ರಾಜ್ಯ ಸರ್ಕಾರದಿಂದ ವಿಪತ್ತು ನಿರ್ವಹಣಾ ಸಮಿತಿ ರಚನೆ
Team Udayavani, Nov 23, 2019, 3:04 AM IST
ಬೆಂಗಳೂರು: ಎನ್ಡಿಆರ್ಎಫ್ ಮಾದರಿಯಲ್ಲೇ ರಾಜ್ಯ ಸರ್ಕಾರದ ವತಿಯಿಂದ ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ರಚಿಸಲಾಗಿದ್ದು, ಮುಂದೆ ಪ್ರಕೃತಿ ವಿಕೋಪ ಇಲ್ಲವೇ ಅನಾಹುತಗಳು ಸಂಭವಿಸಿದಾಗ ಎನ್ಡಿಆರ್ಎಫ್ಗೂ ಮೊದಲೇ ಕಾರ್ಯಾಚರಣೆ, ಪರಿಹಾರ ಕಾರ್ಯ ಕೈಗೊಳ್ಳಲು ಅಗತ್ಯ ವ್ಯವಸ್ಥೆ ರೂಪಿಸಲು ಸರ್ಕಾರ ಮುಂದಾಗಿದೆ.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಸೂಚನೆಯಿದ್ದರೂ ಹಿಂದಿನ ಸರ್ಕಾರ ಗಳು ರಾಜ್ಯ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ರಚಿಸಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಸಮಿತಿ ರಚಿಸಿ ಸಭೆ ಕೂಡ ನಡೆಸಿದೆ. ಸುಮಾರು 200 ಮಂದಿಯ ತಂಡಕ್ಕೆ ಅಗತ್ಯ ತರಬೇತಿ ಕೊಡಿಸಿ ರಾಜ್ಯದ 4 ಕಡೆ ನಿಯೋಜಿಸಲಾಗುವುದು ಎಂದರು.
ಮುಂದೆ ಎಲ್ಲ ಜಿಲ್ಲೆಗಳಲ್ಲೂ ವಿಪತ್ತು ನಿರ್ವಹಣಾ ಸಮಿತಿ ರಚನೆಗೆ ಆದೇಶ ಹೊರಡಿಸಲಾಗಿದೆ. ಆರೋಗ್ಯ, ಆಹಾರ, ಕೃಷಿ, ಪಶುಪಾಲನಾ ಇಲಾಖೆ ಸೇರಿ 19 ಇಲಾಖೆಗಳ ಸಿಬ್ಬಂದಿ ತಂಡ ರಚಿಸಲಾಗು ವುದು. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ಪೊಲೀಸ್ ಇಲಾಖೆ ಯಿಂದ ಹೆಚ್ಚು ಮಂದಿ ನಿಯೋಜಿಸಲಾಗು ವುದು. ಕಾರ್ಯಾಚರಣೆ, ಪರಿಹಾರ ಕಾರ್ಯಕ್ಕೆ ಅಗತ್ಯವಾದ ಸಲಕರಣೆಗಳ ಖರೀದಿಗೆ ಕೇಂದ್ರ ಸರ್ಕಾರ ಹಣ ಒದಗಿಸಲಿದೆ ಎಂದು ಹೇಳಿದರು.
ರಾಜ್ಯದ 22 ಜಿಲ್ಲೆಯ 103 ತಾಲೂಕಿನಲ್ಲಿ ನೆರೆ ಕಾಣಿಸಿಕೊಂಡ ಸಂದರ್ಭವನ್ನು ಆಗಷ್ಟೇ ರಚನೆಯಾಗಿದ್ದ ಬಿಜೆಪಿ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಸಮರೋ ಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ. ಈವರೆಗೆ 2948 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪಾರದರ್ಶಕ ವಾಗಿ ಪರಿಹಾರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಎರಡನೇ ಹಂತದ ನೆರೆ ಕಾಣಿಸಿಕೊಂಡ ಸಂದರ್ಭದಲ್ಲಿ ಉಂಟಾದ ನಷ್ಟಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರದಿಂದ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗುತ್ತಿದೆ. ಎರಡನೇ ನೆರೆ ಸಂದರ್ಭದ ಸಂತ್ರಸ್ತರಿಗೂ ಮೊದಲ ನೆರೆ ಸಂತ್ರಸ್ತರಿಗೆ ನೀಡಿದ ರೀತಿಯಲ್ಲೇ ಪರಿಹಾರ ವಿತರಿಸಲಾಗುವುದು. ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆ ಕಳೆದುಕೊಂಡವರಿಗೂ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು. ಅವರು ಸ್ಥಳಾಂತರಗೊಳ್ಳಲು ಬಯಸಿದರೆ ನಿವೇಶನವನ್ನೂ ನೀಡಿ ಮನೆ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?