ಬಿಎಸ್ ವೈ v/s ಈಶ್ವರಪ್ಪ; ಬಿಕ್ಕಟ್ಟು ಬಗೆಹರಿಸಲು ಮೇ 10 ಡೆಡ್ ಲೈನ್!
Team Udayavani, Apr 27, 2017, 4:16 PM IST
ಬೆಂಗಳೂರು: ಕೆಎಸ್ ಈಶ್ವರಪ್ಪನವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿ. ಅಷ್ಟೇ ಅಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮೇ 10ರೊಳಗೆ ರಾಜ್ಯ ಬಿಜೆಪಿ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಬಿಜೆಪಿ ಅತೃಪ್ತ ನಾಯಕರು ಸಂಘಟನೆ ಉಳಿಸೋಣ ಬನ್ನಿ ಸಮಾವೇಶದಲ್ಲಿ ಡೆಡ್ ಲೈನ್ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಕೆಲವು ಮುಖಂಡರು ಗುರುವಾರ ಅರಮನೆ ಮೈದಾನದಲ್ಲಿ ಸಂಘಟನೆ ಉಳಿಸಿ ಸಮಾವೇಶ ನಡೆಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಸಡ್ಡು ಹೊಡೆದಿದ್ದಾರೆ.
ಬಿಎಸ್ ವೈ ಆಪ್ತ ಬಿಜೆ ಪುಟ್ಟಸ್ವಾಮಿ ಬುಧವಾರ ಎಚ್ಚರಿಕೆ ನೀಡಿರುವ ನಡುವೆಯೇ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಇಂದು ನಡೆದ ಸಮಾವೇಶದಲ್ಲಿ ಭಾಗವಹಿಸಿ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಎಸ್ ಯಡಿಯೂರಪ್ಪ ಮುಂದುವರಿಯಲಿ, ಇಂತಹ ಸಂದರ್ಭದಲ್ಲಿ ಕೆಎಸ್ ಈಶ್ವರಪ್ಪನವರನ್ನೇ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಸಮಾವೇಶದಲ್ಲಿ ಕಾರ್ಯಕರ್ತರು ಆಗ್ರಹಿಸಿದರು.
ಅತೃಪ್ತರ ಸಮಾವೇಶಕ್ಕೆ ಬಿಜೆಪಿ ಮುಖಂಡರ ಆಕ್ರೋಶ:
ಕೆಎಸ್ ಈಶ್ವರಪ್ಪ ಹಾಗೂ ಬಿಎಸ್ ವೈ ಅವರ ನಡುವೆ ಇದ್ದ ಮುನಿಸಿನ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ದೆಹಲಿಗೆ ಕರೆಯಿಸಿ ಸಂಧಾನ ಮಾಡಿ ಕಳುಹಿಸಿದ ಮೇಲೆಯೂ ಈಶ್ವರಪ್ಪ ಈ ರೀತಿ ನಡೆದುಕೊಳ್ಳುತ್ತಿರುವುದು ಸರಿಯಲ್ಲ ಎಂದು ಮಲ್ಲೇಶ್ವರಂ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಶಾಸಕರು, ಸಂಸದರು ಪತ್ರಿಕಾಗೋಷ್ಠಿ ನಡೆಸಿ, ಅರಮನೆ ಮೈದಾನದಲ್ಲಿ ನಡೆದ ಅತೃಪ್ತ ಮುಖಂಡರ ಸಭೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇಂದಿನ ಸಭೆಯಲ್ಲಿ ಭಾಗವಹಿಸಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ