ಕೇಂದ್ರದ ಸಾಧನೆಯನ್ನು ಮೆಚ್ಚಿ ಜನ ಚುನಾವಣೆ ಗೆಲ್ಲಿಸಿದ್ದಾರೆ: ಸಂಸದ ಈರಣ್ಣ ಕಡಾಡಿ
Team Udayavani, Mar 10, 2022, 4:01 PM IST
ಮೂಡಲಗಿ: ಸತತ 7 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ದೇಶದಲ್ಲಿ ಮಾಡಿದಂತಹ ಅದ್ವೀತಿಯ ಸಾಧನೆ ಮತ್ತು ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತಪಡಿಸಿದರು.
ಗುರುವಾರದಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕರೋನಾ ಕಾಲಘಟದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದರೂ ಕೂಡ ಮತ್ತು ವಿರೋಧಿಗಳ ಅಪಪ್ರಚಾರದ ಮಧ್ಯೆಯು ಜನರನ್ನು ಒಂದು ಸುರಕ್ಷಿತ ದಡಕ್ಕೆ ತರುವಲ್ಲಿ ನರೇಂದ್ರ ಮೋದಿ ಸಫಲರಾಗಿದ್ದಾರೆ. ಅವರ ಹೇಳಿಕೆಯಾಗಿರುವ “ಸಭ್ ಕಾ ಸಾಥ್, ಸಭ್ ಕಾ ವಿಕಾಸ್, ಸಭ್ ಕಾ ವಿಶ್ವಾಸ್, ಸಭ್ ಕಾ ಪ್ರಯಾಸ್” ಅನ್ನುವಂತಹ ಅವರ ಮಾತನ್ನು ಜನ ಅಕ್ಷರ ಸಹ ಸ್ವೀಕಾರ ಮಾಡಿದ್ದಾರೆ ಎಂದರು.
ದೇಶದ ಜನ ಕಾಂಗ್ರೇಸ್ ಹಾಗೂ ಸಮಾಜವಾದಿ ಪಾರ್ಟಿಗಳ ಕುಟುಂಬ ರಾಜಕಾರಣವನ್ನು ದಿಕ್ಕರಿಸಿ, ಒಂದು ಗುಲಗಂಜಿಯಷ್ಟು ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲದಂತಹ ಮತ್ತು ಸ್ವಹಿತಾಶಕ್ತಿ ಇಲ್ಲದಂತಹ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವವನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ, ಅದರ ಪರಿಣಾಮ ಇಷ್ಟು ದೊಡ್ಡ ಪ್ರಮಾಣದ ಗೆಲುವು ಸಾಧ್ಯವಾಗಿದೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ನವರು ಕೃಷ್ಣೆ-ಮೇಕೆದಾಟು ಕಡೆಗೆ ಹೊಗುವುದು ಬೇಡ, ಇಟಲಿಗೆ ಹೋಗಲಿ: ಯತ್ನಾಳ್
ಒಂದು ವಿಶಿಷ್ಟ ಪರಿಸ್ಥಿತಿ ಕಾರಣದಿಂದ ಪಂಜಾಬ್ನಲ್ಲಿ ನಾವು ಹಿಂದುಳಿದಿರಬಹುದು, ಮುಂದಿನ ದಿನಗಳಲ್ಲಿ ಪಂಜಾಬ್ ಗೆಲ್ಲುವಂತಹ ದಿಶೆಯಲ್ಲಿ ಬಿಜೆಪಿ ಮುನ್ನುಗುತ್ತದೆ ಮತ್ತು ಮುಂಬರುವ 2023ರ ರಾಜ್ಯ ವಿಧಾನಸಭೆ ಚುನಾವಣೆ 2024ರ ಲೋಕಸಭಾ ಚುನಾವಣೆ ಈ ಎರಡು ಚುನಾವಣೆಗಳಲ್ಲೂ ಕೂಡಾ ನಿಶ್ಚಿತವಾಗಿ ಮತ್ತೊಂದು ಸಲ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುವಂತಹ ಎಲ್ಲ ಲಕ್ಷಣಗಳೂ ಈ ಚುನಾವಣೆ ಮೂಲಕ ಕಂಡುಬರುತ್ತದೆ ಎಂದರು. ಈ ಗೆಲುವಿಗೆ ಕಾರಣಿಭೂತರಾದ ಮತದಾರ ಬಂಧುಗಳಿಗೆ ಅಭಿನಂಧನೆ ತಿಳಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ