PU ಫ‌ಲಿತಾಂಶ ಪ್ರಕಟಗೊಂಡರೂ ಕೈಸೇರದ ಭತ್ತೆ; 25 ಸಾವಿರ ಉಪನ್ಯಾಸಕರಿಂದ ಮೌಲ್ಯಮಾಪನ

ಆರ್ಥಿಕವಾಗಿ ಸಂಕಷ್ಟದಲ್ಲಿ ಅತಿಥಿ ಉಪನ್ಯಾಸಕರು

Team Udayavani, Jun 25, 2023, 7:43 AM IST

PU ಫ‌ಲಿತಾಂಶ ಪ್ರಕಟಗೊಂಡರೂ ಕೈಸೇರದ ಭತ್ತೆ; 25 ಸಾವಿರ ಉಪನ್ಯಾಸಕರಿಂದ ಮೌಲ್ಯಮಾಪನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದು ಫ‌ಲಿತಾಂಶ ಪ್ರಕಟಗೊಂಡು, ಪೂರಕ ಪರೀಕ್ಷೆಯ ಫ‌ಲಿತಾಂಶವೂ ಪ್ರಕಟವಾಗಿದ್ದರೂ ಪಿಯು ಪರೀಕ್ಷೆಯ ಮೌಲ್ಯಮಾಪನದ ಹಣ ಬಿಡುಗಡೆಯಾಗಿಲ್ಲ.

ಮಾರ್ಚ್‌ 9ರಿಂದ 29ರ ವರೆಗೆ ನಡೆದಿದ್ದ 2023ರ ಸಾಲಿನ ದ್ವಿತೀಯ ಪಿಯು ಪರೀಕ್ಷೆಗೆ ಸುಮಾರು 7.02 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಸುಮಾರು 40 ಲಕ್ಷಕ್ಕೂ ಹೆಚ್ಚು ಪತ್ರಿಕೆಗಳ ಮೌಲ್ಯಮಾಪನವನ್ನು 25 ಸಾವಿರ ಮೌಲ್ಯಮಾಪಕರು ಮೌಲ್ಯಮಾಪನ ನಡೆಸಿ ತ್ವರಿತ ಫ‌ಲಿತಾಂಶಕ್ಕೆ ಸಹಕರಿಸಿದ್ದರು.

ರಾಜ್ಯದ 65 ಮೌಲ್ಯಮಾಪನ ಕೇಂದ್ರಗಳಲ್ಲಿ ಎಪ್ರಿಲ್‌ 5ಕ್ಕೆ ಮೌಲ್ಯಮಾಪನ ಆರಂಭಗೊಂಡಿದ್ದು, ಎಪ್ರಿಲ್‌ 21ಕ್ಕೆ ಫ‌ಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಿದ್ದ ಹಿನ್ನೆಲೆಯಲ್ಲಿ ಉಪನ್ಯಾಸಕರು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದರಿಂದ ಮೌಲ್ಯಮಾಪನಕ್ಕೆ ತೊಂದರೆ ಆಗಬಾರದು, ಫ‌ಲಿತಾಂಶ ಪ್ರಕಟನೆ ತ್ವರಿತವಾಗಬೇಕು ಎಂದು ಕರ್ನಾ ಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಈ ಬಾರಿ ಅತಿಥಿ ಉಪನ್ಯಾಸಕರನ್ನು ಸಹ ಮೌಲ್ಯಮಾಪನಕ್ಕೆ ಬಳಸಿಕೊಂಡಿತ್ತು.

ಆದರೆ ಮೌಲ್ಯಮಾಪನ ನಡೆದು, ಫ‌ಲಿತಾಂಶ ಪ್ರಕಟವಾಗಿ ಎರಡು ತಿಂಗಳಾದರೂ ಮೌಲ್ಯಮಾಪಕರ ಭತ್ತೆ, ಪ್ರಯಾಣ ಭತ್ತೆ ಸಂದಾಯವಾಗಿಲ್ಲ. ಪ್ರಶ್ನೆ ಪತ್ರಿಕೆ ತಯಾರಿಸಿದವರು, ಪ್ರಶ್ನೆ ಪತ್ರಿಕೆ ಸಾಗಾಟ ನಡೆಸಿದವರ ಭತ್ತೆಗಳೂ ಬಿಡುಗಡೆಯಾಗಿಲ್ಲ ಎಂದು ಉಪನ್ಯಾಸಕರು ನೋವು ತೋಡಿಕೊಳ್ಳುತ್ತಿದ್ದಾರೆ.

ಪಿಯುಸಿ ಉಪನ್ಯಾಸಕರ ಸಂಘದ ಕಾರ್ಯಾಧ್ಯಕ್ಷ ವೆಂಕಟೇಶ್‌ ಅವರ ಪ್ರಕಾರ, ಸಾಮಾನ್ಯವಾಗಿ ಮೌಲ್ಯಮಾಪನದ ಭತ್ತೆ ಸೇರಿ ಎಲ್ಲ ಸವಲತ್ತುಗಳ ಹಣವನ್ನು ಮೌಲ್ಯಮಾಪನ ನಡೆದ ತಿಂಗಳೊಳಗೆ ಸರಕಾರ ನೀಡುತ್ತದೆ. ಆದರೆ ಈ ಬಾರಿ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಈ ಬಾರಿ ಅತಿಥಿ ಉಪನ್ಯಾಸಕರನ್ನು ಕೂಡ ಮೌಲ್ಯಮಾಪನಕ್ಕೆ ಬಳಸಿಕೊಳ್ಳಲಾಗಿದೆ. ಅವರು ಸಾಲಸೋಲ ಮಾಡಿ ಲಾಡ್ಜ್ಗಳಲ್ಲಿ ತಂಗಿ ಮೌಲ್ಯಮಾಪನ ಕೇಂದ್ರಗಳಿಗೆ ತೆರಳಿ ಮೌಲ್ಯಮಾಪನ ಮಾಡಿದ್ದಾರೆ. ಆದರೆ ತಿಂಗಳೆರಡು ಕಳೆದಿದ್ದರೂ ಭತ್ತೆ ಬಂದಿಲ್ಲ. ಇದರಿಂದ ಅವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಹೇಳುತ್ತಾರೆ.

ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿ ಗಳನ್ನು ಭೇಟಿಯಾಗಿದ್ದರೂ ಪೂರಕ ಸ್ಪಂದನೆ ಸಿಕ್ಕಿಲ್ಲ. 2018ರಿಂದ ತಿಂಗಳೊಳಗೆ ಮೌಲ್ಯಮಾಪನದ ಹಣ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ಮೌಲ್ಯ ಮಾಪನದ ಕೊನೆಯ ದಿನವೇ ಮೌಲ್ಯಮಾಪಕರ ಕೈಯಲ್ಲೇ ಚೆಕ್‌ ನೀಡಲಾಗುತ್ತಿತ್ತು ಎಂದಿದ್ದಾರೆ.

ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿರುವ ಮುಖ್ಯ ಅಧೀಕ್ಷಕರಿಗೆ ದಿನವೊಂದಕ್ಕೆ 1,051 ರೂ., ಉಪಮುಖ್ಯ ಅಧೀಕ್ಷಕರಿಗೆ ದಿನವೊಂದಕ್ಕೆ 979 ರೂ., ಸಹಾಯಕ ಮೌಲ್ಯಮಾಪಕರಿಗೆ 3 ಗಂಟೆ ಅವಧಿಯ ಮೌಲ್ಯ ಮಾಪನಕ್ಕೆ 36 ರೂ. ಹಾಗೂ ದಿನಭತ್ತೆ 976 ರೂ., ಸ್ಥಳೀಯ ಭತ್ತೆಯನ್ನು ಬೆಂಗಳೂರಿಗೆ 288 ರೂ. ಮತ್ತು ಇತರೆ ಪ್ರದೇಶಗಳಿಗೆ 194 ರೂ.ನಿಗದಿ ಪಡಿಸಲಾಗಿದೆ.

ಮೊದಲು 3 ಗಂಟೆ ಅವಧಿಯ ಕನ್ನಡ ಆವೃತ್ತಿಯಲ್ಲದ ಪ್ರಶ್ನೆ ಪತ್ರಿಕೆ ತಯಾರಿಸಲು ಪ್ರತಿಯೊಬ್ಬರಿಗೆ 2,498 ರೂ., ಮೂರು ಗಂಟೆ ಅವಧಿಯ ಕನ್ನಡ ಆವೃತ್ತಿ ಸಹಿತ ಪ್ರಶ್ನೆ ಪತ್ರಿಕೆ ತಯಾರಿಸಲು 2,900 ರೂ., ವಾಹನ ಚಾಲಕರಿಗೆ 1,253 ರೂ. ಗಳನ್ನು ಸರಕಾರ ನಿಗದಿ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಬಜೆಟ್‌ ಮಂಡಿಸಲಿದ್ದಾರೆ. ಆ ಬಳಿಕವೇ ಮೌಲ್ಯಮಾಪನದ ಹಣ ಬಿಡುಗಡೆಯಾಗಲಿದೆ.
– ಆರ್‌. ರಾಮಚಂದ್ರನ್‌,
ನಿರ್ದೆಶಕರು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ

– ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.