ರಾಹುಲ್ ಮುಂದುವರಿಯಬೇಕು ಎಂಬುದು ಎಲ್ಲರ ಆಶಯ: ಖರ್ಗೆ
Team Udayavani, Jun 11, 2019, 3:05 AM IST
ಸೇಡಂ: ರಾಹುಲ್ ಗಾಂಧಿ ಅವರನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು ಎಂಬುದು ಕಾರ್ಯಕರ್ತರ, ಯುವಕರ ಆಶಯವಾಗಿದೆ ಎಂದು ಮಾಜಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಶೀಘ್ರವೇ ಪಕ್ಷದ ಹಿರಿಯ ಮುಖಂಡರೆಲ್ಲ ಸಭೆ ಸೇರಿ ಮುಂದಿನ ನಿರ್ಣಯದ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಹೇಳಿದರು.
ಲೋಕಸಭಾ ಚುನಾವಣೆ ಫಲಿತಾಂಶ ನನಗೆ ಸೋಲು ತಂದಿದೆ.
ನಾನು ಸೋಲು ಒಪ್ಪಿಕೊಂಡಿದ್ದೇನೆ. ಆದರೆ ದೇಶದ ಬಹುತೇಕ ಕಡೆ ವ್ಯತ್ಯಾಸಗಳು ಕಂಡು ಬಂದಿದ್ದು, ಜನ ಇವಿಎಂ ಮೇಲೆ ಅನುಮಾನಗೊಂಡಿದ್ದಾರೆ. ಅದಕ್ಕಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಲೋಕಸಭೆಯಲ್ಲಿ ನಾಲ್ಕು ನೂರು ಜನ ಸಂಸದರಿಗೆ ಹೆದರದ ನಾನು ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಮತ್ತು ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ ಅವರಿಗೆ ಏಕೆ ಹೆದರಲಿ.
ಯಾರು ಏನೇ ಎನ್ನಲಿ ಅದಕ್ಕೆಲ್ಲ ಉತ್ತರ ಕೊಡೋದ್ರಿಂದ ಅವರು ದೊಡ್ಡವರಾಗ್ತಾರೆ. ನಮ್ಮ ಕಿಮ್ಮತ್ತು ಕಡಿಮೆಯಾಗುತ್ತದೆ. ಜಾತಿ, ಧರ್ಮ ಮತ್ತು ಪಾಕಿಸ್ತಾನ ಎಂಬ ವಿಷಬೀಜ ಬಿತ್ತಿ ಮತ ಪಡೆಯಲಾಗುತ್ತಿದೆ. ನಾವೂ ದೇಶಭಕ್ತರೇ. ನಾವೂ ಪಾಕಿಸ್ತಾನದ ವಿರುದ್ಧ ಸಮರ ಸಾರಿದ್ದೇವೆ. ಕಾಂಗ್ರೆಸ್ನವರೆಲ್ಲ ಪಾಕಿಸ್ತಾನದವರಾ? ಧರ್ಮದ ಹೆಸರಲ್ಲಿ ದೇಶ ಇಬ್ಭಾಗ ಮಾಡಲಾಗುತ್ತಿದೆ. ದೇಶಕ್ಕೆ ಶಾಶ್ವತ ವಿಚಾರಗಳ ಅವಶ್ಯಕತೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್