ಹೆಡ್ಲೈಟ್ ಬೆಳಕಲ್ಲೇ ನಡೆಯಿತು ನಿಶ್ಚಿತಾರ್ಥ!
Team Udayavani, Nov 24, 2019, 3:04 AM IST
ಕಕ್ಕೇರಾ: ಮೂರು ತಿಂಗಳಿಂದಲೂ ವಿದ್ಯುತ್ ಇಲ್ಲದೆ ಪರದಾಡುತ್ತಿರುವ ನೀಲಕಂಠರಾಯನ ಗಡ್ಡಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹೆಡ್ಲೈಟ್ ಬೆಳಕಿ ನಲ್ಲಿಯೇ ಶುಕ್ರವಾರ ರಾತ್ರಿ ನಿಶ್ಚಿತಾರ್ಥ ಕಾರ್ಯ ಕ್ರಮ ನಡೆದಿದೆ. ಗ್ರಾಮದಲ್ಲಿ ಮಾದಮ್ಮ-ಸೋಮಣ್ಣ ಇಬ್ಬರಿಗೂ ಶುಕ್ರವಾರ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ, ವಿದ್ಯುತ್ ಬೆಳಕಿನ ಸಮಸ್ಯೆ ಎದುರಾಗಿದ್ದರಿಂದ ಗ್ರಾಮಸ್ಥರು ಟ್ರ್ಯಾಕ್ಟರ್ ಲೈಟ್ ಬಳಸಿ, ನಿಶ್ಚಿತಾರ್ಥ ಮಾಡಿದ್ದಾರೆ. ಕೃಷ್ಣಾ ನದಿ ಕವಲುಗಳ ನಡುವೆ ನೀಲಕಂಠ ರಾಯನ ಗಡ್ಡಿ ಗ್ರಾಮವಿದೆ.
ಇತ್ತೀಚೆಗೆ ಕೃಷ್ಣಾ ನದಿಗೆ ನಾರಾಯಣಪುರ ಜಲಾಶಯದ ನೀರು ಹರಿಸಿದಾಗ ಪ್ರವಾಹದಿಂದಾಗಿ ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ನೀಲಕಂಠರಾಯನ ಗಡ್ಡಿಗೆ ಸಂಪರ್ಕ ಹೊಂದಿದ ವಿದ್ಯುತ್ ಲೈನ್ ಜೆಸ್ಕಾಂ ಅಧಿಕಾರಿಗಳು ಕಡಿತಗೊಳಿಸಿದ್ದರು. ಮೂರು ತಿಂಗಳಾದರೂ ಇದುವರೆಗೂ ವಿದ್ಯುತ್ ಸಂಪರ್ಕ ಪುನಃ ಕಲ್ಪಿಸಿಲ್ಲ. ಇದರಿಂದ ಗ್ರಾಮಸ್ಥರು ಕತ್ತಲೆಯಲ್ಲಿಯೇ ಜೀವನ ಸಾಗಿಸುವಂತಾಗಿದೆ. ಸೋಲಾರ್ ವಿದ್ಯುತ್ ಇದ್ದರೂ ತಾಂತ್ರಿಕ ದೋಷದಿಂದ ಕೆಟ್ಟಿವೆ.
ಮೊಬೈಲ್ ಸ್ವಿಚ್ಡ್ ಆಫ್: ವಿದ್ಯುತ್ ಇಲ್ಲದ್ದರಿಂದ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದ್ದು, ಸಂವಹನಕ್ಕೆ ಜನರು ಪರದಾಡುವಂತಾಗಿದೆ. ಪ್ರವಾಹ ಅಬ್ಬರಕ್ಕೆ ಇದ್ದ ಪುಟ್ಟ ಸೇತುವೆ ಕೊಚ್ಚಿಕೊಂಡು ಹೋಗಿ ಸಂಚಾರಕ್ಕೂ ತೊಂದರೆಯಾಗಿದೆ. ರಾತ್ರಿ ವೇಳೆ ಸಮಸ್ಯೆಯಾದರೆ ಜೀವಕ್ಕೆ ಸಂಚಕಾರವಿದೆ. ಆದ್ದರಿಂದ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ ಗ್ರಾಮಸ್ಥರಾದ ಅಮರಪ್ಪ, ಕನಕಪ್ಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!