ಸಿಎಂಗೆ ಈಶ್ವರ್ ಖಂಡ್ರೆ ಪತ್ರ
Team Udayavani, Jun 27, 2019, 3:00 AM IST
ಬೆಂಗಳೂರು: ಬೀದರ ಜಿಲ್ಲೆಯ ಉಜಳಂಬದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಆಗಮಿಸುತ್ತಿರುವುದರಿಂದ ಜಿಲ್ಲೆಯ ಸಮಸ್ಯೆಗಳನ್ನು ಪರಿಹರಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.
ಬಸವ ಕಲ್ಯಾಣದಲ್ಲಿ 12ನೇ ಶತಮಾನದ ಶರಣರ ಅನುಭವ ಮಂಟಪ ನಿರ್ಮಾಣ ಮಾಡಲು ಹಿಂದಿನ ಸರ್ಕಾರ ತೀರ್ಮಾನ ತೆಗೆದುಕೊಂಡಿತ್ತು. ಅದಕ್ಕಾಗಿ 100 ಕೋಟಿ ರೂ.ಅನುದಾನ ನೀಡಿ, ಗೊ.ರು.ಚನ್ನಬಸಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕಾರ್ಯಾರಂಭ ಮಾಡಲು ಸೂಚನೆ ನೀಡಲಾಗಿತ್ತು. ಆದರೆ, ಇದುವರೆಗೂ ಕಾಮಗಾರಿ ಆರಂಭವಾಗಿಲ್ಲ.
ಅನುಭವ ಮಂಟಪ ನಿರ್ಮಾಣಕ್ಕೆ ಘೋಷಣೆ ಮಾಡಿ, ಕೆಲಸ ಪ್ರಾರಂಭಿಸಬೇಕು. ಕಾರಂಜಾ ಮುಳುಗಡೆ ಸಂತ್ರಸ್ಥರ ಬೇಡಿಕೆಗಳನ್ನು ಈಡೇರಿಸಿ ಶಾಶ್ವತ ಪರಿಹಾರ ಒದಗಿಸಬೇಕು. ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ಹಿಂದಿನ ಸರ್ಕಾರ ಮನೆಗಳನ್ನು ಮಂಜೂರು ಮಾಡಿದೆ.
ಆದರೆ, ಸೂಕ್ತ ಅನುದಾನ ಬಿಡುಗಡೆಯಾಗದೇ ಫಲಾನುಭವಿಗಳು ಗುಡಿಸಲಿನಲ್ಲಿ ವಾಸಿಸುವಂತಾಗಿದೆ. ಈ ಫಲಾನುಭವಿಗಳಿಗೆ ಶೀಘ್ರವೇ ಅನುದಾನ ಬಿಡುಗಡೆಗೊಳಿಸಬೇಕು ಹಾಗೂ ಬೀದರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್