ಸಮಾಜಮುಖಿ ಕಾರ್ಯ ದೇಶಕ್ಕೆ ವಿಸ್ತರಣೆ: ಡಾ| ವೀರೇಂದ್ರ ಹೆಗ್ಗಡೆ


Team Udayavani, Jul 8, 2022, 6:11 AM IST

ಸಮಾಜಮುಖಿ ಕಾರ್ಯ ದೇಶಕ್ಕೆ ವಿಸ್ತರಣೆ: ಡಾ| ವೀರೇಂದ್ರ ಹೆಗ್ಗಡೆ

ಕನಕಪುರ: ಈ ದೇಶದ ಪ್ರಧಾನಿಗಳು ನಮ್ಮ ಸೇವಾ ಕ್ಷೇತ್ರವನ್ನು ಗುರುತಿಸಿ ಮೆಚ್ಚಿಕೊಂಡಿದ್ದಾರೆ. ಇನ್ನು ಮುಂದೆ ನಮ್ಮ ಸಮಾಜಮುಖಿ ಕಾರ್ಯಕ್ರಮಗಳನ್ನು ದೇಶವ್ಯಾಪಿ ವಿಸ್ತರಿಸುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು.

ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ತಾಲೂಕಿನ ಶಿವನಹಳ್ಳಿ ಬಳಿ ನಂದಿನಿ ಹಾಲು ಉತ್ಪನ್ನ ಸಂಕೀರ್ಣದ ಆವರಣದಲ್ಲಿ  ತಮಗೆ ಹಮ್ಮಿಕೊಂಡಿದ್ದ  ಗುರುವಂದನೆ  ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ನಾಮನಿರ್ದೇಶಿತನಾಗುತ್ತೇನೆ ಎಂಬ ಕಲ್ಪನೆಯೂ ನನಗಿರಲಿಲ್ಲ. ನಾನು ಅದರ ಹಿಂದೆ ಹೋಗುವವನೂ ಅಲ್ಲ.  ಇದು ತಾನಾಗಿಯೇ ಒಲಿದು ಬಂದಿದೆ ಎಂದರು.

ರಾಜ್ಯ ಸಭೆಗೆ ನಾಮನಿರ್ದೇಶಿ ತನಾದ ಬಗ್ಗೆ ಬುಧವಾರ  ರಾತ್ರಿವರೆಗೂ ನನಗೆ ಮಾಹಿತಿ ಇರಲಿಲ್ಲ. ಸ್ವತಃ ಪ್ರಧಾನಿಯೇ ಟ್ವೀಟ್‌ ಮಾಡುವ ಮೂಲಕ ನಮಗೆ ತಿಳಿಸಿದ್ದಾರೆ. ಆ ಬಳಿಕ  ಅಭಿನಂದನೆಯ ಮಹಾಪೂರ ಹರಿದು ಬಂದಿದೆ ಹಾಗೂ ನಮ್ಮ ಜನತೆ ಬಹಳ ಸಂತೋಷಪಟ್ಟಿದ್ದಾರೆ. ನನಗೆ ಯಾವುದೇ ರಾಜಕೀಯ ಆಸಕ್ತಿ ಇಲ್ಲ. ಮಂಜುನಾಥ ಸ್ವಾಮಿಯ ಹೆಗ್ಗಡೆಯ ಪೀಠಕ್ಕಿಂತ ದೊಡ್ಡದು ಯಾವುದೂ ಇಲ್ಲ ಎಂದರು.

ಈ ದೇಶದ ಪ್ರಧಾನಿಗಳಿಗೆ ಸೂಕ್ಷ್ಮವಾಗಿ ಗಮನಿಸುವ ಶಕ್ತಿ ಇರುವುದರ ಬಗ್ಗೆ ಯೋಚಿಸುತ್ತಿದ್ದೇನೆ. ಮೋದಿಯವರು ಬಹಳ ಸೂಕ್ಷ್ಮತೆ ಮತ್ತು ನೆನಪು ಉಳ್ಳವರು. ಹಾಗಾಗಿ ನಮ್ಮ ಕಾರ್ಯಕ್ಷೇತ್ರ ಪ್ರಧಾನಿಯವರ ಗಮನ ಸೆಳೆದಿದೆ. ನಾವು  ಒತ್ತಡದಿಂದಿದ್ದಾಗ ಹೆಚ್ಚಿನ ಕಾರ್ಯ ಮಾಡಬಹುದು. ನಾನು ರಾಜಕೀಯರಹಿತವಾಗಿ ಹಿರಿಯ ಸದಸ್ಯರ ಕೂಟ ಎಂದು ಸೇರಿಕೊಂಡಿದ್ದೇನೆ ಎಂದರು.

ಹೈನುಗಾರಿಕೆಯಲ್ಲಿ ದೇಶದ ಸಾಧನೆ ಅದ್ಬುತ :

6 ದಶಕಗಳ ಹಿಂದೆ  ಹಾವಾಡಿಗರ ದೇಶ ಎಂದು ಕರೆಯಲ್ಪಡುತ್ತಿದ್ದ ಭಾತರ  ಇಂದು ಹೈನುಗಾರಿಕೆಯಲ್ಲಿ ಅದ್ಬುತ ಸಾಧನೆ ಮಾಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಮ್ಮ ದೇಶದಲ್ಲಿ ಗೋವುಗಳನ್ನು ದೇವರು ಎಂದೇ ಪೂಜಿಸುತ್ತೇವೆ. ರೈತರು ಯಾವುದೇ ಕೃಷಿ ಬೆಳೆಗಳಿಂದ ಆದಾಯ ಕಾಣಬೇಕಾದರೆ, ಕನಿಷ್ಠ 6 ತಿಂಗಳಿಂದ 1 ವರ್ಷ ಕಾಯಬೇಕು. ಆದರೆ, ಹೈನುಗಾರಿಕೆ ಆಗಲ್ಲ. ಹೈನುಗಾರಿಕೆಯಿಂದ ರೈತರಿಗೆ ಬಹಳ ಅನುಕೂಲವಾಗಿದ್ದು, ಲಾಭದಾಯಕವಾಗಿದೆ ಎಂದರು.

ಕಸಾಯಿ ಖಾನೆಗೆ ಬಿಡಬೇಡಿ :

ದೈವ ಸ್ವರೂಪಿಯಾದ ಗೋವುಗಳನ್ನು ವಯಸ್ಸಾದಾಗ ಕಸಾಯಿ ಖಾನೆಗೆ ನೀಡುವ ಬದಲು ಗೋ ಶಾಲೆಗಳಿಗೆ ಕೊಡಬೇಕು. ದೇಸಿ ತಳಿಯ ಗೋವುಗಳನ್ನು ಸಂರಕ್ಷಣೆ ಮಾಡಲೇಬೇಕಾಗಿದೆ. ರೈತರು ಹೆಚ್ಚು ದೇಸಿ ತಳಿಯ ಹಸುಗಳನ್ನು ಸಾಕಾಣಿಕೆ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದರು.

ಧರ್ಮಸ್ಥಳದ ದರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ಆಯ್ಕೆಯಾಗಿರುವುದು ಕರ್ನಾಟಕ ಹಾಗೂ ಕನ್ನಡಿಗರಿಗೆ ಹೆಮ್ಮೆ ತಂದಿದೆ.ಹೆಗ್ಗಡೆಯವರು ಮೊದಲಿನಿಂದಲೂ ಗ್ರಾಮೀಣ ಬದುಕಿನಲ್ಲಿ ಬೆಳೆದವರು. ಅವರು ಗ್ರಾಮೀಣ ಭಾಗದ ಮಹಿಳೆಯರ ಮನದಲ್ಲಿದ್ದಾರೆ. ಅವರನ್ನು ಆಯ್ಕೆ ಮಾಡಿದುದಕ್ಕಾಗಿ ರಾಷ್ಟ್ರಪತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ .ಡಿ.ಕೆ.ಸುರೇಶ್‌, ಸಂಸದ  

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.