ತಾಕತ್ತಿದ್ದರೆ ಬಿಎಸ್ವೈ 2 ಸ್ಥಾನ ಗೆಲ್ಲಲಿ: ಈಶ್ವರ ಖಂಡ್ರೆ
Team Udayavani, Feb 24, 2019, 1:53 AM IST
ರಾಯಚೂರು: ಲೋಕಸಭೆ ಚುನಾವಣೆಯಲ್ಲಿ 22 ಸ್ಥಾನ ಗೆಲ್ಲುತ್ತೇವೆಂದು ಹೇಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ತಾಕತ್ತಿದ್ದರೆ ಎರಡು ಸ್ಥಾನ ಗೆದ್ದು ತೋರಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸವಾಲು ಹಾಕಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಡೆಸಿದ ಆಪರೇಷನ್ ಕಮಲ ನೋಡಿ ರಾಜ್ಯದ ಜನ ರೋಸಿ ಹೋಗಿದ್ದಾರೆ. ಅ ಧಿಕಾರಕ್ಕಾಗಿ ಬಿಜೆಪಿಯವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎಂಬುದು ಜನರಿಗೆ ಗೊತ್ತಾಗಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಉತ್ತಮ ರೀತಿಯಲ್ಲಿ ಆಡಳಿತ ನೀಡುತ್ತಿದೆ. ಆದರೆ, ಬಿಜೆಪಿಯವರಿಗೆ ಸರ್ಕಾರವನ್ನು ಬೀಳಿಸುವುದೇ ಕಾಯಕವಾಗಿದೆ. ವಿಪಕ್ಷದಲ್ಲಿದ್ದುಕೊಂಡು ಅವರು ಅದೊಂದೇ ಕೆಲಸ ಮಾಡುತ್ತಿದ್ದಾರೆ ಎಂದರು.
28 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದ್ದು, ರಾಹುಲ್ ಗಾಂಧಿ ಪ್ರಧಾನಿಯಾಗುವುದು ನಿಶ್ಚಿತ. ಜೆಡಿಎಸ್ ವರಿಷ್ಠ ದೇವೇಗೌಡ ಸೇರಿ ಮಹಾಘಟಬಂಧನ್ನ ಎಲ್ಲ ನಾಯಕರು ರಾಹುಲ್ ಅವರೇ ಪ್ರಧಾನಿ ಎಂದು ಒಪ್ಪಿದ್ದಾರೆ.
ಕೋಮುವಾದಿಗಳನ್ನು ಮಟ್ಟ ಹಾಕಲು ನಾವೆಲ್ಲ ಒಟ್ಟಾಗಿ ದ್ದೇವೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಎಲ್ಲ ಪಕ್ಷಗಳ ಮುಖಂಡರು ಸಿದ್ಧ ರಾಗಿದ್ದು, ಅವರೇ ಪ್ರಧಾನಿಯಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ