4 ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯ; ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗುವುದಾಗಿ ಘೋಷಣೆ
Team Udayavani, Dec 14, 2020, 4:10 PM IST
ಬೆಂಗಳೂರು: ನಾಲ್ಕು ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದ್ದು, ಸರ್ಕಾರ ಮತ್ತು ಸಾರಿಗೆ ನೌಕರರ ಸಂಘರ್ಷಕ್ಕೆ ತಾತ್ಕಾಲಿಕ ಸಮಾಪ್ತಿ ದೊರಕಿದೆ.
ಫ್ರೀಡಂ ಪಾರ್ಕ್ ನಲ್ಲಿ ಈ ಕುರಿತು ಘೋಷಣೆ ಹೊರಡಿಸಿದ ಕೋಡಿಹಳ್ಳಿ ಚಂದ್ರಶೇಖರ್, 10 ಬೇಡಿಕೆಗಳಲ್ಲಿ ಸರ್ಕಾರ 9 ಅನ್ನು ಈಡೇರಿಸಿದೆ. ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆಯೊಂದೇ ಬಾಕಿ ಉಳಿದಿದೆ. ಇದರ ಈಡೇರಿಕೆಗಾಗಿ ಸರ್ಕಾರಕ್ಕೆ 3 ತಿಂಗಳ ಗಡುವು ನೀಡಲಾಗಿದೆ. ಒಂದು ವೇಳೆ 3 ತಿಂಗಳೊಳಗಾಗಿ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸದಿದ್ದರೇ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಾತ್ರವಲ್ಲದೆ ರಾಜ್ಯಾದ್ಯಂತ ಮುಷ್ಕರವನ್ನು ವಾಪಾಸ್ ಪಡೆಯಲಾಗಿದ್ದು, ನಾಳೆಯಿಂದ ಎಲ್ಲಾ ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಘೋಷಣೆ ಹೊರಡಿಸಿದ್ದಾರೆ.
ಸರಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಬದಿಗೊತ್ತಿ ಸರಕಾರದ “ಸಂಧಾನಕ್ಕೆ ಭಾನುವಾರ (ಡಿ.13) ಸಹಮತ ವ್ಯಕ್ತಪಡಿಸಿದ್ದ ಸಾರಿಗೆ ನೌಕರರ ಸಂಘದ ಮುಖಂಡರು, ಕೊನೆಯ ಕ್ಷಣದಲ್ಲಿ “ಯೂ-ಟರ್ನ್’ ಹೊಡೆದು ಸೋಮವಾರವೂ ಮುಷ್ಕರ ಮುಂದುವರೆಸಿದ್ದರು.
ಇದರ ಬೆನ್ನಲ್ಲೆ ನೌಕರರ 9 ಬೇಡಿಕೆ ಈಡೇರಿಸಲು ಸರ್ಕಾರ ಬದ್ದ. ಈ ಸಂಬಂಧ ಲಿಖಿತವಾಗಿಯೂ ಭರವಸೆ ನೀಡಲು ಸಿದ್ದರಿದ್ದೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದರು.
ಇದೀಗ ಮುಷ್ಕರ ಹಿಂಪಡೆಯಲಾಗಿದ್ದು, ರಾಜ್ಯದೆಲ್ಲೆಡೆ ಸರ್ಕಾರಿ ಬಸ್ ಗಳ ಸಂಚಾರ ಆರಂಭಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ