ಡಿವಿಜಿ ಹೆಸರಿನಲ್ಲಿ ನಿಧಿ ಸ್ಥಾಪನೆ
Team Udayavani, Mar 6, 2020, 3:01 AM IST
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜನಸ್ನೇಹಿ ಸಹಾಯ ವೇದಿಕೆ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸಾರ್ವ ಜನಿಕ ಕ್ಷೇತ್ರದಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದ್ದು ವಿವಿಧ ಇಲಾಖೆಗಳ ಜತೆ ಸಮನ್ವಯ ಸಾಧಿಸಿ ಈ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಉದ್ದೇಶ ಹೊಂದಿದ್ದು,
ಇದಕ್ಕಾಗಿ ಐದು ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಸರ್ಕಾರದ ಕಾರ್ಯಕ್ರಮಗಳನ್ನು ನವಮಾಧ್ಯಮಗಳ ಮೂಲಕ ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪಿಸಲು ಡಿಜಿಟಲ್ ಮಾಧ್ಯಮ ಜಾಹೀರಾತು ನೀತಿ ರೂಪಿಸಲಾ ಗುವುದು. ಹಿರಿಯ ಪತ್ರಕರ್ತರೂ ಆಗಿದ್ದ ಸಾಹಿತಿ ಡಾ.ಡಿ.ವಿ. ಗುಂಡಪ್ಪ ಅವರ ಹೆಸರಿನಲ್ಲಿ ಈ ಉದ್ದೇಶಕ್ಕಾಗಿ ನಿಧಿಯೊಂದನ್ನು ಸ್ಥಾಪಿಸಲಾಗುವುದು.