನ್ನಾಗಿ ಓರ್ವ ಪ್ರಾಧ್ಯಾಪಕರನ್ನೇ ನೇಮಿಸಲಾಗಿದೆ. ಭವಿಷ್ಯದ ದೃಷ್ಟಿಯಿಂದ ಉದ್ಯೋಗ ಕೋಶದ ಸದುಪಯೋಗ ಪ್ರತಿ ವಿದ್ಯಾರ್ಥಿಯೂ ಪಡೆಯಬೇಕು.

ವಿದ್ಯಾರ್ಥಿಗಳಿಗೆ ಪದವಿಯ ನಂತರ ಲಭ್ಯವಿರುವ ಉದ್ಯೋಗಾವಕಾಶಗಳು ಮತ್ತು ಅದಕ್ಕಾಗಿ ಮಾಡಬೇಕಾದ ತಯಾರಿ, ಓದಬೇಕಾದ ಪುಸ್ತಕ ಇತ್ಯಾದಿ ಹತ್ತು ಹಲವು ಮಾಹಿತಿಗಳು ಸುಲಭವಾಗಿ ಈ ಉದ್ಯೋಗ ಕೋಶದಲ್ಲಿ ಸಿಗಲಿದೆ. ಉದ್ಯೋಗ ಕೋಶ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಬಗ್ಗೆ ಪ್ರಾಂಶುಪಾಲರಿಗೆ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಂಚಾಲಕರಿಗೆ ಹಾಗೂ ಬೋಧಕವರ್ಗಕ್ಕೆ ಆಗಿಂದಾಗ್ಗೆ ವಿವಿಧ ಕಾರ್ಯಕ್ರಮಗಳನ್ನು ಇಲಾಖೆ ಸಂಘಟಿಸುತ್ತಿರುತ್ತದೆ.

ಉದ್ಯೋಗ ಅರಸಿ ವಿವಿಧ ಸಂಸ್ಥೆಗಳಿಗೆ ಹೋದ ಸಂದರ್ಭದಲ್ಲಿ ಸಂದರ್ಶನಗಳನ್ನು ಎದುರಿಸುವುದು ಹೇಗೆ ಎಂಬುದರ ಅಗತ್ಯ ಸಲಹೆಗಳನ್ನು ಈ ಕೋಶದ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಸ್ವ-ವಿವರ(ರೆಸ್ಯೂಮ್‌) ಆಕರ್ಷಕ ಹಾಗೂ ಮಾಹಿತಿ ಯುಕ್ತವಾಗಿ ಸಿದ್ಧಪಡಿಸುವುದು ಹೇಗೆ ಎಂಬುದನ್ನು ಖುದ್ದು ತಿಳಿಸಿಕೊಡಲಾಗುತ್ತದೆ. ಸರ್ಕಾರಿ, ಅರೆಸರ್ಕಾರಿ, ಕೇಂದ್ರೋದ್ಯಮ, ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳು, ಬ್ಯಾಂಕಿಂಗ್‌ ಹಾಗೂ ಇತರೆ ವಲಯದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ಮಾಹಿತಿ ಉದ್ಯೋಗ ಕೋಶದಲ್ಲಿ ನೀಡಲಾಗುತ್ತದೆ.

ಪದವಿ ಪೂರೈಸಿದವರಿಗೆ ಕಾರ್ಪೊರೇಟ್‌ ವಲಯದಲ್ಲಿರುವ ಉದ್ಯೋಗಾವಕಾಶಗಳು, ಸ್ವ-ಉದ್ಯೋಗ ಮೊದಲಾದ ಹಲವು ವಿಷಯಗಳ ಕುರಿತು ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ವಿದ್ಯಾರ್ಥಿಗಳ ಹಿತಾಸಕ್ತಿಯ ದೃಷ್ಟಿಯಿಂದ ಐಎಎಸ್‌, ಐಪಿಎಸ್‌, ಐಆರ್‌ಎಸ್‌ ಹಾಗೂ ಕೆಎಎಸ್‌ ಮೊದಲಾದ ಕೇಂದ್ರ ಹಾಗೂ ರಾಜ್ಯದ ನಾಗರಿಕ ಸೇವಾ ಪರೀಕ್ಷೆಗಳು, ಪ್ರೊಬೆಷನರಿ ಅಧಿಕಾರಿಗಳ ಪರೀಕ್ಷೆಯ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯನ್ನೂ ಈ ಕೋಶದಿಂದ ನೀಡಲಾಗುತ್ತದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.