ಕೊಡಗಿನಲ್ಲಿ ಸಂತ್ರಸ್ತರ ಗೋಳು ಆಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Aug 23, 2018, 5:05 PM IST
ಮಡಿಕೇರಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯಲ್ಲಿ ಪ್ರವಾಸ ನಡೆಸಿ ಸಂತ್ರಸ್ತರ ಗೋಳು ಆಲಿಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು ಸಿದ್ದರಾಮಯ್ಯ ಅವರೊಂದಿಗೆ ಹಾಜರಿದ್ದರು.
ಕುಶಾಲನಗರ, ಮಡಿಕೇರಿ ಸೇರಿದಂತೆ ವಿವಿಧೆಡೆ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಮಹಿಳೆಯರು, ನೊಂದವರ ಗೋಳು ಆಲಿಸಿದರು.
ಕಾರು ಬಿಟ್ಟು ಜೀಪ್ನಲ್ಲೇ ತೆರಳಿ ಗುಡ್ಡ ಕುಸಿದ ಸ್ಥಳಗಳು, ಹಾನಿಗೀಡಾದ ರಸ್ತೆಗಳ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೂ ಮಾತುಕತೆ ನಡೆಸಿ ಸಲಹೆ ನೀಡಿದರು.