ಪರೀಕ್ಷೆ: ಕುರ್ತಾ ಪೈಜಾಮಕ್ಕೆ ಅವಕಾಶವಿಲ್ಲ
Team Udayavani, Aug 4, 2022, 8:06 PM IST
ಬೆಂಗಳೂರು: ಕೆಪಿಟಿಸಿಎಲ್ ಕಿರಿಯ ಎಂಜಿನಿಯರ್ ಹಾಗೂ ಸಹಾಯಕ ಎಂಜಿನಿಯರ್ ಹುದ್ದೆಗೆ ನೇರ ನೇಮಕಾತಿ ಪರೀಕ್ಷೆ ಆ. 7ರಂದು ನಡೆಯಲಿದ್ದು, ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಸ್ತ್ರ ಸಂಹಿತೆ ನಿಗದಿ ಮಾಡಿದೆ.
ಎನ್95 ಮಾಸ್ಕ್ ಧರಿಸುವಂತೆ ಸೂಚಿಸಿದೆ. ಪೂರ್ಣ ತೋಳಿನ ಶರ್ಟ್ ಧರಿಸಲು ಅವಕಾಶವಿಲ್ಲ. ಬಟ್ಟೆಗಳು ಕೂಡ ಹಗುರವಾಗಿರಬೇಕು. ಕುರ್ತಾ, ಪೈಜಾಮಕ್ಕೆ ಅವಕಾಶವಿಲ್ಲ. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬಟನ್ ಹೊಂದಿರುವ ಡ್ರೆಸ್ಗಳನ್ನು ಧರಿಸುವಂತಿಲ್ಲ. ಶೂಗಳನ್ನು ನಿಷೇಧಿಸಿದ್ದು, ಸರಳ ಸ್ಯಾಂಡಲ್ ಅಥವಾ ಚಪ್ಪಲಿಯನ್ನು ಧರಿಸುವಂತೆ ಸೂಚಿಸಿದೆ.
ಪ್ರವೇಶ ಪತ್ರ ಇಲ್ಲದೆ ಯಾವುದೇ ಅಭ್ಯರ್ಥಿಯನ್ನು ಪರೀಕ್ಷಾ ಕೇಂದ್ರದ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ. ಸರಕಾರದಿಂದ ಮಾನ್ಯವಾದ ಫೋಟೋ ಸಹಿತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರುವಂತೆ ಕೆಇಎ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ http:/kea.kar.nic.in. ವೆಬ್ಸೈಟ್ ಅನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ