ಛಾಪಾ ಕಾಗದ ಹಗರಣದ ಕಿಂಗ್ಪಿನ್ ತೆಲಗಿ ಇನ್ನಿಲ್ಲ
Team Udayavani, Oct 26, 2017, 5:12 PM IST
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಹುಕೋಟಿ ರೂ.ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಅಪರಾಧಿ ಕರೀಂ ಲಾಲ ತೆಲಗಿ ಗುರುವಾರ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ತೆಲಗಿ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ. ಮೆದುಳು ಜ್ವರ ಹಿನ್ನೆಲೆಯಲ್ಲಿ ಹತ್ತು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ತೆಲಗಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
4 ದಿನಗಳ ಹಿಂದೆ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಮಗಳು ಹಾಗೂ ಅಳಿಯ ಸೇರಿ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲೇ ಉಳಿದಿದ್ದರು. ಕಟುಂಬ ಸದಸ್ಯರಿಗೆ ಶವವನ್ನು, ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆಗಳು ಮುಗಿದ ಬಳಿಕ ಹಸ್ತಾಂತರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ನಕಲಿ ಛಾಪಾ ಕಾಗದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರೀಂಲಾಲ ತೆಲಗಿಯನ್ನು ಬಂಧಿಸಲಾಗಿತ್ತು. 12 ರಾಜ್ಯಗಳಲ್ಲಿ ಹತ್ತು ವರ್ಷ 72 ಕೇಂದ್ರಗಳ ಮೂಲಕ ಸಾವಿರಾರು ಕೋಟಿ ರೂ. ವಹಿವಾಟು ನಡೆಸಿದ್ದ ಆತನ ವಿರುದ್ಧದ ಆರೋಪ ಸಾಬೀತಾಗಿ ಶಿಕ್ಷೆ ವಿಧಿಸಿತ್ತು. 55 ವರ್ಷದ ಕರೀಂಲಾಲ ತೆಲಗಿ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 2001ರಲ್ಲಿ ಅಜೆರ್ ನಲ್ಲಿ ಬಂಧಿತನಾಗಿದ್ದ. ಬೆಳಗಾವಿ ಮೂಲದ ತೆಲಗಿ ಸೌದಿ ಅರಬ್ಗ ತೆರಳಿ ಟ್ರಾವೆಲ್ ಏಜೆಂಟಾಗಿ ಕೆಲಸ ಮಾಡಿ ನಂತರ ಮುಂಬೈಗೆ ಬಂದು ಭೂಗತ ಲೋಕದ ಸಂಪರ್ಕ ಗಳಿಸಿ ನಂತರ ನಾಸಿಕ್ನ ಸರ್ಕಾರಿ ಮುದ್ರಣಾಲಯದ ಕೆಲವು ಸಿಬ್ಬಂದಿ ಜತೆ ನಂಟು ಬೆಳೆಸಿ ನಕಲಿ ಛಾಪಾ ಕಾಗದ ಮುದ್ರಣ ದಂಧೆಯಲ್ಲಿ ತೊಡಗಿದ್ದ.
ರಾಜಕೀಯ ನಾಯಕರ ಬೆಂಬಲದಿಂದಲೇ ನಕಲಿ ಛಾಪಾ ಕಾಗದ ಮುದ್ರಣಕ್ಕೆ ಬೇಕಾದ ಕಾಗದ ಆಮದು ಮಾಡಿಕೊಳ್ಳುತ್ತಿದ್ದ. ನಾಸಿಕ್ ಮುದ್ರಣಾಲಯದಲ್ಲಿ ಸರ್ಕಾರಿ ಛಾಪಾ ಕಾಗದದ ಸೀರಿಯಲ್ ನಂಬರ್ಗಳ ಮಾಹಿತಿ ಪಡೆದು ಅದೇ ಸೀರಿಯಲ್ ನಂಬರ್ಗಳ ಛಾಪಾ ಕಾಗದ ಮುದ್ರಿಸಿ ಮುಂಬೈ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದ. ಅದೇ ರೀತಿ ದೇಶಾದ್ಯಂತ ಜಾಲ ಹೊಂದಿದ್ದ. 300ಕ್ಕೂ ಹೆಚ್ಚು ಜನರನ್ನು ಇದಕ್ಕಾಗಿಯೇ ನೇಮಿಸಿಕೊಂಡಿದ್ದ. ಬ್ಯಾಂಕ್, ವಿಮೆ ಕಂಪನಿ, ಷೇರು ವಹಿವಾಟು ಮಾಡುವವರಿಗೆ ಅಗತ್ಯವಾದ ಛಾಪಾ ಕಾಗದ ಪೂರೈಕೆ ಮಾಡುತ್ತಿದ್ದ. 1990ರಲ್ಲೇ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದರೂ ಅಂತಿಮವಾಗಿ 2001ರಲ್ಲಿ ಬಂಧಿಸಲಾಗಿತ್ತು. ಬೆಂಗಳೂರಿನ ಕಲಾಸಿಪಾಳ್ಯಂ, ಕೆ.ಆರ್.ಮಾರುಕಟ್ಟೆ, ಹಲಸೂರು ಗೇಟ್, ಉಪ್ಪಾರಪೇಟೆ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿದ್ದವು.
ಇಕ್ಕಟ್ಟಿಗೆ ಸಿಲುಕಿದ್ದ ಸರ್ಕಾರ: ಹಗರಣ ಬೆಳಕಿಗೆ ಬಂದು ಕರೀಂಲಾಲ ತೆಲಗಿ ಬಂಧನವಾದಾಗ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆಗ ಸಚಿವ ಸಂಪುಟದ ಸಹೋದ್ಯೋಗಿ ರೋಷನ್ಬೇಗ್ ಅವರ ಸಹೋದರ ತೆಲಗಿ ಜತೆ ನಂಟು ಹೊಂದಿದ್ದ ಎಂಬ ಆರೋಪವೂ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಸರ್ಕಾರವೂ ಇಕ್ಕಟ್ಟಿಗೆ ಸಿಲುಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ