ಮುಕ್ಕಾ ಗ್ರೂಪ್ ಆಫ್ ಕಂಪೆನಿ: ಮಂಗಳೂರಿನ 17 ಕೋ. ರೂ. ಆಸ್ತಿ ಜಪ್ತಿ
Team Udayavani, Jul 13, 2022, 12:51 AM IST
ಬೆಂಗಳೂರು: ಮುಕ್ಕಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಕೆ. ಮೊಹಮದ್ ಹ್ಯಾರಿಸ್ಗೆ ಸೇರಿದ ಮಂಗಳೂರಿನಲ್ಲಿರುವ 17.34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ಹ್ಯಾರಿಸ್ ಮಂಗಳೂರಿನಲ್ಲಿ ಹೊಂ ದಿದ್ದ 2 ವಸತಿಗೃಹಗಳು ಹಾಗೂ 1 ಕಾರ್ಖಾನೆಯನ್ನು ಇ.ಡಿ. ಜಪ್ತಿ ಮಾಡಿದೆ. ಹ್ಯಾರಿಸ್ ಅಕ್ರಮವಾಗಿ ಕೋಟ್ಯಂತರ ರೂ. ವಿದೇಶಿ ಬಂಡವಾಳ ಹೂಡಿಕೆ ಮಾಡಿರುವುದು ಇ.ಡಿ. ತನಿಖೆಯಲ್ಲಿ ಪತ್ತೆಯಾಗಿತ್ತು.
ಇ.ಡಿ. ಅಧಿಕಾರಿ ಗಳು ಫಾರಿನ್ ಎಕ್ಸ್ಚೇಂಜ್ ಮ್ಯಾನೇಜ್ಮೆಂಟ್ ಕಾಯ್ದೆ (ಫೇಮಾ) ಅಡಿ ಹ್ಯಾರಿಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತನಿಖೆ ವೇಳೆ ದುಬಾೖನ ಅಜ್ಮಾನ್ನಲ್ಲಿ ಪ್ಲ್ರಾಟ್ ಖರೀದಿಸಿರುವುದು ಪತ್ತೆಯಾಗಿದೆ. ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿರುವುದು, ಷೇರುಗಳನ್ನು ಹೊಂದಿರುವುದು ಕಂಡು ಬಂದಿದೆ.
ಇ.ಡಿ.ಗೆ ಅಧಿಕಾರ ಇದೆ
ದೇಶದ ಪ್ರಜೆಗಳು ಅಕ್ರಮ ಹಣ ವರ್ಗಾವಣೆ ಮೂಲಕ ವಿದೇಶದಲ್ಲಿ ಅಕ್ರಮ ಆಸ್ತಿ ಹೊಂದಿದ್ದರೆ, ಆ ಮೌಲ್ಯಕ್ಕೆ ಸಮನಾದ ಇಲ್ಲಿನ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೆ ಅಧಿಕಾರ ಇದೆ ಎನ್ನಲಾಗಿದೆ. ಈ ಪ್ರಕರಣದಲ್ಲೂ ಹ್ಯಾರಿಸ್ ವಿದೇಶದಲ್ಲಿ ಅಕ್ರಮವಾಗಿ ಹೊಂದಿರುವ ಆಸ್ತಿಗೆ ಸಮನಾದ ಮಂಗಳೂರಿನಲ್ಲಿ ಹೊಂದಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊ ಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ