ಬೇಸಿಗೆಯಲ್ಲಿ ಲೋಡ್ ಶೆಡಿಂಗ್ ಮಾಡದಿರಲು ಎಸ್ಕಾಂಗಳ ನಿರ್ಧಾರ


Team Udayavani, Mar 15, 2023, 12:11 PM IST

tdy-8

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯುತ್ ವ್ಯವಹಾರ ಸಮಿತಿಯ ಅಧ್ಯಕ್ಷರು ಆಗಿರುವ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಎಲ್ಲಾ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೇ ರೈತರಿಗೂ ಕೂಡ ಹೆಚ್ಚಿನ ವಿದ್ಯುತ್ ಪೂರೈಸುವ  ಜವಾಬ್ದಾರಿ ಎಸ್ಕಾಂಗಳ ಮೇಲಿದೆ.  ಬೇಸಿಗೆಯಲ್ಲಿ ತಡೆರಹಿತ ವಿದ್ಯುತ್ ಪೂರೈಸಲು ರೈತ ಪ್ರತಿನಿಧಿಗಳು ಇತ್ತೀಚೆಗೆ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು.

ಈ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳ ಅವಧಿಗೆ ಬೇಕಾಗುವ ವಿದ್ಯುತ್ ಬೇಡಿಕೆ ಕುರಿತು ವೈಜ್ಞಾನಿಕವಾಗಿ ಅಧ್ಯಯನ ನಡೆಸಿರುವ ಎಲ್ಲಾ ಎಸ್ಕಾಂಗಳು ಅದಕ್ಕೆ ಬೇಕಾಗಿರುವ ವಿದ್ಯುತ್ ಖರೀದಿ ಮಾಡಿ ಗ್ರಾಹಕರಿಗೆ ಪೂರೈಸಲು ನಿರ್ಧರಿಸಿವೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಈ ಮೂರು ತಿಂಗಳ ಅವಧಿಯಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಲಿದ್ದು, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ಎಲ್ಲಾ ಎಸ್ಕಾಂಗಳು ನಿರ್ಧಾರ ಕೈಗೊಂಡಿವೆ.

ಬೇಸಿಗೆ ಕಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸಲು ಇಂಧನ ಇಲಾಖೆಯು ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳಿಗೆ ನಿರ್ದೇಶನ ನೀಡಿದೆ.

ಬೇಸಿಗೆ ಕಾಲದಲ್ಲಿ ವಿದ್ಯುತ್ ಖರೀದಿಗೆ ಬೇಕಾಗುವ  ಹಣಕಾಸಿನ ವ್ಯವಸ್ಥೆಯನ್ನು ಸಿದ್ಧತೆ ಮಾಡಿಕೊಳ್ಳು ಇಂಧನ ಇಲಾಖೆ ಎಲ್ಲಾ ಎಸ್ಕಾಂಗಳಿಗೆ ಈಗಾಗಲೇ ಸೂಚನೆ ನೀಡಿದೆ. ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

ಬೇಸಿಗೆಯಲ್ಲಿ ಬೆಸ್ಕಾಂ ವಿದ್ಯುತ್ ಬೇಡಿಕೆ ವಿವರ : ಮಾರ್ಚ್ ತಿಂಗಳಿಂದ ಮೇ ವರೆಗೆ ವಿದ್ಯುತ್ ಬೇಡಿಕೆ ಮತ್ತು ಬಳಕೆಯನ್ನು ಬೆಸ್ಕಾಂ ಈಗಾಗಲೇ ಅಂದಾಜಿಸಿದ್ದು, ಮಾರ್ಚ್ ತಿಂಗಳಲ್ಲಿ ದಿನದ  ಗರಿಷ್ಠ ಬೇಡಿಕೆ 7600 ಮೆಗಾ ವ್ಯಾಟ್ ತಲಪುವ ಸಾಧ್ಯತೆ ಇದೆ. ಕಳೆದ 12 ದಿನಗಳಿಂದ ಸರಾಸರಿ ದಿನದ ವಿದ್ಯುತ್ ಬೇಡಿಕೆ 74೦0 ಮೆಗಾ ವ್ಯಾಟ್ ದಾಖಲಾಗಿದೆ. ಮಾರ್ಚ್ ತಿಂಗಳಲ್ಲಿ ದಿನದ ವಿದ್ಯುತ್ ಸರಾಸರಿ 132 ಮಿಲಿಯನ್ ಯೂನಿಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಅದೇ ರೀತಿ ಏಪ್ರಿಲ್ ತಿಂಗಳಲ್ಲಿ ದಿನ ವಿದ್ಯುತ್ ಬೇಡಿಕೆ 7650 ಮೆಗಾ ವ್ಯಾಟ್ ತಲುಪಲಿದ್ದು, ದಿನದ ವಿದ್ಯುತ್ ಬಳಕೆ ಸರಾಸರಿ 135 ಮಿಲಿಯನ್ ಯೂನಿಟ್ ಆಗಲಿದೆ.

ಮೇ ತಿಂಗಳ ದಿನದ ವಿದ್ಯುತ್ ಬೇಡಿಕೆ 6800 ಮೆಗಾ ವ್ಯಾಟ್ಗೆ ಇಳಿಯಲಿದ್ದ,  ದಿನದ ವಿದ್ಯುತ್ ಬಳಕೆ ಸರಾಸರಿ 124 ಮಿಲಿಯನ್ ಯೂನಿಟ್ ಆಗಲಿದೆ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.