ಅನುದಾನಿತ, ಖಾಸಗಿ ಕಾಲೇಜುಗಳಿಗೂ ಡಿಜಿಟಲೀಕರಣ ವಿಸ್ತರಣೆ: ಅಶ್ವತ್ಥನಾರಾಯಣ


Team Udayavani, Oct 15, 2022, 5:14 PM IST

1-adsd-ada

ಬೆಂಗಳೂರು: ಯೂನಿಫೈಡ್‌ ಡೇಟಾ ಮತ್ತು ಡಿಜಿಟಲೀಕರಣಗಳೇ ಇಡೀ ಜಗತ್ತಿನ ಶಿಕ್ಷಣ ಕ್ಷೇತ್ರದಲ್ಲಿ ನಿರ್ಣಾಯಕ ಶಕ್ತಿಗಳಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡೇ ರಾಜ್ಯದಲ್ಲೂ ಸರಕಾರಿ ಶಿಕ್ಷಣ ಸಂಸ್ಥೆಗಳ ಡಿಜಿಟಲೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಅನುದಾನಿತ ಮತ್ತು ಖಾಸಗಿ ಕಾಲೇಜುಗಳಿಗೂ ಕಡ್ಡಾಯಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಅಂತರರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ‘ಸೀಮಾತೀತ ಶಿಕ್ಷಣ ಕ್ಷೇತ್ರದಲ್ಲಿ ನಾವೀನ್ಯತೆಯ ಭವಿಷ್ಯ’ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವ್ಯಾಪಕ ವಿಕೇಂದ್ರೀಕರಣಕ್ಕೆ ಚಾಲನೆ ಕೊಡಲಾಗಿದೆ. ಶಿಕ್ಷಣ ಕ್ಷೇತ್ರದ ಮೇಲೆ ಸರಕಾರದ ನಿಯಂತ್ರಣ ಇರಬಾರದೆನ್ನುವುದೇ ನಮ್ಮ ಆಶಯವಾಗಿದೆ. ಹೀಗಾಗಿ ಸಂಶೋಧನೆ ಮತ್ತು ಸಹಭಾಗಿತ್ವಗಳಿಗೆ ಹಾಗೂ ಟ್ವಿನ್ನಿಂಗ್ ಪದವಿ ಕೋರ್ಸುಗಳಿಗೆ ಮುಕ್ತ ಅವಕಾಶ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಮರ್ಥ ಕಾಯ್ದೆಯನ್ನೂ ಜಾರಿಗೆ ತರಲಾಗುವುದು ಎಂದು ಅವರು ವಿವರಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಆದ್ಯತೆ ನೀಡುತ್ತಿದೆ. ರಾಜ್ಯದಲ್ಲಿ ಜಾಗತಿಕ ಮಟ್ಟದ ಸೌಲಭ್ಯಗಳಿದ್ದರೂ ಅದರ ಸಮರ್ಪಕ ಉಪಯೋಗವಾಗುತ್ತಿಲ್ಲ. ನಮ್ಮಲ್ಲಿ 20 ಸಾವಿರ ನವೋದ್ಯಮಗಳಿದ್ದು, ಇವು ಶಿಕ್ಷಣದ ಗುಣಮಟ್ಟ ವರ್ಧನೆಗೆ ಕೈಜೋಡಿಸಬೇಕು. ಉದ್ಯಮ ವಲಯವು ಶಿಕ್ಷಣ ಕ್ಷೇತ್ರದ ಜತೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಪರಿವರ್ತನೆಗಳು ತ್ವರಿತ ಗತಿಯಲ್ಲಿ ಸಂಭವಿಸುತ್ತಿವೆ. ಗುಣಮಟ್ಟದ ಶಿಕ್ಷಣ ಮಾತ್ರ 21ನೇ ಶತಮಾನದ ಜ್ಞಾನಾಧಾರಿತ ವ್ಯವಸ್ಥೆಗೆ ಆಧಾರವಾಗಿದೆ. ಇದು ಜ್ಞಾನಾಧಾರಿತ ಆರ್ಥಿಕತೆಯ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುತ್ತಿದೆ. ಹೀಗಾಗಿ ಗುಣಮಟ್ಟ ಮತ್ತು ಉತ್ಕೃಷ್ಟತೆಯೊಂದಿಗೆ ರಾಜಿ ಮಾಡಿಕೊಳ್ಳುವುದು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಎನ್‌ಇಪಿ ಜಾರಿಯಲ್ಲಿ ರಾಜ್ಯವು ದೇಶಕ್ಕೇ ಪ್ರಥಮ ಸ್ಥಾನದಲ್ಲಿದ್ದೇವೆ. ಹೀಗಾಗಿ ಜಾಗತಿಕ ರಂಗದಲ್ಲಿ ಕರ್ನಾಟಕವು ಪ್ರಸ್ತುತತೆಯನ್ನು ಉಳಿಸಿಕೊಳ್ಳುವಲ್ಲಿ ಗೆದ್ದಿದೆ. ಎನ್‌ಇಪಿ ನೀತಿಯು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಒತ್ತು ಕೊಟ್ಟಿದ್ದು, ಇತ್ತೀಚೆಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಜಾರಿಗೆ ತಂದಿರುವ ನಿಯಮಗಳೂ ಇದಕ್ಕೆ ಪುಷ್ಟಿ ನೀಡುವಂತಿವೆ ಎಂದರು.

ಕರ್ನಾಟಕವು ಮೊದಲಿನಿಂದಲೂ ಶಿಕ್ಷಣದಲ್ಲಿ ಹೊಸತನಕ್ಕೆ ಗಮನ ನೀಡುತ್ತ ಬಂದಿದೆ. ಈಗ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಶಿಕ್ಷಣದ ಸುಧಾರಣೆಗಾಗಿ ಅಳವಡಿಸಿಕೊಂಡು, ಸುಸ್ಥಿರ ಮತ್ತು ಸಮಾನ ಅಭಿವೃದ್ಧಿಯನ್ನು ಸಾಧಿಸಲು ತಕ್ಕ ವೇದಿಕೆಯನ್ನು ನಿರ್ಮಿಸುವ ಅಗತ್ಯವಿದೆ. ರಾಜ್ಯವು ಎಂದಿನಂತೆ ಇಡೀ ಜಗತ್ತಿನ ಪ್ರತಿಭೆಗಳನ್ನು ತನ್ನತ್ತ ಸೆಳೆಯುತ್ತಿದೆ ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಐಎಸ್‌ಡಿಸಿ ಕಾರ್ಯ ನಿರ್ವಾಹಕ ನಿರ್ದೇಶಕ ಟಾಮ್‌ ಜೋಸೆಫ್‌, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ ತಿಮ್ಮೇಗೌಡ, ಐಎಸ್‌ಡಿಸಿಯ ಕಲಿಕಾ ವಿಭಾಗದ ನಿರ್ದೇಶಕಿ ತೆರೇಸಾ ಜೇಕಬ್ಸ್ ಮಾತನಾಡಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.