ಭೂ ಕುಸಿತ, ಕಂಪನ ಸ್ಥಳಕ್ಕೆ ತಜ್ಞರ ತಂಡ: ಸಚಿವ ಆರ್.ಅಶೋಕ್
Team Udayavani, Jul 4, 2022, 11:28 PM IST
ಬೆಂಗಳೂರು: ಆಗಾಗ್ಗೆ ಭೂಕುಸಿತ, ಲಘು ಭೂಕಂಪ ಸಂಭವಿಸುತ್ತಿರುವ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಪ್ರದೇಶಗಳಿಗೆ ಹೈದರಾಬಾದ್ನಿಂದ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೆಲವು ಪ್ರದೇಶಗಳಲ್ಲಿ ಈ ರೀತಿಯ ಸಮಸ್ಯೆ ಕಾಣಿಸಿಕೊಂಡಿದೆ. ಇದಕ್ಕೆ ಕಾರಣ ತಿಳಿಯಲು ಹೈದರಾಬಾದ್ನ ರಾಷ್ಟ್ರೀಯ ಭೂಗರ್ಭ ಸಂಶೋಧನೆ ಸಂಸ್ಥೆಯ ತಂಡವನ್ನು ಕರೆಸಲಾಗುತ್ತಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಸಮಸ್ಯೆ ತಲೆದೋರಿದ ಸ್ಥಳಗಳಿಗೆ ನಾನೂ ಭೇಟಿ ನೀಡಲಿದ್ದೇನೆ. ಜತೆಗೆ, ರಿಕ್ಟರ್ ಮಾಪನದ ತೀವ್ರತೆ ದಾಖಲಿಸುವ ಜತೆಗೆ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಭೂಮಿಯ ಆಳದಲ್ಲಿ ಸುಣ್ಣದ ಕಲ್ಲಿನ ಸಂಗ್ರಹವಿರುವ ಭಾಗದಲ್ಲಿ ಮಳೆ ನೀರು ಹರಿದು ಒತ್ತಡ ಸೃಷ್ಟಿಯಾಗುತ್ತದೆ. ಹೀಗಾಗಿ, ಕಂಪನ ಸಂಭವಿಸುತ್ತದೆ ಎಂದು ಹೇಳಲಾಗಿದ್ದು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಭೂಪರಿವರ್ತನೆಗೆ ನಿರ್ಬಂಧ
ಕೊಡಗು ಭಾಗದಲ್ಲಿ ಅತಿಯಾದ ವಾಣಿಜ್ಯ ಚಟು ವಟಿಕೆಗಳು ಸಹಿತ ಇತರ ಕಾರಣಗಳಿಂದಾಗಿ ಭೂಗರ್ಭದಲ್ಲಿ ಒತ್ತಡ ಸೃಷ್ಟಿಯಾಗುವುದು ಕೂಡ ಸಮಸ್ಯೆಗೆ ಕಾರಣ ಎಂದು ತಜ್ಞರು ವರದಿ ನೀಡಿದ್ದರು. ಹಾಗಾಗಿ ವಾಣಿಜ್ಯ ಚಟುವಟಿಕೆ ಉದ್ದೇಶಕ್ಕೆ ಭೂ ಪರಿವರ್ತನೆಗೆ ನಿರ್ಬಂಧ ವಿಧಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ